ನಾಳೆ ಕೃಷ್ಣಾ ಮೇಲ್ದಂಡೆ ಯೋಜನೆನೀರಾವರಿ ಸಲಹಾ ಸಮಿತಿ ಸಭೆ


Team Udayavani, Jul 16, 2018, 10:18 AM IST

gul-7.gif

ನಾರಾಯಣಪುರ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಆಲಮಟ್ಟಿ , ನಾರಾಯಣಪುರ ಜಲಾಶಯಗಳ ಕಾಲುವೆ ಜಾಲಗಳು ಸೇರಿದಂತೆ ಇತರೆ ಏತ ನೀರಾವರಿ ಯೋಜನೆಗಳ ವ್ಯಾಪ್ತಿಯ ಪ್ರಸ್ತುತ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಹರಿಸುವ ಕುರಿತು ನಿರ್ಣಯ ಕೈಗೊಳ್ಳುವ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆ ಜುಲೈ 17ರಂದು ಆಲಮಟ್ಟಿಯ ಕೆಬಿಜೆಎನ್ನೆಲ್‌ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ ಎಂದು ಅಣೆಕಟ್ಟು ಗೇಟ್ಸ್‌ ಉಪವಿಭಾಗದ ಎಇಇ ಆರ್‌.ಎಲ್‌. ಹಳ್ಳೂರ ತಿಳಿಸಿದ್ದಾರೆ.

ಆಲಮಟ್ಟಿ ಜಲಾಶಯ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆ ನೀರನ್ನು ನೆಚ್ಚಿಕೊಂಡಿರುವ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬಹು ನಿರೀಕ್ಷೆಯ ನೀರಾವರಿ ಸಲಹಾ ಸಮಿತಿ ಸಭೆ ಆಶಾಭಾವನೆ ಮೂಡಿದೆ. ಮಂಗಳವಾರ ನಡೆಯುವ ನೀರಾವರಿ ಸಲಹಾ ಸಮಿತಿ ಸಭೆ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ವಹಿಸಲಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ರಾಯಚೂರು, ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಸೇರಿದಂತೆ ಆಲಮಟ್ಟಿ ಲಾಲ ಬಹದ್ದೂರ ಶಾಸ್ತ್ರೀ ಜಲಾಶಯ, ನಾರಾಯಣಪುರ ಬಸವಸಾಗರ ಜಲಾಶಯ ಆಣೆಕಟ್ಟು ವಲಯದಡಿ ಬರುವ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಉಭಯ ಜಲಾಶಯದಲ್ಲಿ ಸಂಗ್ರಹವಿರುವ ನೀರಿನ ಪ್ರಮಾಣ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ.

ಆಲಮಟ್ಟಿ ಜಲಾಶಯ ಭರ್ತಿಯತ್ತ: ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಿರೀಕ್ಷೆಯಂತೆ ಕೃಷ್ಣಾ ನದಿಗೆ ಪ್ರವಾಹ ಉಂಟಾಗಿದ್ದು, ಪ್ರಸ್ತುತ ಆಲಮಟ್ಟಿ ಲಾಲ ಬಹದ್ದೂರ ಶಾಸ್ತ್ರೀ ಜಲಾಶಯಕ್ಕೆ ಒಂದು ಲಕ್ಷ ಕ್ಯೂಸೆಕ್‌ ನಷ್ಟು ಭಾರೀ ಪ್ರಮಾಣದ ನೀರು (ಒಳಹರಿವು) ಹರಿದು ಬರುತ್ತಿದೆ. ಇದರಿಂದ ಜಲಾಶಯದಲ್ಲಿ ನೀರಿನ ಸಂಗ್ರಹದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.

ಕೆಬಿಜೆಎನ್ನೆಲ್‌ ನೀರಾವರಿ ಅಧಿಕಾರಿಗಳ ಮಾಹಿತಿಯಂತೆ ಆಲಮಟ್ಟಿ ಆಣೆಕಟ್ಟು ಭರ್ತಿಗೆ ಕ್ಷಣ ಗಣನೆ ಶುರುವಾಗಿದೆ. ಪ್ರಸ್ತುತ ಆಲಮಟ್ಟಿ ಜಲಾಶಯದ ಗರಿಷ್ಠ ಮಟ್ಟ 519.6 ಮೀಟರ್‌ ಇದ್ದು, ರವಿವಾರ ಬೆಳಗಿನ ಮಾಹಿತಿಯಂತೆ 517.40 ಮೀಟರ್‌ ತಲುಪಿದೆ. ಜಲಾಶಯ ಭರ್ತಿಗೆ ಕೇವಲ ಎರಡು ಮೀಟರ್‌ ಬಾಕಿ ಇರುವುದರಿಂದ ಒಳಹರಿವಿನ ಪ್ರಮಾಣ ಹೀಗೆ ನಿರಂತರವಾದರೆ ಜಲಾಶಯ ಗರಿಷ್ಠಮಟ್ಟ ಕಾಯ್ದುಕೊಂಡು ಹೆಚ್ಚುವರಿಯಾಗಿ ಬರುವ ನೀರನ್ನು ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಹರಿಬಿಡಲಿದ್ದಾರೆ. ಪ್ರಸ್ತುತ ಬಸವಸಾಗರ ಜಲಾಶಯದಲ್ಲಿ 492.25 ಮೀಟರ್‌ ಗರಿಷ್ಠ ಸಂಗ್ರಹವಿದ್ದು, ರವಿವಾರ 488.85 ಮೀಟರ್‌ನಷ್ಟು ನೀರು ಸಂಗ್ರಹವಿದೆ.

ನದಿ ತೀರದ ಜನರಿಗೆ ಎಚ್ಚರಿಕೆ: ಬಸವಸಾಗರ ಜಲಾಶಯಕ್ಕೆ ಆಲಮಟ್ಟಿ ಜಲಾಶಯದಿಂದ ಯಾವುದೇ ಸಂದರ್ಭದಲ್ಲಿಯೂ ಹೆಚ್ಚುವರಿ ನೀರು ಹರಿದುಬರುವ ಸಾಧ್ಯತೆಗಳಿವೆ. ಇದರಿಂದ ನಾರಾಯಣಪುರ ಜಲಾಶಯದಲ್ಲಿ 488.85 ಮೀಟರ್‌ ನಷ್ಟು ನೀರು ಇದ್ದು, ಯಾವುದೇ ವೇಳೆ ಭರ್ತಿಯಾಗುವ
ಸಾಧ್ಯತೆ ಇರುವುದರಿಂದ ಆಣೆಕಟ್ಟಿಗೆ ಬರುವ ಹೆಚ್ಚುವರಿ ನೀರನ್ನು ಕೃಷ್ಣಾ ನದಿ ತೀರಕ್ಕೆ ಹರಿಬಿಡುವ ಸಾಧ್ಯತೆಗಳಿವೆ.

ನದಿ ಪಾತ್ರದಲ್ಲಿ ಬರುವ ಗ್ರಾಮಗಳ ಜನ-ಜಾನುವಾರುಗಳು ಸೇರಿದಂತೆ ಮೀನುಗಾರರು ನದಿಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ನದಿ ತೀರದಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.