ಬಿಸಿಲೂರು ಮತ್ತೆ ಬರಗಾಲದ ದವಡೆಗ


Team Udayavani, Jul 28, 2018, 1:36 PM IST

gul-1.jpg

ಕಲಬುರಗಿ: ಕಳೆದೆರಡು ವರ್ಷದಿಂದ ಉತ್ತಮ ಮಳೆಯಾಗಿದ್ದ ಬಿಸಿಲೂರು ಕಲಬುರಗಿ ಜಿಲ್ಲೆಯಲ್ಲಿ ಪ್ರಸಕ್ತವಾಗಿ ಮಳೆ ಕೊರತೆ ಅಪಾರ ಪ್ರಮಾಣದಲ್ಲಿ ಎದುರಾಗಿ ಶೇ. 42ರಷ್ಟು ಮಳೆ ಕೊರತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತೆ ಬರಗಾಲವೇ? ಎನ್ನುವಂತಾಗಿದೆ.

ರಾಜ್ಯದ ದಕ್ಷಿಣ ಭಾಗ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಿ ಜಲಾಶಯಗಳೆಲ್ಲ ಭರ್ತಿಯಾಗಿದ್ದರೆ ಇತ್ತ ಕಲಬುರಗಿ ವಿಭಾಗದಲ್ಲಿ ಮಳೆಯಾಗದೇ ಇರುವುದರಿಂದ ನದಿ-ಹಳ್ಳ ಕೊಳ್ಳಗಳು ಬತ್ತಿ ಹೋಗಿದ್ದಲ್ಲದೇ ಬಿತ್ತನೆಯಾದ ಬೆಳೆಗಳು ಒಣಗುತ್ತಿದ್ದರೆ, ಮಳೆ ಕೊರತೆಯಿಂದ ಇನ್ನೂ ಶೇ. 22ರಷ್ಟು ಭೂಮಿಯಲ್ಲಿ ಮುಂಗಾರು ಬಿತ್ತನೆಯಾಗಿಲ್ಲ.

ಕಳೆದ ಮೂರು ವಾರದಿಂದ ಬರೀ ಗಾಳಿ ಅದರಲ್ಲೂ ತಣ್ಣನೇ ಗಾಳಿ ಬೀಸುತ್ತಿದೆಯಾದರೂ ಮಳೆ ಸುರಿಯುತ್ತಿಲ್ಲ. ಮಳೆಗಾಲ ಪ್ರಾರಂಭವಾಗಿ ಎರಡು ತಿಂಗಳಾಗುತ್ತಿದ್ದರೂ ಜಿಲ್ಲೆಯಾದ್ಯಂತ ಒಂದೇ ಒಂದು ಸಲ ಮಳೆ ಸಂಪೂರ್ಣವಾಗಿ ಬಿದ್ದಿಲ್ಲ. ಕೆಲವೊಂದು ಭಾಗದಲ್ಲಂತೂ ಭೂಮಿ ಇನ್ನೂ ಬೇಸಿಗೆ ಕಾಲದಲ್ಲಿಯೇ ಇದ್ದಂತಿದೆ. ಕಲಬುರಗಿ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ಸರಾಸರಿ 120 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಕೇವಲ 70 ಮಿ.ಮೀ ಮಳೆಯಾಗಿದೆ. ಅಂದರೆ ಶೇ. 42ರಷ್ಟು ಕೊರತೆಯಾಗಿದೆ. 

ಕಲಬುರಗಿ ತಾಲೂಕಿನಲ್ಲಿ ಶೇ. 45ರಷ್ಟು, ಜೇವರ್ಗಿ ತಾಲೂಕಿನಲ್ಲಿ ಶೇ. 47ರಷ್ಟು ಹಾಗೂ ಸೇಡಂದಲ್ಲಿ ಶೇ. 50ರಷ್ಟು ಕೊರತೆಯಾಗಿದೆ. ಜೂನ್‌ ಹಾಗೂ ಜುಲೈ ತಿಂಗಳಿನ ಸರಾಸರಿ 234 ಮಿ.ಮೀ ಮಳೆ ಪೈಕಿ 191 ಮಿ.ಮೀ ಮಳೆಯಾಗಿ ಶೇ. 18ರಷ್ಟು ಕೊರತೆಯಾಗಿದೆ.

ಶೇ. 85ರಷ್ಟು ಬಿತ್ತನೆ: ಜಿಲ್ಲೆಯಲ್ಲಿ ಜೂನ್‌ ತಿಂಗಳಿನ ಆರಂಭದಲ್ಲಿ ಜಿಲ್ಲೆಯ ಸೇಡಂ, ಚಿಂಚೋಳಿ, ಆಳಂದ ತಾಲೂಕು ಹಾಗೂ ಚಿಂಚೋಳಿ ತಾಲೂಕಿನ ಭಾಗಶಃ ಭಾಗದಲ್ಲಿ ಮಳೆ ಸುರಿಯಿತು. ಆದರೆ ಕಲಬುರಗಿ ತಾಲೂಕು, ಜೇವರ್ಗಿ ಹಾಗೂ ಅಫಜಲಪುರ ತಾಲೂಕುಗಳಲ್ಲಿ ಮಳೆ ಸುರಿಯಲಿಲ್ಲ. ಮಳೆಯಾದ ತಾಲೂಕುಗಳಲ್ಲಿ ರೈತ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು ಹಾಗೂ ಸೋಯಾಬಿನ್‌ ಬಿತ್ತನೆ ಮಾಡಿದ. ಬೆಳೆಗಳೆಲ್ಲ ಸಮೃದ್ದವಾಗಿ ಮೇಲೆದ್ದಿದ್ದವು.

ನಂತರ ಜುಲೈ ತಿಂಗಳಿನಲ್ಲಿ ಮಳೆ ಬಾರದೇ ಇದ್ದುದ್ದಕ್ಕೆ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿತು. ಈಗಂತು ಒಂದು ವಾರ ಮಳೆ ಬಾರದಿದ್ದರೆ ಬೆಳೆಗಳೆಲ್ಲ ಸಂಪೂರ್ಣ ಒಣಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗುತ್ತದೆ. ಇನ್ನೊಂದೆಡೆ ಬಿದ್ದ ಅಲ್ಪ ಮಳೆಗೆ ಜುಲೈ ಎರಡನೇ ವಾರದಲ್ಲಿ ಕಲಬುರಗಿ, ಜೇವರ್ಗಿ ಹಾಗೂ ಅಫಜಲಪುರ ತಾಲೂಕಿನಲ್ಲಿ ಇರುವ ಸ್ವಲ್ಪ ಹಸಿ ನಡುವೆ ಮಳೆ ಮೇಲೆ ಭಾರ ಹಾಕಿ ಬಿತ್ತನೆ ಮಾಡಲಾಗಿದೆ. ಮೊಳಕೆಯೊಡೆದು ಮೇಲೆ ಬರುತ್ತಿವೆ. ಆದರೆ ಮಳೆ ಅತ್ಯವಶ್ಯಕವಾಗಿದೆ.

ಮುಂಗಾರು ಹಂಗಾಮಿನ ಅಂದಾಜು ಆರು ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಒಟ್ಟಾರೆ 5 ಲಕ್ಷ ಎಕರೆ ಸಮೀಪ ಬಿತ್ತನೆಯಾಗಿದೆ. ಇದರಲ್ಲಿ 3.70 ಲಕ್ಷ ಹೆಕ್ಟೇರ್‌ ತೊಗರಿ ಬಿತ್ತನೆಯಾಗಿದೆ. ಇದು ಕಳೆದ ವರ್ಷಕ್ಕಿಂತ ಶೇ. 15ರಷ್ಟು ಕಡಿಮೆಯಾಗಿದೆ.

ಒಣಗಿದ ಭೀಮೆ: ಮಳೆ ಬಾರದಿದ್ದಕ್ಕೆ ಜಿಲ್ಲೆಯ ಜೀವನಾಡಿ ಭೀಮಾ ನದಿ ಸಂಪೂರ್ಣ ಬತ್ತಿ ಹೋಗಿದೆ. ಕಲಬುರಗಿ ಮಹಾನಗರ ಸೇರಿದಂತೆ ನದಿ ದಂಡೆಯ ಪಟ್ಟಣ ಹಾಗೂ ಗ್ರಾಮಗಳಿಗೂ ಕುಡಿಯುವ ನೀರಿಗೂ ತತ್ವಾರ ಉಂಟಾಗಿದ್ದರಿಂದ ನಾರಾಯಣಪುರ ಜಲಾಶಯದಿಂದ ನೀರು ಹರಿಯ ಬಿಟ್ಟು ರಾಂಪೂರ ಜಲಾಶಯ ಕಾಲುವೆ ಮುಖಾಂತರ ಭೀಮಾ ನದಿಗೆ ಗುರುವಾರದಿಂದ ನೀರು ಹರಿದು ಬಿಡಲಾಗಿದೆ. ಇಂದು ಅಥವಾ ನಾಳೆ ನೀರು ಭೀಮಾ ನದಿಗೆ ನಿಇರು ಹರಿದು ಬಂದು ಸೊನ್ನ, ದೇವಲ್‌ಗಾಣಾಪುರ ಬ್ಯಾರೇಜ್‌ನಲ್ಲಿ ಸಂಗ್ರಹವಾಗಲಿದೆ.

ಉಳಿದಂತೆ ಹೈದ್ರಾಬಾದ ಕರ್ನಾಟಕದ ಪ್ರಮುಖ ಜಲಾಶಯಗಳಾದ ಬೆಣ್ಣೆತೋರಾ, ಅಮರ್ಜಾ, ಭೀಮಾ ಏತ ನೀರಾವರಿ, ಕಾರಂಜಾ ಸೇರಿದಂತೆ ಇತರ ಜಲಾಶಯಗಳು ಬತ್ತಿವೆ. ನೀರಿನ ಮಟ್ಟ ಕೊನೆ ಹಂತಕ್ಕೆ ತಲುಪಿದೆ. ಭೀಮಾ ಏತ ನೀರಾವರಿ ಜಲಾಯಶದ ನೀರಿನ ಕಳೆದ ವರ್ಷ ಇದೇ ಸಮಯಕ್ಕೆ ಜಲಾಶಯಗಳೆಲ್ಲ ಭರ್ತಿಯಾಗಿದ್ದವು. 3.16 ಟಿಎಂಸಿ ಅಡಿ ನೀರು ಸಾಮಾರ್ಥ್ಯವಿರುವ ಭೀಮಾ ಏತ ನೀರಾವರಿ ಜಲಾಶಯದಲ್ಲಿ ಈಗ ಡೆಡ್‌ ಸ್ಟೋರೇಜ್‌ ನೀರು ಮಾತ್ರವಿದೆ. ಹೀಗಾಗಿ ನೀರು ಹರಿಯ ಬಿಡಲಾಗಿದೆ.

ಇದೇ ಪರಿಸ್ಥಿತಿ ಕೆಳದಂಡೆ ಮುಲ್ಲಾಮಾರಿ, ಚುಳುಕಿನಾಲಾ, ಅಮರ್ಜಾ, ಗಂಡೋರಿ ನಾಲಾ ಜಲಾಶಯದಲ್ಲೂ ಇದೆ. ಅದೇ ರೀತಿ ಬೀದರ್‌ ಜಿಲ್ಲೆಯ ಪ್ರಮುಖ ಕಾರಂಜಾ ಜಲಾಶಯದಲ್ಲಿ 7.69 ಟಿಎಂಸಿ ಅಡಿ ನೀರಿನ ಸಂಗ್ರಹಣಾ ಸಾಮಾರ್ಥ್ಯದಲ್ಲಿ 3.49 ಅಡಿ ನೀರಿಗೆ ತಲುಪಿದೆ. ಅರ್ಧಕ್ಕರ್ಧ ಖಾಲಿಯಾಗಿದೆ. ಯಾದಗಿರಿ ಜಿಲ್ಲೆಯ ಹತ್ತಿಕುಣಿ ಜಲಾಶಯದಲ್ಲೂ 0.352 ಟಿಎಂಸಿ ಅಡಿ ನೀರಿನ ಅಡಿ ಪೈಕಿ ಒಂದು ಹನಿ ನೀರಿಲ್ಲದೇ ಸಂಪೂರ್ಣ ಬತ್ತಿ ಹೋಗಿದೆ.

„ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.