ಶರಣಬಸವ ವಿವಿ ವಿಶ್ವದಲ್ಲೇ ವಿಶಿಷ್ಠ ಸ್ಥಾನ ಪಡೆಯಲಿ


Team Udayavani, Jul 30, 2018, 11:20 AM IST

bid-2.jpg

ಕಲಬುರಗಿ: ಕಲ್ಯಾಣ ಕರ್ನಾಟಕದ ನಮ್ಮ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿ ಕಳೆದ ವರ್ಷ ಆರಂಭವಾಗಿರುವ ಶರಣಬಸವ ವಿಶ್ವವಿದ್ಯಾಲಯ ವಿಶ್ವದ ಯಶಸ್ವಿ ಟಾಪ್‌ 100 ವಿವಿಯೊಳಗೆ ಸ್ಥಾನ ಪಡೆದು ಹೊರಹೊಮ್ಮಲಿ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜರಾಯಿ ಖಾತೆ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌ ಆಶಯ ವ್ಯಕ್ತಪಡಿಸಿದರು.

ರವಿವಾರ ಶರಣಬಸವ ವಿಶ್ವವಿದ್ಯಾಲಯದ ಪ್ರಥಮ ಸಂಸ್ಥಾಪನಾ ಸಮಾರಂಭ ಉದ್ಘಾಟಿಸಿ, ವಿವಿಯ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಶರಣಬಸವ ಶಿಕ್ಷಣ ಸಂಸ್ಥೆ ಇಡೀ ವಿಶ್ವವೇ ನೋಡುವಂತೆ ಬೆಳೆದಿದೆ. ಇದರ ಹಿಂದೆ ಸಂಸ್ಥೆಯ ಅಧ್ಯಕ್ಷರೂ ವಿವಿಯ ಕುಲಾಧಿಪತಿಗಳಾದ ಡಾ| ಶರಣಬಸವಪ್ಪ ಅಪ್ಪ ಅವರ ಪರಿಶ್ರಮವೇ ಅಡಗಿದೆ. ಅಲ್ಲದೇ ಶೈಕ್ಷಣಿಕ ಕ್ರಾಂತಿಗಾಗಿಯೇ ಪಣ ತೊಟ್ಟಿರುವುದು ನಿರೂಪಿಸುತ್ತದೆ ಎಂದು ಹೇಳಿದರು.

ಇಂದು ಶಿಕ್ಷಣವೂ ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಶಿಕ್ಷಣ ಹೊಂದಿರದಿದ್ದರೆ ಯಾವುದಕ್ಕೂ ಬಾರದಂತಾಗುತ್ತದೆ. ಶಿಕ್ಷಣ ಹೊಂದಿದ್ದರೆ ದೇಶ-ವಿದೇಶಗಳಲ್ಲಿ ಸಾಧನೆ ತೋರಬಹುದಾಗಿದೆ. ಸಚಿವನಾಗಿ ಮೊದಲ
ಸಮಾರಂಭವಾಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆ ತರುತ್ತಿದೆ ಎಂದರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ| ಎಸ್‌.ಆರ್‌. ನಿರಂಜನ್‌ ಮುಖ್ಯ ಅತಿಥಿಯಾಗಿ ಮಾತನಾಡಿ, ವಿಶ್ವವಿದ್ಯಾಲಯವು ಸಂಶೋಧನೆ, ಕಲಿಕೆ ಹಾಗೂ ಬೋಧನೆಯನ್ನು ಪ್ರಮುಖವಾಗಿ ಅಳವಡಿಸಿಕೊಳ್ಳಬೇಕು. ಖಾಸಗಿ ವಿವಿಗಳಿಗೆ ಅನುದಾನ ಹೆಚ್ಚು ಅವಶ್ಯಕವಾಗಿದೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಸ್ಥೆ ಬಾನೆತ್ತರಕ್ಕೆ ಬೆಳೆಯಲು ಅಪ್ಪಾಜಿ ಅವರ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ| ಎಚ್‌.ಎಂ ಮಹೇಶ್ವರಯ್ಯ ಮಾತನಾಡಿ, ಶೈಕ್ಷಣಿಕವಾಗಿ ಇನ್ನು ತಾಂತ್ರಿಕತೆ ಹೊಂದುವುದು ಬಹಳ ಅಗತ್ಯವಿದೆ. ಶರಣಬಸವ ವಿವಿ ಬೆಳವಣಿಗೆ ನಿಟ್ಟಿನಲ್ಲಿ ಕೇಂದ್ರೀಯ ವಿವಿಯಿಂದ ಯಾವುದೇ ಸಲಹೆ, ಸಹಕಾರ ಬೇಕಿದ್ದಲ್ಲಿ ನೀಡಲು ಸದಾ ಸಿದ್ಧವಿರುವುದಾಗಿ ಪ್ರಕಟಿಸಿದರು.
ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ್‌ ನಿಷ್ಠಿ ಅಧ್ಯಕ್ಷತೆ ವಹಿಸಿ, ವಿವಿಯಲ್ಲಿ ಪೂಜ್ಯ ಡಾ| ಅಪ್ಪ ಅವರ
ಆಶಯಗನುಗುಣವಾಗಿ ಗುಣಮಟ್ಟದ ಶಿಕ್ಷಣ ಮೊದಲ ಮಹತ್ವ ನೀಡಲಾಗುವುದು. ವರ್ಷದೊಳಗೆ ನಿರೀಕ್ಷೆಯಂತೆ
ವಿವಿ ದಾಪುಗಾಲು ಹಾಕುತ್ತಿದೆಯಾದರೂ ಇನ್ನೂ ಹಲವು ಕಾರ್ಯಗಳತ್ತ ದೃಢ ಹೆಜ್ಜೆ ಇಡಬೇಕಾಗಿದೆ ಎಂದು ಹೇಳಿದರು.

ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅವರು ಸಾನ್ನಿಧ್ಯ ವಹಿಸಿ, ಶೈಕ್ಷಣಿಕವಾಗಿ ನಮ್ಮ ಭಾಗ ಹಿಂದುಳಿದಿಲ್ಲ. ಇದಕ್ಕೆ ಕಲಬುರಗಿಯಲ್ಲಿರುವ ವೈದ್ಯಕೀಯ ಕಾಲೇಜುಗಳು ಹಾಗೂ ನಾಲ್ಕು ವಿಶ್ವವಿದ್ಯಾಲಯಗಳೇ ಸಾಕ್ಷಿ ಎಂದು ಹೇಳಿದರು.
ದೂರದೃಷಿಯತ್ತ ವಿವಿ ಕೊಂಡೊಯ್ಯಬೇಕಾಗಿದೆ ಎಂದು ಹೇಳಿದರು.

ಕೃತಿಗಳ ಬಿಡುಗಡೆ: ವಿವಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶರಣಬಸವ ವಿಶ್ವವಿದ್ಯಾಲಯದಿಂದ ಪ್ರಥಮ ಸಂಶೋಧನಾ ಜರ್ನಲ್‌ ಆಗಿ ಪ್ರಕಟಗೊಳ್ಳುತ್ತಿರುವ ಇಂಟರ್‌ ನ್ಯಾಷನಲ್‌ ಮಲ್ಟಿ ಡಿಸಿಪ್ಲೇನರಿ ರಿಸರ್ಚ್‌ ಜರ್ನಲ್‌ ಹಾಗೂ
ಡಾ| ಶಿವರಾಜ ಶಾಸ್ತ್ರೀ ಹೇರೂರ, ಡಾ| ಸಾರಿಕಾದೇವಿ ಕಾಳಗಿ ಮತ್ತು ನಾನಾಸಾಹೇಬ ಸಂಪಾದಕತ್ವದಲ್ಲಿ ರಚನೆಯಾಗಿರುವ ಶರಣಬಸವೇಶ್ವರ ಮಹಾದಾಸೋಹ ಸಂಪದ ಕೃತಿಗಳನ್ನು ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ದತ್ತಾತ್ರೇಯ ಪಾಟೀಲ್‌ ರೇವೂರ, ಎಂ.ವೈ. ಪಾಟೀಲ, ಡಾ| ಉಮೇಶ ಜಾಧವ್‌, ಸುಭಾಷ ಆರ್‌. ಗುತ್ತೇದಾರ, ಖನೀಜ್‌ ಫಾತೀಮಾ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು. ಸಚಿವರು ವಿವಿಯ ಪ್ರಾಸ್ಪೆಕ್ಟ್‌ನು ಬಿಡುಗಡೆಗೊಳಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ಎಸ್‌. ದೇಶಮುಖ ಅವರ 53ನೇ ಜನ್ಮ ದಿನವನ್ನು ಸಮಾರಂಭದ ವೇದಿಕೆ ಮೇಲೆ ಆಚರಿಸಲಾಯಿತು. ಎಸ್‌. ಎಸ್‌. ಪಾಟೀಲ, ರೇವಣಸಿದ್ದಪ್ಪ ಪಾಟೀಲ, ಶಾಂತಲಾ ನಿಷ್ಠಿ, ಡಾ| ವಿ.ಡಿ. ಮೈತ್ರಿ, ಪ್ರೊ.ಎನ್‌.ಎಸ್‌.ದೇವರಕಲ್‌, ಡಾ| ಶಿವದತ್ತ ಹೊನ್ನಳ್ಳಿ ಹಾಜರಿದ್ದರು. ಡಾ| ಅನೀಲಕುಮಾರ ಬಿಡವೆ ಸ್ವಾಗತಿಸಿದರು. ಡಾ| ಲಿಂಗರಾಜ ಶಾಸ್ತ್ರೀ ನಿರೂಪಿಸಿದರು.

ಬೀದರನಲ್ಲಿ ಬಸವೇಶ್ವರ ವಿವಿ ಸ್ಥಾಪನೆಯಾಗಲಿ ಬೀದರ್‌ ಜಿಲ್ಲೆಯಲ್ಲಿ ಮಹಾತ್ಮಾ ಬಸವೇಶ್ವರ ವಿಶ್ವವಿದ್ಯಾಲಯ ಸ್ಥಾಪನೆ
ಮಾಡಲು ಆ ಜಿಲ್ಲೆಯವರು ಮನಸ್ಸು ಮಾಡಬೇಕು. ಒಂದು ವೇಳೆ ಜಿಲ್ಲೆಯವರು ಮುಂದಾಗದಿದ್ದಲ್ಲಿ ತಾವೇ
ಆ ನಿಟ್ಟಿನಲ್ಲಿ ಹೆಜ್ಜೆ ಇಡಲು ಹಿಂದೇಟು ಹಾಕುವುದಿಲ್ಲ. ಕಲ್ಯಾಣ ಕರ್ನಾಟಕ ಇನ್ನೂ ಶೈಕ್ಷಣಿಕವಾಗಿ ಶ್ರೀಮಂತಗೊಳ್ಳಬೇಕಿದೆ.
ಡಾ| ಶರಣಬಸವಪ್ಪ ಅಪ್ಪ, ಕುಲಪತಿಗಳು, ಶರಣಬಸವ ವಿಶ್ವವಿದ್ಯಾಲಯ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.