ವೃದ್ಧೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದವರ ಬಂಧನ


Team Udayavani, Jul 30, 2018, 10:21 AM IST

gul-2.jpg

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಹೊರವಲಯದಲ್ಲಿ 65 ವರ್ಷದ ವೃದ್ಧೆ ಮೇಲೆ ಜು.26ರಂದು ಸಂಜೆ ಅತ್ಯಾಚಾರ ನಡೆಸಿ, ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು 48 ಗಂಟೆಯಲ್ಲಿ ಮಾಡಬೂಳ ಪೊಲೀಸರು ಬಂಧಿಸಿದ್ದಾರೆ. ಸೇಡಂ ತಾಲೂಕಿನ ಸೂರವಾರ್‌ ಗ್ರಾಮದ ಮಲ್ಲಪ್ಪ ಈಶ್ವರಪ್ಪ ತಳವಾರ (26), ದಂಡೋತಿ ಗ್ರಾಮದ ಗಜೇಂದ್ರ ಶಿವಶರಣಪ್ಪ ಬಲಮದೇವರ (24) ಬಂಧಿತ ಆರೋಪಿಗಳು.

ಇಬ್ಬರು ಗುರುವಾರ ಮಧ್ಯಾಹ್ನ ಗ್ರಾಮದ ಹೊರವಲಯದಲ್ಲಿ ಕಂಠ ಪೂರ್ತಿ ಮದ್ಯ ಕುಡಿದಿದ್ದರು. ಇದೇ ಹೊತ್ತಿನಲ್ಲಿ ಹೊಲದ ಕೆಲಸ ಮುಗಿಸಿ ತಲೆ ಮೇಲೆ ಉರುವಲು ಕಟ್ಟಿಗೆಯ ಸಣ್ಣ ಮೂಟೆ ಹೊತ್ತುಕೊಂಡು ಮರಳಿ ಮನೆಗೆ ಬರುತ್ತಿದ್ದ 65ರ ವೃದ್ಧೆಯನ್ನು ಎಳೆದಾಡಿ ರಸ್ತೆಯ ಪಕ್ಕದಲ್ಲಿನ ತೆಗ್ಗಿನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿ ಮಲ್ಲಪ್ಪ ಈಶ್ವರಪ್ಪ ತಳವಾರ ಶುಕ್ರವಾರ ಬೆಳಗ್ಗೆ ಗ್ರಾಮದ ಹೊರವಲಯದಲ್ಲಿ ಕೊಳವೆ ಬಾವಿ ಹತ್ತಿರ ರಕ್ತಸಿಕ್ತವಾದ ಮತ್ತು ಕೆಸರು ತಗುಲಿದ ಬಟ್ಟೆ ತೊಳೆದುಕೊಳ್ಳುತ್ತಿರುವುದನ್ನು ಗ್ರಾಮದ ಯುವಕರು ನೋಡಿದ್ದರು. ನಂತರ ಎಲ್ಲಿ ನನ್ನನ್ನು ಹಿಡಿಯುವರೋ ಎನ್ನುವ ಭಯದಿಂದ ಓಡಲು ಶುರು ಮಾಡಿದ್ದ.

ಈತನೇ ಕೊಲೆ ಮಾಡಿರಬೇಕು ಎಂದು ಶಂಕಿಸಿ ಯುವಕರು ಆತನನ್ನು ಹಿಡಿಯಲು ಪ್ರಯತ್ನಿಸಿದ್ದರು. ಕೂಡಲೇ ಅಲ್ಲಿಂದ ಓಡಿ ಹೋದ ಆರೋಪಿ ಗ್ರಾಮದ ಕಾಗಿಣಾ ನದಿಯ ಹುಲ್ಲಿನಲ್ಲಿ ಅಡಗಿ ಕುಳಿತುಕೊಂಡಿದ್ದ. ಸ್ಥಳಕ್ಕೆ ಆಗಮಿಸಿದ ಮಾಡಬೂಳ ಪಿಎಸ್‌ಐ ಹುಸೇನ್‌ ಬಾಷಾ ಕೂಡಲೇ ಮಳಖೇಡ ಗ್ರಾಮದ ಹಂದಿ ಹಿಡಿಯುವರನ್ನು ಕರೆಯಿಸಿ ಸಿಬ್ಬಂದಿಯೊಂದಿಗೆ ಸಂಜೆವರೆಗೆ ಹುಡುಕಾಟ ನಡೆಸಿದ್ದರು. ಗ್ರಾಮದ ನೂರಾರು ಜನರು ಆರೋಪಿಯ ಹುಡುಕಾಟಕ್ಕೆ ಪೊಲೀಸರಿಗೆ ಸಾಥ್‌ ನೀಡಿದರು.

ಪೊಲೀಸರು ಸಿಡಿ ಮದ್ದು ಸಿಡಿಸಿ ಕಾರ್ಯಚರಣೆ ನಡೆಸಿದರು. ಆದರೆ, ನದಿಯಲ್ಲಿ ದಟ್ಟವಾಗಿ ಬೆಳೆದ ಜೇಕು ಮತ್ತು ಹುಲ್ಲಿನಲ್ಲಿ ಅಡಗಿ ಕುಳಿತ ಆರೋಪಿ ರಾತ್ರಿ ಹೊತ್ತಿನಲ್ಲಿ ಮಳಖೇಡ ಸಮೀಪದ ಬ್ರಿಡ್ಜ್ ಮೇಲಿಂದ ಸೇಡಂ ತಾಲೂಕಿನ ಸೂರವಾರ್‌ ಗ್ರಾಮಕ್ಕೆ ಹೋಗಿದ್ದ. ಆರೋಪಿ ಗ್ರಾಮಕ್ಕೆ ಬರುತ್ತಿದ್ದಂತೆ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಬಂಧಿಸಿದರು. ಇನ್ನೊಬ್ಬ ಆರೋಪಿ ಗಜೇಂದ್ರ ದಂಡೋತಿ ಗ್ರಾಮದಲ್ಲೇ ಸೆರೆಸಿಕ್ಕಿದ್ದಾನೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ, ಹೆಚ್ಚುವರಿ ಎಸ್ಪಿ ಜಯಪ್ರಕಾಶ, ಶಹಾಬಾದ ಡಿವೈಎಸ್ಪಿ ಕೆ. ಬಸವರಾಜ ಮಾರ್ಗದರ್ಶನದಲ್ಲಿ ಸಿಪಿಐ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಡಿ.ಬಿ ಕಟ್ಟಿಮನಿ ನೇತೃತ್ವದಲ್ಲಿ ಮಾಡಬೂಳ ಪಿಎಸ್‌ಐ ಹುಸೇನ್‌ ಬಾಷಾ ಅವರು ಸಿಬ್ಬಂದಿಗಳಾದ ಜಗನ್ನಾಥ ಪಾಟೀಲ, ಬಸಲಿಂಗಪ್ಪ, ರೌಫ್‌, ಮಂಜುನಾಥ ಕಾಶಿ, ಮಹ್ಮದ್‌ ಗೌಸ್‌, ವಿಠ್ಠಲ್‌ ಆರೋಪಿಗಳನ್ನು ಬಂಧಿ ಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಡಬೂಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆ ಮಾಡಿ ಪರಾಯಾಗಿದ್ದ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕುಡಿದ ಅಮಲಿನಲ್ಲಿ ಅತ್ಯಾಚಾರವೆಸಗಿ ವೃದ್ಧೆಯನ್ನು ಕೊಲೆ ಮಾಡಿದ್ದಾರೆ.
 ಹುಸೇನ್‌ ಬಾಷಾ ಮಾಡಬೂಳ, ಪಿಎಸ್‌ಐ

ಗ್ರಾಮದ ಹೊರವಲಯದಲ್ಲಿ ಹೊಲದ ಕೆಲಸ ಮುಗಿಸಿಕೊಂಡು ಬರುತ್ತಿದ್ದ 65ರ ವೃದ್ಧೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ವಿಷಯ ತಿಳಿದು ಗ್ರಾಮದಿಂದ ಹೊಲಗಳಿಗೆ ಹೋಗುವ ಜನರು ಭಯಭೀತರಾಗಿದ್ದರು. ಪೊಲೀಸರು ಆರೋಪಿಗಳನ್ನು ಹಿಡಿದಿದ್ದರಿಂದ ನಿಟ್ಟುಸಿರು ಬಿಡುವಂತಾಗಿದೆ. ಅವರಿಗೆ ಕಠಿಣ ಶಿಕ್ಷೆಯಾಗಬೇಕು.
 ಅಬ್ದುಲ್‌ ಹಮೀದ್‌ ಯಾದಗಿರಿ, ದಂಡೋತಿ ಗ್ರಾಮದ ನಿವಾಸಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.