ಸುರಿಯದ ಮಳೆ: ಬಾಡುತ್ತಿದೆ ಬೆಳೆ


Team Udayavani, Jul 31, 2018, 5:09 PM IST

gul-1.jpg

ಶಹಾಬಾದ: ಮಳೆ ಕೊರತೆಯಿಂದಾಗಿ ಬೆಳೆ ಬಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಜೂನ್‌ ತಿಂಗಳ ಮೊದಲ ವಾರದಲ್ಲಿ ಬಿದ್ದ ಮೊದಲ ಮಳೆಯಿಂದ ಹರ್ಷಗೊಂಡಿದ್ದ ರೈತರು ಹೆಸರು ಬಿತ್ತನೆ ಮಾಡಿದ್ದರು. ಬಿತ್ತನೆ ಮಾಡಿದ ನಂತರ ಸುಮಾರು ತಿಂಗಳಾಗುತ್ತ ಬಂದರೂ ಇದುವರೆಗೂ ಮಳೆಯಾಗದಿರುವುದರಿಂದ ರೈತರು ತುಂಬಾ ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರಿನಲ್ಲಿ ಉತ್ತಮ ಮಳೆಯಾಗಿತ್ತು. ಅಲ್ಲದೇ ಹೆಚ್ಚಿನ
ಮಳೆಯಾಗಿದ್ದರಿಂದ ತಗ್ಗು ಪ್ರದೇಶದ ಹೊಲ ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿತ್ತು.

ಈ ಬಾರಿ ಮಳೆ ಬಾರದಿರುವುದರಿಂದ ಬಾಡುವ ಹಂತ ತಲುಪಿದೆ. ಕೆಲವು ರೈತರು ಹೊಲ ಹರಗಿದ್ದಾರೆ. ಮಳೆ ಇಲ್ಲದೇ ಇರುವುದರಿಂದ ಆತಂಕಗೊಳಗಾದ ಮತ್ತೆ ನಿರಾಶೆಯಾಗಿದ್ದಾರೆ. ಹವಾಮಾನ ಇಲಾಖೆ ವರದಿಯಂತೆ ಈ ಬಾರಿ ಉತ್ತಮ ಮಳೆಯಾಗುತ್ತದೆ ಎಂಬ ಆಶಾಭಾವನೆಯಿಂದ ರೈತರು ಬಿತ್ತನೆ ಮಾಡಿದ್ದರು. ಆದರೆ ಬಿತ್ತನೆ ಮಾಡಿದ ನಂತರ ಮೊಳಕೆ ಒಡೆದು ಬಂದ ಬೆಳೆಗೆ ಸುಮಾರು ಒಂದು ತಿಂಗಳವರೆಗೆ ಮಳೆಯಾಗಲಿಲ್ಲ. ಆದರೆ ಆಗೊಮ್ಮ ಈಗೊಮ್ಮೆ ಸುರಿದ ಮಳೆಯಿಂದ ಹೇಗೋ ಚತರಿಸಿಕೊಂಡು ಬೆಳೆದ ಬೆಳೆಗೆ ತೇವಾಂಶದ ಕೊರತೆಯಿಂದ ಬಾಡುವ ಹಂತಕ್ಕೆ ತಲುಪಿವೆ. ಎಲೆಗಳು ಉದುರಿ ಹೋಗಿವೆ.

ಹೆಸರು, ಉದ್ದು, ಎಳ್ಳು, ಸಜ್ಜೆ ಮಳೆಯಿಲ್ಲದೇ ಒಣಗಿ ಹೋಗಿರುವುದರಿಂದ ರೈತರು ಬೆಳೆ ಹರಗುತ್ತಿದ್ದಾರೆ. ಅಲ್ಪ
ಮಳೆಯಾದ ಕೆಲವು ಪ್ರದೇಶಗಳಲ್ಲಿ ಕಾಯಿಯಾಗಿವೆ. ಆದರೆ ತೇವಾಂಶದ ಕೊರತೆಯಿಂದ ಕಾಯಿ ಕಟ್ಟಿಲ್ಲ. ಹತ್ತಿ ಬೆಳೆ ಮಾತ್ರ ಎರಡು ಗೇಣಿನಷ್ಟು ಬೆಳೆದು ನಿಂತಿದೆ. ಈಗ ಮಳೆಯಾದರೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಇನ್ನೂ ತೊಗರಿ ಬಿತ್ತನೆ ಮಾಡಿ, ಇಪ್ಪತ್ತು ದಿನಗಳಾದರೂ ಮಳೆಯಾಗದಿರುವುದರಿಂದ ರೈತರು ಕಣ್ಣೀರು ಸುರಿಸುವಂತಾಗಿದೆ.ಅಲ್ಲದೇ ರೈತರು ಮುಂದೆ ಒಳ್ಳೆಯ ಮಳೆ ಬರುವ ಆಶಾಭಾವನೆಯಿಂದ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ವರ್ಷ ಮಳೆಯೂ ಇಲ್ಲ. ಕಳೆಯೂ ಇಲ್ಲ. ಇದರಿಂದ ದನಗಳಿಗೆ ಮೇವಿಲ್ಲದಿದ್ದರೆ ಮಾರಾಟ ಮಾಡಲು ಕೃಷಿಕರು ಮುಂದಾಗುತ್ತಾರೆ. ಇಷ್ಟೆಲ್ಲ ಕಷ್ಟಗಳು ಇದ್ದರೂ ರೈತರು ಆಶಾಭಾವನೆಯಿಂದ ಮಳೆರಾಯನನ್ನು ಎದುರು ನೋಡುತ್ತಿದ್ದಾರೆ.

ಹೋಬಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಿಲ್ಲದೇ ರೈತರು ಸಂಕಷ್ಟದಲ್ಲಿದ್ದಾರೆ. ಮಳೆಯಿಲ್ಲದೇ ಬೆಳೆ ಒಣಗಿ ಹೋಗಿದೆ. ಆದರೂ ಆಶಾಭಾವನೆಯಿಂದ ರೈತರು ಮಳೆರಾಯನಿಗಾಗಿ ಕಾದು ಕುಳಿತ್ತಿದ್ದಾರೆ ಎಂದು ನಾಗಣ್ಣ ರಾಂಪೂರೆ ತಿಳಿಸಿದ್ದಾರೆ. ಬೆಳೆಗೆ ತಕ್ಕಷ್ಟು ಮಳೆ ಬಂದಿದ್ದರೆ, ಬೆಳೆ ಉತ್ತಮವಾಗಿರುತ್ತಿತ್ತು. ಅಲ್ಲದೇ ನಿರೀಕ್ಷಿತ ಮಟ್ಟದಲ್ಲಿ ಇಳುವರಿ ಪಡೆಯಬಹುದಾಗಿತ್ತು. ಆದರೆ ಮಳೆಯಾಗದ ಕಾರಣ ಅರಳುವ ಮುಂಚೆಯೇ ಹೆಸರು ಬೆಳೆಗಳ ಎಲೆಗಳು ಉದುರಿ ಹೋಗಿವೆ. ಸಾಲ ಮಾಡಿದ ರೈತ ಮತ್ತೆ ಸಂಕಷ್ಟಕ್ಕೆ ಒಳಗಾಗಗಿದ್ದಾರೆ ಎಂದು ಮೋನಪ್ಪ ತೆಲಗಬಾಳ ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.