ಜೀವನದ ಏರುಪೇರುಗಳಿಗೆ ನಾವೇ ಹೊಣೆಗಾರರು
Team Udayavani, Aug 24, 2018, 12:30 PM IST
ಕಲಬುರಗಿ: ಜೀವನದಲ್ಲಿ ಆಗುವ ಏರು ಪೇರುಗಳಿಗೆ ನಾವೇ ಹೊಣೆಗಾರರೇ ಹೊರತು ಬೇರೊಬ್ಬರಲ್ಲ ಎಂದು ಹೈದ್ರಾಬಾದ್ನ ಯುವರಾಜ ಮೋಟಿವೇಟರ್ ಸಂಸ್ಥೆ ತರಬೇತುದಾರ ನಾಗಪ್ರಸಾದ ಹೇಳಿದರು.
ನಗರದ ಅಪ್ಪಾ ಪಬ್ಲಿಕ್ ಶಾಲೆ ಆವರಣದ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ಶರಣಬಸವ ವಿಶ್ವವಿದ್ಯಾಲಯದಿಂ ದ ಹಮ್ಮಿಕೊಂಡಿರುವಇಂಡಕ್ಷನ್ ಪ್ರೋಗ್ರಾಂ ತರಬೇತಿ ಕಾರ್ಯಕ್ರಮದಲ್ಲಿ ಮೋಟಿವೇಶನ್ ಎನ್ನುವ ವಿಷಯ ಕುರಿತು ಅವರು ಉಪನ್ಯಾಸ ನೀಡಿದರು.
ನಾವು ಪ್ರಯತ್ನಿಸಿದರೆ ನಮ್ಮ ಹಣೆಬರಹ ನಾವೇ ಬರೆದುಕೊಳ್ಳಬಹುದು. ಇದಕ್ಕೆ ಬೇಕಾಗಿರುವುದು ಪ್ರಬಲ ಇಚ್ಛಾಶಕ್ತಿ. ಬಯಸಿದರೆ ನಮ್ಮ ಸಾವನ್ನೂ ಮುಂದೂಡಬಹುದು. ಈ ನಿಟ್ಟಿನಲ್ಲಿ ನಮ್ಮ ಯೋಚನೆಗಳು, ಯೋಜನೆಗಳು ಇರಬೇಕು ಎಂದರು.
ಜೀವನದಲ್ಲಿ ಗುರಿ ಇರದೆ ಇದ್ದರೆ ಏನನ್ನು ಸಾಧಿಸಲು ಸಾಧ್ಯವಿಲ್ಲ. ಗುರಿ ಮುಟ್ಟುವ ವರೆಗೆ ಅನೇಕ ಅಡಚಣೆಗಳು, ತೊಂದರೆಗಳು ಎದುರಾಗುತ್ತವೆ. ಅವುಗಳಿಂದ ಪಾರಾಗುವುದರಲ್ಲಿಯೇ ಜೀವನದ ಕೌಶಲ್ಯ ಅಡಗಿದೆ. ಪ್ರಯತ್ನಪಡದ ಹೊರತು ಏನೂ ಲಭಿಸುವುದಿಲ್ಲ. ಅದಕ್ಕಾಗಿ ನಿರಂತರ ಆಶಾವಾದಿಯಾಗಿದ್ದು, ಕಠಿಣ ಪರಿಶ್ರಮದಿಂದ ಜೀವನದ ಗುರಿ ತಲುಪಬೇಕು ಎಂದು ಹೇಳಿದರು.
ಭೂಮಿ ಮೇಲೆ ಇರುವ ನಿಜವಾದ ದೇವರುಗಳೆಂದರೆ ತಂದೆ-ತಾಯಿ. ಅವರ ನೋವು-ನಲಿವಿನಲ್ಲಿ ಭಾಗಿಗಳಾಗಿ ಕುಟುಂಬದವರ ಜೊತೆ ಕಾಲ ಕಳೆಯಬೇಕು. ನಾವು ಸಾಮಾನ್ಯವಾಗಿ ಹಣ ಖರ್ಚು ಮಾಡುವುದನ್ನು ಕಲಿತಿದ್ದೇವೆಯೇ ಹೊರತು ಗಳಿಸುವುದು, ಉಳಿಸುವುದನ್ನು ಕಲಿತಿಲ್ಲ. ಮೊದಲು ಹಣವನ್ನು ಮಿತವಾಗಿ ಖರ್ಚು ಮಾಡುವುದನ್ನು ಕಲಿಯಿರಿ ಎಂದು ಸಲಹೆ ನೀಡಿದರು.
ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ| ಲಿಂಗರಾಜ ಶಾಸ್ತ್ರೀ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಸ್ನಾತಕ ಪದವಿ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ