ಅತಿವೃಷ್ಟಿ-ಅನಾವೃಷ್ಟಿಗೆ ಕ್ರಮ: ದೇಶಪಾಂಡೆ


Team Udayavani, Aug 24, 2018, 12:47 PM IST

gul-2.jpg

ಶಹಾಪುರ: ಒಂದೆಡೆ ಅತಿವೃಷ್ಟಿ, ಇನ್ನೊಂದೆಡೆ ಅನಾವೃಷ್ಟಿ ಸಮಸ್ಯೆ ರಾಜ್ಯದಲ್ಲಿ ಎದುರಾಗಿದೆ. ಎಲ್ಲದಕ್ಕೂ ಪರಿಹಾರ ಒದಗಿಸುವ ಗುರುತರ ಜವಾಬ್ದಾರಿ ಸರ್ಕಾರಕ್ಕಿದ್ದು, ಈ ದಿಸೆಯಲ್ಲಿ ಆಡಳಿತ ಚುರುಕಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು.

ಯಾದಗಿರಿ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿಯಿಂದ ಅತಿವೃಷ್ಟಿಯಾಗಿದ್ದು, ವಿಜಯಪುರ ಜಿಲ್ಲೆಯ ತಾಲೂಕು, ಯಾದಗಿರಿ ಜಿಲ್ಲೆಯ ತಾಲೂಕುಗಳು ಸೇರಿದಂತೆ ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ.
 
ಮಳೆ ಅಭಾವದಿಂದ ಈ ಭಾಗದಲ್ಲಿ ತೊಗರಿ, ಹತ್ತಿ, ಹೆಸರು ಬೆಳೆ ಹಾಳಾಗಿದೆ. 2.16 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇ. 80ರಷ್ಟು ಬಿತ್ತನೆಯಾಗಿದ್ದು, ಜುಲೈ, ಆಗಸ್ಟ್‌ ತಿಂಗಳಲ್ಲಿ ಮಳೆಯಾಗದೆ ರೈತರ ನಿರೀಕ್ಷೆ ಹುಸಿಯಾಗಿದೆ. ಬಿತ್ತಿದ ಬೆಳೆ ರೈತರ ಕೈಗೆಟುವುಕುವುದು ಕಷ್ಟಕರವಾಗಿದೆ ಎಂದು ಹೇಳಿದರು.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ, ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸುರಪುರ ಶಾಸಕ ರಾಜುಗೌಡ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಸಮಸ್ಯೆ ಬಗ್ಗೆ ವಿವರವಾಗಿ ತಿಳಿಸಿದ್ದು, ಸದ್ಯದ ಮಟ್ಟಿಗೆ ಶಹಾಪುರ, ಸುರಪುರದಲ್ಲಿ ಬರದ ಲಕ್ಷಣ ಸ್ಪಷ್ಟವಾಗಿರುವುದು ಗೋಚರವಾಗಿದೆ ಎಂದರು.
 
ಆ. 29 ರೊಳಗೆ ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾ ಧಿಕಾರಿಗಳು ಸೂಕ್ತ ಗಮನ ಹರಿಸಿ ರೈತರಿಗೆ ತೊಂದರೆಯಾಗದಂತೆ ಪಾರದರ್ಶಕ ವರದಿ ಸಲ್ಲಿಸಲಿದ್ದಾರೆ. ಕೇಂದ್ರದ ಮಾರ್ಗಸೂಚಿ ಅನುಸರಿಸಿ ಮುಖ್ಯಮಂತ್ರಿಗಳೊಡನೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. 165 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಎನ್‌.ಡಿ.ಆರ್‌.ಎಫ್‌. ಗೈಡ್‌ಲೈನ್‌ ಪ್ರಕಾರ ಕೊಳವೆಬಾವಿಗಳ ದುರಸ್ತಿ, ಪೈಪ್‌ಲೈನ್‌ ಒತ್ತಡ ಪರೀಕ್ಷೆ, ಟ್ಯಾಂಕರ್‌ನಿಂದ ನೀರು ಸರಬರಾಜು, ಪೈಪ್‌ಲೈನ್‌ ದುರಸ್ತಿಗಾಗಿ ಜಿಲ್ಲಾಧಿಕಾರಿಗೆ ಸೂಕ್ತ ಅನುದಾನ ಬಿಡುಗಡೆ ಮಾಡುವ ಅವಕಾಶಗಳಿದ್ದು, ಅದನ್ನು ಬಳಸಿಕೊಂಡು ನೀರಿನ ಸಮಸ್ಯೆ ನೀಗಿಸಬೇಕು.ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ಅಡಿಯಲ್ಲಿ ಕುಡಿಯುವ ನೀರಿಗೆ ಅವಕಾಶ ನೀಡಲಾಗಿದೆ. ಜಿಲ್ಲಾಡಳಿತ, ಜಿಪಂ ಕುಡಿಯುವ ನೀರು ಕುರಿತು ಗಮನ ಹರಿಸಬೇಕು.  ನೀರು ಶುದ್ಧೀಕರಣ ಘಟಕಗಳನ್ನು ಸಮಗ್ರವಾಗಿ ವ್ಯವಸ್ಥಿತಗೊಳಿಸಿ ಆರಂಭಿಸಬೇಕು ಎಂದು ಸೂಚಿಸಿದರು.

ಭಾಗಶಃ ಮನೆಬಿದ್ದವರಿಗೂ ಸೂಕ್ತ ಪರಿಹಾರ ನೀಡಿ: ಪ್ರಕೃತಿ ವಿಕೋಪದಿಂದ ಭಾಗಶಃ ಮನೆ ಬಿದ್ದವರಿಗೆ ಕಾಟಾಚಾರದ ಹಣ ನೀಡಬೇಡಿ. ಅವರಿಗೂ ಮನೆ ನಿರ್ಮಿಸಿಕೊಳ್ಳಲು ಅನುಕೂಲವಾಗಲಿ, ಈಗಾಗಲೇ ಜಿಲ್ಲೆಗೆ 5 ಕೋಟಿ ರೂ. ಮೀಸಲಿಡಲಾಗಿದೆ. ಯೋಜನೆಗಳು ಬಡವರಿಗೆ ವರದಾನವಾಗಬೇಕು ಸರ್ಕಾರದ ನಿಯಮಗಳು ಪಾಲನೆಯಾಗಬೇಕು. ಭಾಗಶಃ ಮನೆ ಬಿದ್ದವರಿಗೂ ಶೇ.75 ರಷ್ಟು ಹಣ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
 
ಉದ್ಯೋಗ ಭರವಸೆ ಯೋಜನೆಗಳ ಅವಕಾಶ: ಹೈಕ ಭಾಗದ ಜನ ಗುಳೆ ಹೋಗುವುದನ್ನು ತಪ್ಪಿಸಲು ಕೃಷಿ ಕಾರ್ಮಿಕರಿಗೆ, ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿಯಲ್ಲಿ ಭರವಸೆಯ ಅಭಯ ನೀಡಬೇಕು. ಅನುದಾನದ ಸದ್ಬಳಕೆಯಾಗಬೇಕು. ಯೋಜನೆಗೆ ತಕ್ಕಂತೆ ರಾಜ್ಯದಲ್ಲಿ ಹಣಕಾಸಿನ ಸ್ಥಿತಿ ಉತ್ತಮವಾಗಿದ್ದು, ಅಧಿಕಾರಿಗಳು ಸೂಕ್ತ ನಿರ್ವಹಣೆ ಮಾಡುವ ಮೂಲಕ ನಾಗರಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ, ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಶಾಸಕ ವೆಂಕಟರೆಡ್ಡಿ ಮುದ್ನಾಳ, ಶಾಸಕ ರಾಜುಗೌಡ, ಜಿ.ಪಂ.ಅಧ್ಯಕ್ಷ ಬಸರಡ್ಡಿ ಪಾಟೀಲ ಅನಪೂರ, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ್‌, ಜಿಲ್ಲಾಧಿಕಾರಿ ಕುರ್ಮಾರಾವ್‌, ಎಸ್‌ಪಿ ಯಡಾ
ಮಾರ್ಟಿನ್‌ ಮಾರ್ಬನಿಂಗ್‌ ಇದ್ದರು.

ಬೆಳೆವಿಮೆ ಯೋಜನೆ ತಾರತಮ್ಯ ಸರಿಪಡಿಸುವೆ 
ಇನ್ಸುರೆನ್ಸ್‌ ಕಂಪನಿಯವರು ಸಮಸ್ಯೆ ಸೃಷ್ಟಿ ಮಾಡುತ್ತಿರುವುದರಿಂದ ನಿಜವಾಗಿ ಬೆಳೆ ಹಾನಿಯಾದ ರೈತರಿಗೆ ಬೆಳೆವಿಮೆ ಸಿಗುತ್ತಿಲ್ಲ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವೆ. ಯಾದಗಿರಿ ಜಿಲ್ಲೆಯಲ್ಲಿ ಅಧಿಕಾರಿಗಳ ಕೊರತೆಯಿದ್ದು, ಸರಿದೂಗಿಸುವ ಪ್ರಯತ್ನ ಮಾಡುವೆ. ನೂತನ ತಾಲೂಕುಗಳು ರಚನೆಯಾದ ನಂತರ ಸಿಬ್ಬಂದಿ ನೇಮಕ ಸೇರಿದಂತೆ ಸಮರ್ಪಕ ಅನುದಾನ ಬಿಡುಗಡೆಯಾಗುತ್ತಿಲ್ಲ ಎನ್ನುವ ಕುರಿತು ಜನರಿಂದ ಬೇಸರ ವ್ಯಕ್ತವಾಗಿದ್ದು ನಿಜ. ಹೀಗಾಗಿ ಹೊಸ ತಾಲೂಕು ಕಾರ್ಯ ನನೆಗುದಿಗೆ ಬಿದ್ದಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುವೆ.
ಆರ್‌.ವಿ. ದೇಶಪಾಂಡೆ, ಕಂದಾಯ ಸಚಿವ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.