ಗುಲ್ಬರ್ಗ ವಿವಿ ಉತ್ತರ ಪತ್ರಿಕೆಮೌಲ್ಯಮಾಪನಕ್ಕೆ ಬಾರ್‌ಕೋಡಿಂಗ್‌


Team Udayavani, Aug 31, 2018, 11:31 AM IST

gul-4.jpg

ಕಲಬುರಗಿ: ಕೆಟ್ಟ ಮೇಲೆ ಬುದ್ಧಿ ಬಂತು ಎನ್ನುವ ಹಾಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪರೀಕ್ಷಾ ಸುಧಾರಣೆಯಲ್ಲಿ ಒಂದೊಂದೇ ಹೆಜ್ಜೆ ಇಡುತ್ತಿದ್ದು, ಈಗಾಗಲೇ ಕಳೆದ ವರ್ಷ ಪರೀಕ್ಷೆಯನ್ನು ಕ್ಲಸ್ಟರ್‌ ಪದ್ಧತಿ ಜಾರಿಗೆ ತಂದಿದ್ದ ವಿವಿ ಈಗ ಮೌಲ್ಯಮಾಪನಕ್ಕೆ ಬಾರ್‌ ಕೋಡಿಂಗ್‌ ಪದ್ಧತಿ ಕಾರ್ಯಾನುಷ್ಠಗೊಳಿಸಲು ಮುಂದಾಗಿದೆ.

ಮೌಲ್ಯಮಾಪನದಲ್ಲಿ ಯಾವುದೇ ನಿಟ್ಟಿನ ಹಸ್ತಕ್ಷೇಪ ತಡೆಯುವುದರ ಜತೆಗೆ ಅಂಕಗಳ ನೀಡಿಕೆ ಹಾಗೂ ಫಲಿತಾಂಶದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಉತ್ತರ ಪತ್ರಿಕೆಗೆ ಬಾರ್‌ ಕೋಡಿಂಗ್‌ ಕೊಟ್ಟು ತದನಂತರ ಮೌಲ್ಯಮಾಪನ ಮಾಡುವ ಸುಧಾರಣೆ ಕಾರ್ಯಕ್ಕೆ ಕೈ ಹಾಕಲಾಗಿದೆ. ಈಗಾಗಲೇ ವಿವಿ ವಿದ್ಯಾವಿಷಯಕ ಪರಿಷತ್ತು ಹಾಗೂ ಸಿಂಡಿಕೇಟ್‌ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ಮುಂಬರುವ ನವೆಂಬರ್‌ ತಿಂಗಳಿನಿಂದ ನಡೆಯುವ ವಿವಿಯ ಎಲ್ಲ ಹಂತದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಿಂದ ಜಾರಿಗೆ ತರಲು ದೃಢ ನಿರ್ಧಾರ ಕೈಗೊಳ್ಳಲಾಗಿದೆ. 

ಈಗಾಗಲೇ ಬಾರ್‌ ಕೋಡಿಂಗ್‌ ಮೌಲ್ಯಮಾಪನ ಪದ್ಧತಿಯು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯ ಮೌಲ್ಯಮಾಪನದಲ್ಲಿದೆಯಲ್ಲದೇ ರಾಜ್ಯದ ವಿವಿಧ ವಿವಿಗಳಲ್ಲೂ ಕಾರ್ಯರೂಪದಲ್ಲಿದೆ. ಪರೀಕ್ಷೆ ಹಾಗೂ
ಉತ್ತರ ಪತ್ರಿಕೆ ಮೌಲ್ಯಮಾಪನದಲ್ಲಿನ ಅವಾಂತರ, ಹಸ್ತಕ್ಷೇಪ ತಡೆಯುವ ಜತೆಗೆ ದಕ್ಷತೆ ತರುವ ನಿಟ್ಟಿನಲ್ಲಿ ಈಗ ಗುಲ್ಬರ್ಗ ವಿವಿ ಕಾಯ್ಗತಗೊಳಿಸಲು ಸಜ್ಜಾಗಿದೆ.

ಉತ್ತರ ಪತ್ರಿಕೆಗಳಿಗೆ ಬಾರ್‌ ಕೋಡಿಂಗ್‌ ನೀಡುವ ಹಾಗೂ ತದನಂತರ ಅಂಕಗಳ ಪಟ್ಟಿ ಸಲ್ಲಿಸುವ ಮಹತ್ವದ ಕಾರ್ಯವನ್ನು ಏಜೆನ್ಸಿಗೆ ವಹಿಸುವ ನಿಟ್ಟಿನಲ್ಲಿ ಈಗಾಗಲೇ ವಿವಿ ಮೂರ್‍ನಾಲ್ಕು ಏಜೆನ್ಸಿಗಳೊಂದಿಗೆ ಒಂದು ಹಂತದ ಮಾತುಕತೆ ನಡೆಸಿದೆ. ಮೂಲಗಳ ಪ್ರಕಾರ ಪ್ರತಿಷ್ಠಿತ ಏಜೆನ್ಸಿಯೊಂದನ್ನು ಕಾರ್ಯ ವಹಿಸುವ ಕುರಿತಾಗಿ ಅಂತಿಮಗೊಂಡಿದೆ ಎನ್ನಲಾಗಿದೆ.
 
ಎಷ್ಟು ವಿದ್ಯಾರ್ಥಿಗಳು?: ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಬಾರ್‌ ಕೋಡಿಂಗ್‌ ಪದ್ಧತಿ ಜಾರಿಗೆ ತಂದರೆ ಉತ್ತರ ಪತ್ರಿಕೆ ಯಾವ ವಿದ್ಯಾರ್ಥಿ ಎಂಬುದಾಗಿ ಮೌಲ್ಯಮಾಪಕರಿಗೆ ಗೊತ್ತಾಗುವುದಿಲ್ಲ. ಇಲ್ಲಿ ಸಂಪೂರ್ಣ ಪಾರದರ್ಶಕತೆ ತರಬಹುದಾಗಿದೆಯಲ್ಲದೇ ವಿನಾಕಾರಣ ಪರೀಕ್ಷಾಂಗ ವಿಭಾಗದ ಸಿಬ್ಬಂದಿ ಹಸ್ತಕ್ಷೇಪ ಮಾಡುವುದನ್ನು ತಡೆಗಟ್ಟಬಹುದಾಗಿದೆ. ಒಟ್ಟಾರೆ ಈ ಪದ್ಧತಿ ಕಾರ್ಯಾನುಷ್ಠಾನವಾದರೆ ವಿವಿ ವ್ಯಾಪ್ತಿಯ 1.20 ಲಕ್ಷ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳೆಲ್ಲ ಬಾರ್‌ ಕೋಡಿಂಗ್‌ಗೆ ಒಳಪಡುತ್ತವೆಯಲ್ಲದೇ ವಸ್ತುನಿಷ್ಠ ಫಲಿತಾಂಶಕ್ಕೆ ಕಾರಣವಾಗುತ್ತದೆ.

ಕಾರ್ಯರೂಪಕ್ಕೆ ತರದಂತೆ ಒತ್ತಡ: ಸುಧಾರಣೆ ನಿಟ್ಟಿನಲ್ಲಿ ಮುಂದಾಗಿರುವ ವಿವಿಯ ಈ ಕಾರ್ಯಕ್ಕೆ ವಿವಿ ವ್ಯಾಪ್ತಿಯ
ಕೆಲವು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೇ ಕಾರ್ಯರೂಪಕ್ಕೆ
ಬಾರದಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಸಾಲದು ಎಂಬುದಕ್ಕೆ ಜನಪ್ರತಿನಿಧಿಗಳ ಮೂಲಕವೂ ಹೇಳಿಸುತ್ತಿದ್ದಾರೆ ಎಂಬುದು ವರದಿಯಾಗಿದೆ.

ಇನ್ಮುಂದೆ ಕಠಿಣ: ತಮ್ಮದೇ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಅವರಿವರ ಸಹಾಯದಿಂದ ಪರೀಕ್ಷೆ ಬರೆಯುವುದಕ್ಕೆ ಕ್ಲಷ್ಟರ್‌ ಪದ್ಧತಿಯಿಂದ ಬ್ರೇಕ್‌ ಹಾಕಿದ್ದಕ್ಕೆ ವಿದ್ಯಾರ್ಥಿ ಸಮುದಾಯ ಹಾಗೂ ಕೆಲವು ಖಾಸಗಿ ಕಾಲೇಜ್‌ಗಳಿಂದ ವಿರೋಧ ವ್ಯಕ್ತವಾಗಿತ್ತಲ್ಲದೇ ಈ ಸುಧಾರಣಾ ಕಾರ್ಯ ಮೈಗೂಢಿಸಿಕೊಳ್ಳದೇ ರಂಗೋಲಿ ಕೆಳಗೆ ನುಸುಳಿದಂತೆ ಬೇರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯದೇ ತಮ್ಮ ಕಾಲೇಜ್‌ನಲ್ಲಿಯೇ ಪರೀಕ್ಷೆ ಬರೆದು ತದನಂತರ ದಂಡ ತುಂಬಲಾಗಿತ್ತು. ಆದರೆ ಇದಕ್ಕೂ ಕಡಿವಾಣ ಈಗ ಹಾಕಲಾಗುತ್ತಿದೆ.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ಬಾರ್‌ ಕೋಡಿಂಗ್‌ ಪದ್ಧತಿ ಜಾರಿಗೆ ತರುತ್ತಿರುವುದನ್ನು ಅವಲೋಕಿಸಿದರೆ ಗುಲ್ಬರ್ಗ ವಿವಿಯಿಂದ ಹೇಗಾದರೂ ಪದವಿ ಪಡೆಯಬಹುದು ಎಂಬ ಲೆಕ್ಕಾಚಾರ ಹೊಂದಿದ್ದವರಿಗೆ ಇನ್ಮುಂದೆ ಕೈ ಕೊಡುವ ಸಾಧ್ಯತೆಗಳೇ ಹೆಚ್ಚು. ಒಟ್ಟಾರೆ ಬಾರ್‌ ಕೋಡಿಂಗ್‌ ಪದ್ಧತಿಯ ಮೂಲ ಆಶಯ ಸಮರ್ಪಕ ಜಾರಿಯಾಗಿ ಶೈಕ್ಷಣಿಕ ಮಟ್ಟ ಸುಧಾರಣೆಗೆ ನಾಂದಿ ಹಾಡಬೇಕೆಂದು ವಿವಿಯ ಕೆಲ ಪ್ರಾಧ್ಯಾಪಕರು ಹಾಗೂ ಶಿಕ್ಷಣ ಪ್ರೇಮಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂಬರುವ ನವೆಂಬರ್‌ ತಿಂಗಳಿನಿಂದ ನಡೆಯುವ ವಿವಿಯ ಎಲ್ಲ ಹಂತದ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳ ಉತ್ತರ ಪತ್ರಿಕೆ ಮೌಲ್ಯಮಾಪನಕ್ಕೆ ಬಾರ್‌ ಕೋಡಿಂಗ್‌ ನೀಡುವ ಪದ್ಧತಿ ಜಾರಿಗೆ ತರಲು ವಿವಿ ನಿರ್ಧರಿಸಿದೆ. ಈ ಸಂಬಂಧ ಏಜೆನ್ಸಿಗಳೊಂದಿಗೆ ಮಾತುಕತೆ ನಡೆದಿದೆ. ಒಟ್ಟಾರೆ ಈ ಪದ್ಧತಿ ಕಾರ್ಯಾನುಷ್ಠಾನಕ್ಕೆ ಬರಲಿದೆ.
ಪ್ರೊ| ಡಿ.ಎಂ. ಮದರಿ, ಕುಲಸಚಿವರು (ಮೌಲ್ಯಮಾಪನ) ಗುಲ್ಬರ್ಗ ವಿವಿ

„ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.