ಹೈ.ಕ. ಇತಿಹಾಸ ರಚನೆಗೆ ಶೀಘ್ರ ಕಾರ್ಯಾಗಾರ


Team Udayavani, Aug 31, 2018, 11:56 AM IST

gul-6.jpg

ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶದ ಸಮಗ್ರ ಇತಿಹಾಸ ರಚಿಸುವ ನಿಟ್ಟಿನಲ್ಲಿ ಶೀಘ್ರವೇ ಕಾರ್ಯಾಗಾರ ಏರ್ಪಡಿಸಿ ಪರಿಣಿತರಿಂದ ಅಭಿಪ್ರಾಯ ಸಂಗ್ರಹಿಸಿ ಇತಿಹಾಸ ರಚನೆಗೆ ಮುಂದಾಗಬೇಕೆಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ತಿಳಿಸಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಇತಿಹಾಸ ರಚನಾ ಸಮಿತಿ ಸಭೆಯ ಅಧ್ಯಕ್ಷತೆ
ವಹಿಸಿ ಮಾತನಾಡಿದ ಅವರು, ಹೈದ್ರಾಬಾದ ಕರ್ನಾಟಕದ ಇತಿಹಾಸದ ಮಾಹಿತಿ ಸಂಗ್ರಹಣೆ ಸುಲಭವಾದ ಕೆಲಸವಲ್ಲ. ಈ ಭಾಗದ ಎಲ್ಲ ವಿಷಯಗಳನ್ನು ಸಂಗ್ರಹಿಸುವುದು ಅವಶ್ಯಕವಾಗಿದೆ. ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಯ ವಿದ್ವಾಂಸರನ್ನು ಕಾರ್ಯಾಗಾರಕ್ಕೆ ಆಹ್ವಾನಿಸಿ ಅವರಿಂದ ಸಮಗ್ರ ಚಿತ್ರಣ ಪಡೆಯಬೇಕು ಎಂದರು.

ಹೈದ್ರಾಬಾದ ಕರ್ನಾಟಕದ ಇತಿಹಾಸವು ಕನ್ನಡ, ಉರ್ದು, ಪರ್ಶಿಯನ್‌, ಮರಾಠಿ ಹಾಗೂ ಈ ಭಾಗದ ಇನ್ನಿತರೆ ಭಾಷೆಗಳಲ್ಲಿ ಸಂಗ್ರಹವಾಗಿದೆ. ಅವುಗಳನ್ನು ಸಂಗ್ರಹಿಸುವ ಮೂಲಕ ಹೈ.ಕ. ಭಾಗದ ಸಂಪೂರ್ಣ ಇತಿಹಾಸದ ಮಾಹಿತಿ ಸಂಗ್ರಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾಧಿಕಾರಿಗಳಿಗೆ ತಮ್ಮ ಜಿಲ್ಲೆಗೆ ಸಂಬಂಧಿಸಿದ ಇತಿಹಾಸದ ದಾಖಲೆಗಳನ್ನು ಸಲ್ಲಿಸಲು ತಿಳಿಸಬೇಕು. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹೈ.ಕ. ಭಾಗದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಸಮಿತಿಗಳನ್ನು ರಚಿಸಿದ್ದಲ್ಲಿ ಮಾಹಿತಿ ಸಂಗ್ರಹಕ್ಕೆ ಅನುಕೂಲವಾಗುವುದು ಎಂದರು. ಇತಿಹಾಸ ರಚನಾ ಸಮಿತಿಯಲ್ಲಿ ಹೈಕ ಭಾಗದ ಎಲ್ಲ ಜಿಲ್ಲೆಯ ಪರಿಣಿತರು ಈ ಸಮಿತಿ ಸದಸ್ಯರಾಗಿದ್ದಾರೆ. ಆಯಾ ಜಿಲ್ಲೆಯ ಸದಸ್ಯರು ಜಿಲ್ಲಾ ಸಮಿತಿಗಳಲ್ಲಿ ಪಾಲ್ಗೊಂಡು
ಇತಿಹಾಸ ರಚನೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿ ನೀಡಿದಲ್ಲಿ, ವಿಭಾಗ ಮಟ್ಟದ ಸಮಿತಿಯಲ್ಲಿ ಚರ್ಚಿಸಿ ಕ್ರೋಢೀಕರಿಸಲು ಅನುಕೂಲವಾಗುವುದು ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಡಾ| ಸಿ. ಸೋಮಶೇಖರ, ಹೈದ್ರಾಬಾದಕರ್ನಾಟಕ ಇತಿಹಾಸ ರಚನಾ ಸಮಿತಿ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಸದಸ್ಯರಾದ ಡಾ| ಮಾಜಿದ ಡಾಗಿ, ಎನ್‌.ಎ. ವಹಾಬ್‌ ಅಂದಲೀಬ್‌, ಡಾ| ಮೊಹಮ್ಮದ ನಜರುಲ್ಲಾ ಬಾರಿ, ಡಾ| ಬಿ.ಸಿ. ಮಹಾಬಲೇಶ್ವರಪ್ಪ, ಡಾ| ರಾಜೇಂದ್ರ ಪ್ರಸಾದ, ಕೆ.ಎಸ್‌.ಎನ್‌. ಚಿಕ್ಕೆರೂರು ಪಾಲ್ಗೊಂಡಿದ್ದರು.  ಸಮಿತಿ ಸದಸ್ಯರ ಸಲಹೆ  ಸಮಿತಿ ಸದಸ್ಯರು ಕೆಲವು ನಿರ್ದಿಷ್ಟ ಕ್ಷೇತ್ರದಲ್ಲಿ ಪರಿಣಿತರಾಗಿದ್ದು, ಅವರಿಗೆ ಇಷ್ಟವಿರುವ ಕ್ಷೇತ್ರಗಳಲ್ಲಿ ತೊಡಗಿಸಬೇಕು. ಅಂದರೆ, ಹೈಕ ಸ್ವಾತಂತ್ರ್ಯಾ ಚಳವಳಿ ಇತಿಹಾಸ, ಹೈಕ ಕರ್ನಾಟಕ ರಾಜ್ಯದಲ್ಲಿ ವಿಲೀನವಾದ ಇತಿಹಾಸಗಳಂತಹ ವಿಷಯಗಳು.

 ಹೈದ್ರಾಬಾದ ಕರ್ನಾಟಕ ಇತಿಹಾಸಕ್ಕೆ ಸಂಬಂಧಿಸಿದಂತೆ ಹಲವಾರು ಪುಸ್ತಕಗಳಿದ್ದು, ಅವುಗಳನ್ನು ಸಂಗ್ರಹಿಸಿ ಗ್ರಂಥಾಲಯ ಸ್ಥಾಪಿಸಬೇಕು. ಹೈದ್ರಾಬಾದ ಕರ್ನಾಟಕ ಇತಿಹಾಸ ಅತಿ ಪುರಾತನವಾಗಿದ್ದು, ಈ ಭಾಗಕ್ಕೆ ಹಲವು ರಾಜಮಹಾರಾಜರು, ಬ್ರಿಟಿಷ್‌ ಅಧಿಕಾರಿಗಳು, ಬಹಮನಿ ಸುಲ್ತಾನರು, ನಿಜಾಮರು ಕೊಡುಗೆಗಳನ್ನು
ನೀಡಿದ್ದಾರೆ. ಈ ಇತಿಹಾಸದ ಅಧ್ಯಯನ ಕೈಗೊಂಡು ಸಾಮಾಜಿಕ ವ್ಯವಸ್ಥೆ, ಐತಿಹಾಸಿಕ ವಿಷಯಗಳನ್ನು ಸಂಗ್ರಹಿಸಿ ಈ ಭಾಗದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು.  ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯಾ ಪೂರ್ವ ಹಾಗೂ ನಂತರದ ಇತಿಹಾಸ ಸಂಗ್ರಹಿಸಿ ಸಮಿತಿ ಸದಸ್ಯರಿಗೆ ವಹಿಸಿದರೆ ಅನುಕೂಲವಾಗುವುದು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.