ರಫೆಲ್ ಯುದ್ಧ ವಿಮಾನ ಖರೀದಿ ಅವ್ಯವಹಾರ ವಿರುದ್ಧ ಹೋರಾಟ
Team Udayavani, Sep 3, 2018, 11:55 AM IST
ಕಲಬುರಗಿ: ಕೇಂದ್ರ ಸರ್ಕಾರವು ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ 41 ಸಾವಿರ ಕೋಟಿ ರೂ.ಗಳನ್ನು ಬೊಕ್ಕಸಕ್ಕೆ ಹಾನಿ ಮಾಡಿದ್ದಲ್ಲದೇ, ಅವ್ಯವಹಾರ ಎಸಗಿದೆ. ಅಲ್ಲದೆ ಇತರೆ ಜನವಿರೋಧಿ ನೀತಿಗಳನ್ನು ಹಮ್ಮಿಕೊಂಡಿದೆ.
ಇವೆಲ್ಲವುಗಳ ವಿರುದ್ದ ಯುವ ಕಾಂಗ್ರೆಸ್ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಯುವ ಘಟಕದ ಪದಾಧಿಕಾರಿಗಳು ತಿಳಿಸಿದರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಯುವ ಘಟಕದ ಸಭೆಯಲ್ಲಿ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ನಡೆದ ಅವ್ಯವಹಾರ ಕುರಿತಾದ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿದ ಪದಾಧಿಕಾರಿಗಳು ಇದೇ ವೇಳೆ ಹೋರಾಟದ ನಿರ್ಧಾರವನ್ನು ಪ್ರಕಟಿಸಿದರು.
ಕೇಂದ್ರ ರಕ್ಷಣಾ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ರಫೆಲ್ ವಿಮಾನ ಖರೀದಿ ಮಾಡಲಾಗಿದೆ. ಈ ಕುರಿತು ಸಂಸತ್ತು ಹಾಗೂ ರಾಜ್ಯಸಭೆಯಲ್ಲೂ ವಿಪಕ್ಷ ಕಾಂಗ್ರೆಸ್ ಪ್ರಶ್ನೆ ಕೇಳಿದ್ದಲ್ಲದೇ ವಾಗ್ಧಾಳಿ ನಡೆಸಿದ್ದರೂ ಪ್ರಧಾನಿಯಾಗಲಿ, ರಕ್ಷಣಾ ಸಚಿವರಾಗಲಿ ಬಾಯಿ ಬಿಟ್ಟಿಲ್ಲ. ಈ ವಿಷಯವನ್ನು ಜನತೆ ಮುಂದಿಡಲು ಯುವ ಕಾಂಗ್ರೆಸ್ ಹೋರಾಟಕ್ಕೆ ಇಳಿದಿದೆ ಎಂದು ಯುವ ಘಟಕದ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ ತಿಳಿಸಿದರು.
ಹಿಂದಿನ ಸರ್ಕಾರ 126 ವಿಮಾನಗಳನ್ನು ಖರೀದಿಸಲು ನಿರ್ಧರಿಸಿತ್ತು. ಆದರೆ ಈಗಿನ ಕೇಂದ್ರ ಸರ್ಕಾರ ಏಕಾಏಕಿ ರಕ್ಷಣಾ ಇಲಾಖೆಯ ಎಲ್ಲ ನಿಯಮ ಉಲ್ಲಂಘಿಸಿ ದುಬಾರಿ ದರದಲ್ಲಿ ಒಂದೊಂದು ವಿಮಾನಕ್ಕೆ 529 ಕೋ.ರೂ.
ನೀಡಿ 36 ವಿಮಾನಗಳನ್ನು ಪಡೆದಿರುವುದು ಹಾಗೂ ಯಾವುದೇ ಅನುಭವ ಇಲ್ಲದ ಅನೀಲ ಅಂಬಾನಿಯ ರಿಲಾಯನ್ಸ್ ಕಂಪನಿಗೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದೊಂದು ರಕ್ಷಣಾ ಇಲಾಖೆಯಲ್ಲಿ ದೊಡ್ಡ ಭ್ರಷ್ಟಾಚಾರವಾಗಿದೆ ಎಂದು ಆರೋಪಿಸಿದರು.
ಎಲ್ಲ ತಾಲೂಕು ಕೇಂದ್ರಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಈ ಕುರಿತು ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಮುಖಂಡರಾದ ಡಾ| ಕಿರಣ ದೇಶಮುಖ, ಸಂತೋಷ ದಣ್ಣೂರ, ಮಜಹರ್ ಅಲ್ಲಂಖಾನ್, ಪ್ರವೀಣ ಪಾಟೀಲ ಹರವಾಳ, ಪ್ರಶಾಂತ ಮಾಲಿಪಾಟೀಲ, ಚೇತನ ಸೋಮಶೇಖರ ಗೋನಾಯಕ, ಫಾರುಕ್ ಮನಿಯಾರ್, ವಿಶಾಲ ಪಾಟೀಲ, ಶಿವಾನಂದ ಹೊನಗುಂಟಿ, ಶರಣು ವಾರದ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!