ಗುರುವಿನ ಮುಖಾಂತರ ಶಿಕ್ಷಣ ಅವಶ್ಯ: ಡಿಗ್ಗಾವಿ
Team Udayavani, Sep 6, 2018, 5:12 PM IST
ಕಲಬುರಗಿ: ಜೀವನದಲ್ಲಿ ಜನ್ಮ ನೀಡಿದ ತಂದೆ-ತಾಯಿ ಹಾಗೂ ಶಿಕ್ಷಣ ಕಲಿಸಿದ ಗುರುಗಳ ಋಣವನ್ನು ಯಾವತ್ತು ಮುಟ್ಟಿಸಲಿಕ್ಕಾಗದು, ವಾಪಸ್ಸು ಕೊಡಲಿಕ್ಕಾಗದು ಎಂದು ರಾಷ್ಟ್ರಪ್ರಶಸ್ತಿ ವಿಜೇತೆ ಶಿಕ್ಷಕಿ ಪ್ರಮಿಳಾಬಾಯಿ ವಿ. ಡಿಗ್ಗಾವಿ
ಹೇಳಿದರು.
ಖಣದಾಳದ ಶರಣಮ್ಮ ಡಿಗ್ಗಾವಿ ಸ್ಮರಣಾರ್ಥದ ಶ್ರೀಗುರು ವಿದ್ಯಾಪೀಠ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ಮನುಷ್ಯ ಉನ್ನತ ಸ್ಥಾನಕ್ಕೆ ಹೋಗಲು ಶಿಕ್ಷಕರ ಪಾತ್ರವೇ ಬಹುಮುಖ್ಯವಾಗಿದೆ. ಗುರಿ ಮುಟ್ಟಲು ಗುರುವಿನ ಮುಖಾಂತರ ಶಿಕ್ಷಣ ಅವಶ್ಯಕವಿದೆ. ಇದೇ ಕಾರಣದ ಹಿನ್ನೆಲೆಯಲ್ಲಿ ಮುಂದೆ ಗುರಿ ಇರಬೇಕು, ಹಿಂದೆ ಗುರು ಇರಬೇಕು ಎನ್ನಲಾಗುತ್ತದೆ ಎಂದರು.
ತಂದೆ-ತಾಯಿ ಹಾಗೂ ಶಿಕ್ಷಕರಿಗೆ ಸದಾ ಗೌರವ ಕೊಡಬೇಕು. ವಿದ್ಯೆಯಿಂದ ಎಲ್ಲ ಪಡೆಯುವ ನಾವು ಶಿಕ್ಷಣವನ್ನು ಅತಿ ಶ್ರದ್ಧೆ ಹಾಗೂ ಆಸಕ್ತಿಯಿಂದ ಕಲಿಯಬೇಕು. ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಚರಿತ್ರೆ ಓದಿ ಅದರ ಹಾದಿಯಲ್ಲಿ ಮುನ್ನಡೆಯಬೇಕು ಎಂದು ಹೇಳಿದರು. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಸವರಾಜ ಡಿಗ್ಗಾವಿ, ಸದಸ್ಯರಾದ ನಾಗರತ್ನ ಬಿ. ಡಿಗ್ಗಾವಿ, ಪ್ರಾಂಶುಪಾಲರಾದ ಡಾ| ಪಿ.ಎಂ. ಶಿವಕುಮಾರ, ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಪಾರ್ವತಿ ಪಾಟೀಲ ಇದ್ದರು. ಇದೇ ವೇಳೆ ಸಂಸ್ಥೆಯ ಎಲ್ಲ ಶಿಕ್ಷಕ ವರ್ಗದವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು