ಕೆಎಂಎಫ್‌ ಮಾದರಿ ತೊಗರಿ ಮಂಡಳಿ ಅಭಿವೃದ್ಧಿಗೆ ಒತ್ತಾಯ


Team Udayavani, Sep 7, 2018, 11:01 AM IST

gul-1.jpg

ಕಲಬುರಗಿ: 371ನೇ (ಜೆ) ವಿಧಿ ಪರಿಣಾಮಕಾರಿ ಜಾರಿ, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವಂತಾಗಲು ಮಧ್ಯಪ್ರದೇಶದಲ್ಲಿ ಜಾರಿಯಲ್ಲಿರುವ ಭಾವಾಂತರ ಯೋಜನೆ ಕಾರ್ಯಾನುಷ್ಠಾನ ತರುವಂತೆ ಹಾಗೂ ಬಂದ್‌ ಆಗಿರುವ ದಾಲ್‌ಮಿಲ್‌ಗ‌ಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ಇತರ ಬೇಡಿಕೆಗಳಿಗೆ ಸ್ಪಂದಿಸುವಂತೆ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಸಿಸಿಐ) ಗುರುವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಒತ್ತಾಯಿಸಿತು.

ಮಾಜಿ ಸಚಿವ, ಹೈದ್ರಾಬಾದ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ, ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಸಿ. ಪಾಟೀಲ, ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ಹಾಗೂ ಇತರ ಸಂಘ ಸಂಸ್ಥೆಗಳ ಅಧ್ಯಕ್ಷರು, ತಂತ್ರಜ್ಞರನ್ನು ಒಳಗೊಂಡ ಸುಮಾರು 60 ಜನರ ಬೃಹತ್‌ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹೈದ್ರಾಬಾದ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಸ್ಪಂದಿಸಬೇಕೆಂದು ಆಗ್ರಹಿಸಿತು.

ಬೆಂಬಲ ಬೆಲೆಯಲ್ಲಿ ಕೃಷಿ ಧಾನ್ಯ ಖರೀದಿ ಮಾಡುತ್ತಿರುವುದರಿಂದ ದ್ವಿದಳ ಧಾನ್ಯ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮಧ್ಯಪ್ರದೇಶದಲ್ಲಿ ಜಾರಿಯಲ್ಲಿರುವ ಭಾವಾಂತರ ಯೋಜನೆ ಕರ್ನಾಟಕ ರಾಜ್ಯದಲ್ಲೂ ಜಾರಿಗೆ ತಂದರೆ ರೈತರ ಜತೆಗೆ ವ್ಯಾಪಾರಿಗಳಿಗೂ ಸಹಾಯವಾಗುತ್ತದೆ.

ಅಲ್ಲದೆ ತೊಗರಿ ಬೇಳೆ ಬೆಲೆ ಕುಸಿತದಿಂದ ಹೈ.ಕ ಭಾಗದಲ್ಲಿರುವ ಶೇ. 90ರಷ್ಟು ದಾಲ್‌ಮಿಲ್‌ಗ‌ಳು ಮುಚ್ಚಿವೆ. ಹೀಗಾಗಿ ದಾಲ್‌ಮಿಲ್‌ ಮಾಲೀಕರು ಬೀದಿಗೆ ಬಂದಿದ್ದಾರೆ. ಇದಕ್ಕಾಗಿ ಪುನಶ್ಚೇತನ ವರದಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವಿಶೇಷ ಪ್ಯಾಕೇಜ್‌, ವಿದ್ಯುತ್‌ ದರ ಸಬ್ಸಿಡಿ ಮುಂತಾದ ಸೌಲಭ್ಯಗಳಿಗೆ ಶಿಫಾರಸ್ಸು ಮಾಡಲಾಗಿದೆ. ಇದಕ್ಕೆ ಸರ್ಕಾರ ತುರ್ತಾಗಿ ಸ್ಪಂದಿಸಬೇಕಾಗಿದೆ ಎಂದು ಸಿಎಂ ಗಮನಕ್ಕೆ ತರಲಾಯಿತು. ತುಮಕೂರುದಲ್ಲಿ ನಿಮ್‌ ಸ್ಥಾಪನೆಯಾಗಿದೆ. ಆದರೆ ಕಲಬುರಗಿಯನ್ನು ಸಂಪೂರ್ಣ ಕೈ ಬಿಡಲಾಗಿದೆ. ಇದನ್ನು ಸೇರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನಿಸಬೇಕು.

ಅದೇ ರೀತಿ ಕಲಬುರಗಿಯ ವಿಮಾನ ನಿಲ್ದಾಣ ಉಡಾನ್‌ ಯೋಜನೆಗೆ ಸೇರ್ಪಡೆಯಾಗಲು, ವಿಭಾಗೀಯ ರೈಲ್ವೇ ಕಚೇರಿ ಕಾರ್ಯಾರಂಭಕ್ಕೆ ಕೇಂದ್ರದ ಮೇಲೆ ಒತ್ತಡ ಹಾಕುವುದು, ಇಎಸ್‌ಐ ಆಸ್ಪತ್ರೆಯಲ್ಲಿ ಏಮ್ಸ್‌ ಸ್ಥಾಪನೆಗೆ ಆಸಕ್ತಿ ತೋರುವುದು, ಕೆಎಂಎಫ್‌ ಮಾದರಿಯಲ್ಲಿ ತೊಗರಿ ಮಂಡಳಿ ಅಭಿವೃದ್ಧಿಪಡಿಸುವುದು ಸೇರಿದಂತೆ ಇತರ ಬೇಡಿಕೆಗಳಿಗೆ ಆಸಕ್ತಿ ವಹಿಸಬೇಕೆಂದು ನಿಯೋಗದ ಮುಖಂಡರು ಆಗ್ರಹಿಸಿದರು.

ನಿಯೋಗದಲ್ಲಿ ಎಚ್‌ಕೆಸಿಸಿಐ ಪದಾಧಿಕಾರಿಗಳಾದ ಶರಣು ಪಪ್ಪಾ, ಶಿವರಾಜ ಇಂಗಿನಶೆಟ್ಟಿ, ಮನೀಶ ಎಂ. ಜಾಜಿ, ಅಣ್ಣಾರಾವ ಮಾಲಿಪಾಟೀಲ, ವೆಂಕಟ ಚಿಂತಾಮಣಿರಾವ್‌, ರಾಯಚೂರಿನ ರಜಾಕ್‌ ಉಸ್ತಾದ, ಬೀದರ್‌ನ ಬಿ.ಜಿ. ಶೆಟಕಾರ, ಮುಖಂಡರಾದ ಬಸವರಾಜ ಇಂಗಿನ್‌, ತಂತ್ರಜ್ಞರಾದ ಛಾಯಾ ದೇಗಾಂವಕರ್‌, ಬಸವರಾಜ ಕುಮೂರ, ಸಂಗೀತಾ ಕಟ್ಟಿ ಮುಂತಾದವರಿದ್ದರು

ಮೂರು ದಿನ ಕಲಬುರಗಿಯಲ್ಲಿರುವೆ 371ನೇ (ಜೆ) ವಿಧಿ ಪರಿಣಾಮಕಾರಿ ಜಾರಿ ಹಾಗೂ ಹೈ.ಕ ಭಾಗದ ಅಭಿವೃದ್ಧಿ ಕುರಿತು ಚರ್ಚಿಸಲು ಕಲಬುರಗಿಯಲ್ಲಿಯೇ ಮೂರು ದಿನ ಇದ್ದು ಪರಾಮರ್ಶಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಜಿ ಸಚಿವ ವೈಜನಾಥ ಪಾಟೀಲ ಹಾಗೂ ಎಚ್‌ಕೆಸಿಸಿಐ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.