ಪಿಒಪಿ ಮೂರ್ತಿ ನಿಷೇಧಕ್ಕಿಲ್ಲವೇ ಬೆಲೆ


Team Udayavani, Sep 7, 2018, 11:25 AM IST

gul-2.jpg

ಕಲಬುರಗಿ: ರಾಜ್ಯದಲ್ಲಿ ಜಾರಿಯಿರುವ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಮೂರ್ತಿಗಳ ಉತ್ಪಾದನೆ ಮತ್ತು ಮಾರಾಟ ನಿಷೇಧಕ್ಕೆ ಕಲಬುರಗಿಯಲ್ಲಿ ಬೆಲೆಯೇ ಇಲ್ಲದಂತಾಗಿದೆ. ಗಣೇಶೋತ್ಸವಕ್ಕೆ ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು, ನಗರದ ಎಲ್ಲೆಡೆ ರಾಸಾಯನಿಕಯುಕ್ತ ಬಣ್ಣ-ಬಣ್ಣಗಳ ಗಣೇಶ ಮೂರ್ತಿಗಳ ನಿರ್ಮಾಣ ಭರಾಟೆ ಜೋರಾಗಿದೆ.

ಸೆ.13ರಂದು ಗಣೇಶ ಚತುರ್ಥಿ ನಿಮಿತ್ತ ಎಲ್ಲೆಡೆ ಭರದ ಸಿದ್ಧತೆ ನಡೆಯುತ್ತಿವೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ಉಪಯೋಗಿಸುವ ವಿಷಪೂರಿತ ರಾಸಾಯನಿಕ ಬಣ್ಣ, ವಸ್ತುಗಳಿಂದ ನೀರಿನ ಮಾಲಿನ್ಯ ತೀವ್ರವಾಗುತ್ತಿದೆ ಎಂದು
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪಿಒಪಿ ಮೂರ್ತಿಗಳ ಉತ್ಪಾದನೆ ಹಾಗೂ ಮಾರಾಟವನ್ನು ನಿಷೇಧಿಸಿದೆ. ಆದರೆ,
ಕಲಬುರಗಿಯಲ್ಲಿ ಇದರ ಪಾಲನೆಯೇ ಆಗುತ್ತಿಲ್ಲ. ನಗರದ ಪ್ರಮುಖ ರಸ್ತೆಗಳ ಬದಿಗಳಲ್ಲಿ ರಾಜಾರೋಷವಾಗಿ ಪಿಒಪಿ
ಮೂರ್ತಿಗಳ ತಯಾರಿಕೆ ನಡೆಯುತ್ತಿದೆ. ಆದರೆ ಇದಕ್ಕೆ ಸಂಬಂಧಪಟ್ಟ ಇಲಾಖೆ ಅಥವಾ ಅಧಿಕಾರಿಗಳಾಗಲಿ ಕಡಿವಾಣ ಹಾಕುವ ಗೋಜಿಗೆ ಮುಂದಾಗಿಲ್ಲ.

ನಗರದ ಕೇಂದ್ರ ಬಸ್‌ ನಿಲ್ದಾಣ ರಸ್ತೆ, ಅಫಜಲಪುರ ರಸ್ತೆಯ ಬಿದ್ದಾಪುರ ಕಾಲೋನಿ ಸೇರಿದಂತೆ ಹಲವು ಕಡೆಗಳಲ್ಲಿ ರಾಜಸ್ಥಾನ ಸೇರಿದಂತೆ ಇನ್ನಿತರ ರಾಜ್ಯಗಳ ಜನತೆ ಅನೇಕ ದಿನಗಳಿಂದ ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಹೈದ್ರಾಬಾದ್‌ನಂತಹ ನಗರಗಳಿಂದ ತರಹೇವಾರಿ ಬಣ್ಣಗಳು, ಮಿಂಚು ತಂದು ಗಣಪನ ಮೂರ್ತಿಗಳಿಗೆ ಹಚ್ಚಿ ಸಿದ್ಧಪಡಿಸಿ ಇಟ್ಟಿದ್ದಾರೆ. ಇನ್ನೂರು, ಮುನ್ನೂರು ರೂ. ಗಳಿಂದ ಹಿಡಿದು 50 ಸಾವಿರ ರೂ.ಗೂ ಮೇಲ್ಪಟ್ಟು ವೆಚ್ಚದ ಮೂರ್ತಿಗಳನ್ನು ತಯಾರಿಸಲಾಗಿದೆ.

ಕ್ರಮಕ್ಕೆ ಮುಂದಾಗದ ಅಧಿಕಾರಿಗಳು: ನಗರದಲ್ಲಿ ಪಿಒಪಿ ಮೂರ್ತಿಗಳನ್ನು ತಯಾರಿಸುವುದು ಕಂಡುಬರುತ್ತಿರುವುದರಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಥವಾ ಮಹಾನಗರ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಅಲ್ಲದೇ ಪಿಒಪಿ ಮೂರ್ತಿಗಳಿಂದ ಆಗುವ ಅನಾಹುತಗಳ ಬಗ್ಗೆ ಸಾರ್ವಜನಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಂಡಿಲ್ಲ. ಕನಿಷ್ಠ ಪಕ್ಷ ಪಿಒಪಿ ಮೂರ್ತಿ ತಯಾರಿಸುವರ ವಿರುದ್ಧ ಕಾರ್ಯಾಚರಣೆ ನಡೆಸುವಂತೆ ಪೊಲೀಸ್‌ ಇಲಾಖೆಗೂ ಯಾವುದೇ ರೀತಿಯ ನಿರ್ದೇಶನವನ್ನು ಅಧಿಕಾರಿಗಳು ನೀಡದಿರುವುದನ್ನು ನೋಡಿದರೆ ಪರಿಸರ ಸ್ನೇಹಿ ಗಣೇಶೋತ್ಸವ ಬರೀ ಹೇಳಿಕೆಗೆ ಮಾತ್ರ ಸಿಮೀತ ಎಂಬುದು ಇದು ನಿರೂಪಿಸುತ್ತದೆ.

ಪರಿಸರ ಅಧಿಕಾರಿ ಇಲ್ಲ: ಮಾಲಿನ್ಯ ನಿಯಂತ್ರಣ ಇಲಾಖೆಯ ಜಿಲ್ಲಾ ಪರಿಸರ ಅಧಿಕಾರಿ ಸದ್ಯ ನಗರದಲ್ಲೇ ಇಲ್ಲ. ಕಳೆದ
ಸೋಮವಾರ ಜಿಲ್ಲಾ ಪರಿಸರ ಅಧಿಕಾರಿ ದಿವಾಕರ ಎನ್ನುವರು ವರ್ಗಾವಣೆಗೊಂಡಿದ್ದು, ಇವರ ಸ್ಥಾನಕ್ಕೆ ಮಂಜಪ್ಪ ಎನ್ನುವರು ಬಂದಿದ್ದಾರೆ. ಆದರೆ, ಮಂಜಪ್ಪ ಅವರು ಕೇಂದ್ರ ಸ್ಥಾನದಲ್ಲಿಲ್ಲ ಎಂದು ಕಚೇರಿ ಮೂಲಗಳು ತಿಳಿಸಿವೆ.

ಸ್ವಯಂ ಜಾಗೃತಿ ಅವಶ್ಯಕ: ನಾಗರಿಕರು ಬಣ್ಣ-ಬಣ್ಣದ ಗಣಪನ ಮೂರ್ತಿಗಳಿಗೆ ಜೋತು ಬಿದ್ದು, ವಿಘ್ನನಿವಾರಕನಿಂದಲೇ ಪರಿಸರಕ್ಕೆ ವಿಘ್ನ ತಂದೊದಗಿಸುವ ಬದಲು ಪರಿಸರ ಸ್ನೇಹಿ ಶುದ್ಧ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವುದು ಹೆಚ್ಚು ಸೂಕ್ತವಾಗಿದೆ. ಈ ಬಗ್ಗೆ ಸಾರ್ವಜನಿಕರು ಸ್ವಯಂ ಜಾಗೃತರಾಗಿ ಮಣ್ಣಿನ ಗಣೇಶನನ್ನು ಪೂಜಿಸಿ, ಆರಾಧಿಸುವ ಮೂಲಕ ಪರಿಸರ ರಕ್ಷಣೆ, ನೀರಿನ ಮಾಲಿನ್ಯವನ್ನು ತಡೆಯುವತ್ತ ಚಿಂತನೆ ಮಾಡುವುದು ಹೆಚ್ಚು ಅವಶ್ಯಕವಾಗಿದೆ

ಪಿಒಪಿ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ ನಡೆಸಲು ಇದುವರೆಗೂ ಸಂಬಂಧಪಟ್ಟ ಪರಿಸರ ಅಧಿಕಾರಿ ಮತ್ತು ನಗರ ಪಾಲಿಕೆ ಅಧಿಕಾರಿಗಳು ಸೇರಿದಂತೆ ಯಾರೂ ಪೊಲೀಸ್‌ ಇಲಾಖೆಯನ್ನು ಸಂಪರ್ಕಿಸಿಲ್ಲ. ಒಂದು ವೇಳೆ ಈ ಬಗ್ಗೆ ಮಾಹಿತಿ
ನೀಡಿದರೆ ಪೊಲೀಸ್‌ ಇಲಾಖೆ ಕ್ರಮ ಕೈಗೊಳ್ಳುತ್ತದೆ.  ಎನ್‌.ಶಶಿಕುಮಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

„ರಂಗಪ್ಪ ಗಧಾರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.