ಚಿತ್ತಾಪುರ-ಜೇವರ್ಗಿ ಇನ್ನಷ್ಟು ಹತ್ತಿರ


Team Udayavani, Sep 7, 2018, 1:39 PM IST

gul-5.jpg

ವಾಡಿ: ತೂತು ದೋಣಿಯಲ್ಲಿ ಕುಳಿತು ನದಿ ದಾಟಿ ಸರಕಾರಿ ಶಾಲೆ ಸೇರುತ್ತಿದ್ದ ಚಾಮನೂರು ಗ್ರಾಮದ ಮಕ್ಕಳಿಗೆ ಕೊನೆಗೂ ಸೇತುವೆ ಭಾಗ್ಯ ಒದಗಿಬಂದಿದ್ದು, ಕಾಮಗಾರಿ ಚುರುಕಿನಿಂದ ಸಾಗಿದೆ.

ಚಿತ್ತಾಪುರ ತಾಲೂಕಿನ ಚಾಮನೂರು ಹಾಗೂ ಜೇವರ್ಗಿ ತಾಲೂಕಿನ ನರಿಬೋಳಿ ಗ್ರಾಮಗಳ ನಡುವೆ ಹರಿಯುವ ಭೀಮಾ ನದಿ ಎರಡು ರಾಜ್ಯಗಳ ನಡುವಿನ ಗಡಿ ರೇಖೆಯಂತಾಗಿ ಸಾರಿಗೆ ಸಂಪರ್ಕ ಸಂಕಟದಿಂದ ಕೂಡಿತ್ತು. ಚಾಮನೂರಿನ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು, ನದಿಯಾಚೆಗಿನ ನರಿಬೋಳಿ ಗ್ರಾಮದ ಸರಕಾರಿ ಶಾಲೆಯನ್ನೇ
ಆಶ್ರಯಿಸಿದ್ದರು. ಕೃಷಿ ಸಲಕರಣೆ, ರಸಗೊಬ್ಬರ, ಬೀಜಗಳನ್ನು ತರಲು ರೈತರು ದೋಣಿ ಮೂಲಕವೇ ಪಯಣಿಸಿ ನರಿಬೋಳಿ ಮಾರ್ಗವಾಗಿ ಜೇವರ್ಗಿಗೆ ಹೋಗುತ್ತಿದ್ದರು. ಶಿಕ್ಷಕರು ಶಾಲೆ ತಲುಪಲು ಹರಸಾಹಸ ಪಡುತ್ತಿದ್ದರು. ಸರಿಯಾದ ಸಮಯಕ್ಕೆ ನಾವಿಕರು ಲಭ್ಯವಾಗದೆ ವಿದ್ಯಾರ್ಥಿಗಳು ನದಿ ದಂಡೆಯಲ್ಲೇ ಕುಳಿತು ಅನುಭವಿಸುತ್ತಿದ್ದ ತೊಂದರೆ ನಿವಾರಣೆಗೆ ಕಾಲ ಕೂಡಿಬಂದಿದ್ದು, ಉಭಯ ಗ್ರಾಮಸ್ಥರಲ್ಲಿ ಹರ್ಷ ಮೂಡಿದೆ.

ಚಿತ್ತಾಪುರ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ, ಜೇವರ್ಗಿ ಶಾಸಕ ಡಾ| ಅಜಯಸಿಂಗ್‌ ಪ್ರಯತ್ನದಿಂದ ರಾಜ್ಯ ಸರಕಾರ ಚಾಮನೂರ-ನರಿಬೋಳಿ ಮಧ್ಯೆ ಸೇತುವೆ ನಿರ್ಮಾಣಕ್ಕೆ 5000 ಲಕ್ಷ ರೂ. ಮಂಜೂರಾಗಿದ್ದು, ಕಾಮಗಾರಿಗೆ ಚಾಲನೆ ದೊರೆತಿದೆ. ಈ ಮೂಲಕ ಶತಮಾನಗಳಿಂದ ಕಾಡುತ್ತಿದ್ದ ಸಾರ್ವಜನಿಕ ಸಮಸ್ಯೆಯೊಂದಕ್ಕೆ ಮುಕ್ತಿ ದೊರಕಿದಂತಾಗಿದೆ.

ಅಕ್ಟೋಬರ್‌ 2017ರಲ್ಲಿ ಸೇತುವೆ ನಿರ್ಮಾಣಕ್ಕೆ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅಡಿಗಲ್ಲು ಹಾಕಿದ್ದರು. 18 ತಿಂಗಳಲ್ಲಿ ಸೇತುವೆ ಬಳಕೆಗೆ ಮುಕ್ತಗೊಳಿಸುವುದಾಗಿ ಭರವಸೆ ಕೊಟ್ಟು ಕಾಮಗಾರಿ ಆರಂಭಿಸಿರುವ ಹೈದರಾಬಾದ ಮೂಲದ ಕೆಎಂವಿ ಗುತ್ತಿಗೆದಾರ ಕಂಪನಿ, ನದಿಯೊಳಗೆ ನಿರ್ಮಿಸಬೇಕಾದ ಒಟ್ಟು 17 ಪಿಲ್ಲರ್‌ಗಳಲ್ಲಿ ಸದ್ಯ ಆರು ಪಿಲ್ಲರ್‌ ನಿರ್ಮಿಸಿದ್ದು, ಉಳಿದ ಕಾಮಗಾರಿ ಭರದಿಂದ ಸಾಗಿದೆ.

ಚಿತ್ತಾಪುರ ಮತ್ತು ಜೇವರ್ಗಿ ತಲುಪಲು 41 ಕಿ.ಮೀ ಸುತ್ತಿ ಬರಬೇಕಿತ್ತು. ಸೇತುವೆ ನಿರ್ಮಾಣವಾದಿಂದ ವಾಡಿ, ನಾಲವಾರ, ಮದ್ರಿ, ನರಿಬೋಳಿ, ಕಟ್ಟಿಸಂಗಾವಿ, ಆಂದೋಲಾ, ಮಲ್ಲಾ, ಜೇವರ್ಗಿ, ಚಿತ್ತಾಪುರ ಸೇರಿದಂತೆ ಒಟ್ಟು 26ಕ್ಕೂ ಹೆಚ್ಚು ಗ್ರಾಮಗಳ ಜನರಿಗೆ 26 ಕಿ.ಮೀ ಅಂತರ ಕಡಿಮೆಯಾಗಲಿದೆ. ನಿಗದಿತ ಕಾಲಾವಕಾಶದಲ್ಲಿ ಸೇತುವೆ ಕಾಮಗಾರಿ ಪೂರ್ಣವಾಗಿ ಸಾರಿಗೆ ಸಂಚಾರಕ್ಕೆ ಚಾಲನೆ ದೊರೆತರೆ ಚಿತ್ತಾಪುರ-ಜೇವರ್ಗಿ ಇನ್ನಷ್ಟು ಹತ್ತಿರವಾಗಲಿವೆ.

ಚಿತ್ತಾಪುರ ಹಾಗೂ ಸೇಡಂ ತಾಲೂಕಿನ ಜನರು ಜೇವರ್ಗಿ ಹಾಗೂ ವಿಜಯಪುರ ನಗರಗಳಿಗೆ ವಾಡಿ ಪಟ್ಟಣದ ಮಾರ್ಗವಾಗಿ ಪ್ರಯಾಣಿಸಲು ಚಾಮನೂರು ಮತ್ತು ನರಿಬೋಳಿ ಮಧ್ಯೆ ನಿರ್ಮಿಸಲಾಗುತ್ತಿರುವ ಭೀಮಾ ಬ್ರಿಡ್ಜ್ ಅತ್ಯಂತ ಅನುಕೂಲಕರ ಆಗಲಿದೆ. ನಾಡದೋಣಿ ಮೂಲಕ ಆತಂಕದ ಪಯಣ ಮಾಡಿ ಜೀವಭಯ ಎದುರಿಸುತ್ತಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ. ಸೇತುವೆ ಮಂಜೂರು ಮಾಡಿಸುವ ಮೂಲಕ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಸಮಸ್ಯೆಯೊಂದನ್ನು ಬಗೆಹರಿಸಿದ್ದಾರೆ. 
 ಸಿದ್ದಯ್ಯಶಾಸ್ತ್ರೀ ನಂದೂರಮಠ, ಕಸಾಪ ಗೌರವ ಕಾರ್ಯದರ್ಶಿ, ವಾಡಿ

„ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.