ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Sep 7, 2018, 1:45 PM IST
ಅಫಜಲಪುರ: ತಾಲೂಕಿನ ರೇಣುಕಾ ಸಕ್ಕರೆ ಕಾರ್ಖಾನೆಯವರು ಕಬ್ಬಿನ ಬಾಕಿ ಹಣ ಪಾವತಿ ಮಾಡುತಿಲ್ಲ ಎಂದು ಕಾರ್ಖಾನೆ ಎದುರು ರೈತರು ಪ್ರತಿಭಟನೆ ಮಾಡುವ ವೇಳೆ ಬಾಕಿ ಹಣ ಪಾವತಿಗಾಗಿ ಆಗ್ರಹಿಸಿ ರೈತನೊಬ್ಬ ವಿಷ ಸೇವನೆಗೆ ಮುಂದಾದ ಘಟನೆ ನಡೆಯಿತು.
ತಾಲೂಕಿನ ಹವಳಗಾದಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬಿನ ಬಾಕಿ ಒಂಭತ್ತು ತಿಂಗಳು ಕಳೆದರೂ ರೈತರ ಖಾತೆಗೆ ಹಾಕದ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿರುವಾಗ ರೈತ ಮಲ್ಲು ಬಳೂರ್ಗಿ ಎನ್ನುವರು ವಿಷ ಸೇವನೆಗೆ ಮುಂದಾದರು. ಕೂಡಲೇ ಉಳಿದ ಪ್ರತಿಭಟನಾಕಾರರು ಈ
ಕೃತ್ಯವನ್ನು ತಡೆದರು.
ನಂತರ ಪ್ರತಿಭಟನೆಯನ್ನು ಉದ್ದೇಶಿಸಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ, ಕಾರ್ಖಾನೆಯವರು ತಾಲೂಕಿನ ರೈತರ ಕಬ್ಬನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿರುವುದಲ್ಲದೇ ಹಣ ಪಾವತಿ ಮಾಡುವಲ್ಲಿಯೂ ವಿಳಂಬ ಮಾಡುತ್ತಿದ್ದಾರೆ. ಇದರಿಂದ ರೈತರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಸಾಲ ಮಾಡಿ ಸಂಸಾರ ಮಾಡುತ್ತಿದ್ದಾರೆ. ಸಾಲ ಮರುಪಾವತಿ ಮಾಡಲಾಗದ ಪರಿಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೆಲ್ಲ ಕಷ್ಟದಲ್ಲಿರುವ ರೈತರಿಗೆ ಕಾರ್ಖಾನೆಯವರು ದಾನ ನೀಡುವುದಿಲ್ಲ. ಕಬ್ಬು ಖರೀದಿಸಿ ಅವರಿಗೆ ಸಿಗಬೇಕಾದ ಹಣ ಪಾವತಿ ಮಾಡುವಲ್ಲಿ ವಿಳಂಬ ಮಾಡುವುದು ಸರಿಯಲ್ಲ ಎಂದರು.
ರೈತರನ್ನುದ್ದೇಶಿಸಿ ಕಾರ್ಖಾನೆ ಆಡಳಿತ ಮಂಡಳಿ ಅಧಿಕಾರಿ ಬಿ.ಪಿ. ಹೂಗಾರ ಮಾತನಾಡಿ, ರೈತರು ಆತ್ಮಹತ್ಯೆಗೆ ಯತ್ನಿಸುವುದು ಬೇಡ, ಆದಷ್ಟು ಬೇಗ ಬಾಕಿ ಹಣವನ್ನು ರೈತರ ಖಾತೆಗೆ ಪಾವತಿಸಲಾಗುತ್ತದೆ ಎಂದು ಭರವಸೆ ನೀಡಿದ ಮೇಲೆ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದರು. ರೈತ ಮುಖಂಡರಾದ ಭೀಮರಾಯಗೌಡ ಪಾಟೀಲ, ಭಾಗಣ್ಣ ಕುಂಬಾರ, ಮಲ್ಲು ಬಳೂರ್ಗಿ, ರಾಜು ಉಂಡಿ, ಲಗಮಣ್ಣ ಪೂಜಾರಿ, ಕಾಂತು ಪಾಟೀಲ, ನಿಂಗಣ್ಣ ಕೆರಮಗಿ, ಪರೇಪ್ಪ ಬಳೂರ್ಗಿ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?