ನ್ಯಾಯಸಮ್ಮತ ನಡವಳಿಕೆ ಅನುಸರಿಸಿ


Team Udayavani, Sep 9, 2018, 11:47 AM IST

gul-1.jpg

ಕಲಬುರಗಿ: ಸಮಾಜದಲ್ಲಿ ಎಲ್ಲದಕ್ಕೂ ನ್ಯಾಯಾಲಯದಿಂದ ನ್ಯಾಯ ಬಯಸುವುದಕ್ಕಿಂತ ನ್ಯಾಯ ಸಮ್ಮತವಾಗಿ ನಡೆಯುವುದೇ ಬಹು ಮುಖ್ಯವಾಗಿದೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಹೇಳಿದರು.

ಶನಿವಾರ ಹೈಕೋರ್ಟ್‌ ಕಲಬುರಗಿ ಪೀಠದ ದಶಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಎಮ್ಮವರು ಬೇಸಗೊಂಡರೆ ಶುಭ ಲಗ್ನವೆನ್ನಿರಯ್ಯ.. ಎನ್ನುವಂತೆ ಕಲಬುರಗಿ ಹೈಕೋರ್ಟ್‌ ಪೀಠಕ್ಕೆ ಹಾಗೂ ಈ ಭಾಗಕ್ಕೆ ಒಳ್ಳೆಯ ಕಾಲ ಬಂದಿದೆ. ನ್ಯಾಯ ಸಮ್ಮತವಾಗಿ ನಡೆದಿದ್ದರೆ ಸಹೋದರಿಗೆ ಆಸ್ತಿಯಲ್ಲಿ ಪಾಲು ಕೊಡುವಂತಹ ಕಾಯ್ದೆ ಕಠಿಣವಾಗಿ ಜಾರಿ ತರುವುದು ಎದುರಾಗುತ್ತಿರಲಿಲ್ಲ. ಬಹು ಮುಖ್ಯವಾಗಿ ಕಳಬೇಡ, ಕೊಲಬೇಡ, ಹುಸಿಯ ನುಡಿಯಬೇಡ, ಅನ್ಯರಿಗೆ ಅಸಹ್ಯ ಪಡೆಬೇಡ.. ಎಂಬ ಬಸವಣ್ಣನವರ ನುಡಿಯಂತೆ ನಡೆದರೆ ಸಮಾಜದಲ್ಲಿ ಅನ್ಯಾಯದ ಘಟನೆಗಳಿಗೆ ಅವಕಾಶ ಇಲ್ಲದಂತಾಗುತ್ತದೆ ಎಂದರು.

ನಾವೆಲ್ಲರೂ ನ್ಯಾಯ ಬಲ್ಲವರು. ಎಲ್ಲರೂ ನ್ಯಾಯ ಸಮ್ಮತ ನಡವಳಿಕೆಯಿಂದ ನಡೆದರೆ ಯಾರೂ ನ್ಯಾಯಾಲಯಕ್ಕೆ ಹೋಗುವ ಅವಶ್ಯಕತೆ ಇರುವುದಿಲ್ಲ. ನ್ಯಾಯ ಕೇಳುವವರ ಮನೆ ಬಾಗಿಲಿಗೆ ನ್ಯಾಯ ಒಯ್ಯುವುದು ದೊಡ್ಡ ಸಾಧನೆಯಾಗಿದೆ.

ನ್ಯಾಯಾಲಯಗಳು ಇರುವುದು ಜನರಿಗಾಗಿ, ಕೋರ್ಟ್‌ಗಾಗಿ ಜನರು ಅಲ್ಲ. ಆದ್ದರಿಂದ ನ್ಯಾಯ ಕೇಳಿ ಬರುವ ಕಕ್ಷಿದಾರರಿಗೆ ಸೂಕ್ತ ನ್ಯಾಯದ ತಿಳಿವಳಿಕೆ ನೀಡಬೇಕು ಎಂದರು. ಕರ್ನಾಟಕ ಹೈಕೋರ್ಟ್‌ ಕಲಬುರಗಿ ಪೀಠದಲ್ಲಿ ಹೆಚ್ಚಿನ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿವೆ. ಮುಂದಿನ ಐದಾರು ತಿಂಗಳುಗಳಲ್ಲಿ ಹೆಚ್ಚಿನ ಸಂಖ್ಯೆಯ ನ್ಯಾಯಮೂರ್ತಿಗಳನ್ನು ನೇಮಿಸುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅನುಕೂಲ ಮಾಡಿಕೊಡಲಾಗುತ್ತಿದೆ. ಕಲಬುರಗಿ ಹೈಕೋರ್ಟ್‌ ಪೀಠವು ಹತ್ತು ವರ್ಷದ ಮಗುವಾಗಿದ್ದು, ಇದನ್ನು ಇನ್ನೂ ಬೆಳೆಸಬೇಕಾಗಿದೆ.

ನ್ಯಾಯಮೂರ್ತಿಗಳಾದ ಎನ್‌.ಕೆ. ಜೈನ್‌, ಸಿರಿಯಾಕ್‌ ಜೋಸೆಫ್‌ ಹಾಗೂ ಎನ್‌.ಕೆ. ಪಾಟೀಲ ಅವರು ಕಲಬುರಗಿ ಹೈಕೋರ್ಟ ಪೀಠ ಪ್ರಾರಂಭವಾಗಲು ಕಾರಣೀಕರ್ತರಾಗಿದ್ದರೆ, ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಅವರು ಈ ಪೀಠವನ್ನು ಗುರುತಿಸಿ ಹೆಚ್ಚಿನ ಮಹತ್ವ ನೀಡಿದ್ದಾರೆ ಎಂದರು.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ದಶಮಾನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ದೂರ ಮಾಡಲು ನ್ಯಾಯಾಲಯಗಳು ಕೆಲಸ ನಿರ್ವಹಿಸುತ್ತವೆ. ವಕೀಲರು, ನ್ಯಾಯಾಧೀಶರು ತಮ್ಮ ಅತ್ಯುನ್ನತ ಸೇವೆ ಸಲ್ಲಿಸುವ ಮೂಲಕ ಸಾರ್ವಜನಿಕರಿಗೆ ಸಹಾಯ ಹಸ್ತ ನೀಡಬೇಕು. ನಮ್ಮ ಶ್ರಮದಲ್ಲಿ ಸಮರ್ಪಣಾ ಭಾವದ ಅವಶ್ಯಕತೆಯಿದೆ ಎಂದರು.

ಕಲಬುರಗಿ ಹೈಕೋರ್ಟ್‌ ಪೀಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗುತ್ತಿವೆ. ವಕೀಲರು ಹೆಚ್ಚಿನ ವಿಷಯಗಳನ್ನು ಕಲಿಯಲು ಇಲ್ಲಿ ಅವಕಾಶಗಳಿದ್ದು, ಸದ್ಯ ವಕೀಲಿ ವೃತ್ತಿಯ ಪರಿಪಕ್ವತೆಗಾಗಿ ಬೆಂಗಳೂರಿಗೆ ತೆರಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಯಾರಾದರೂ ವಕೀಲಿ ವೃತ್ತಿ ಕಲೆಯಬೇಕಾದರೆ ಕಲಬುರಗಿಗೆ ಹೋಗಬೇಕು ಎಂಬ ಮನೋಭಾವ ಬೆಳೆಯುವಂತಾಗಬೇಕು. ಹೈಕೋರ್ಟ್‌ ನಲ್ಲಿರುವ ಎಲ್ಲ ನ್ಯಾಯಮೂರ್ತಿಗಳು, ವಕೀಲರು, ಸಿಬ್ಬಂದಿ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮ ಬದ್ಧತೆ ತೋರಿಸಬೇಕು ಎಂದರು.

ರಾಜ್ಯ ಸರ್ಕಾರದ ಅಡ್ವೋಕೇಟ್‌ ಜನರಲ್‌ ಉದಯ ಹೊಳ್ಳಾ ಮಾತನಾಡಿ, ವಿದೇಶಗಳ ಸುಪ್ರೀಂಕೋರ್ಟ್‌ಗಳಲ್ಲಿ ಪ್ರತಿ ವರ್ಷ 100 ಪ್ರಕರಣಗಳನ್ನು ಇತ್ಯರ್ಥಪಡಿಸುತ್ತಿದ್ದರೆ, ನಮ್ಮ ರಾಜ್ಯದಲ್ಲಿ ಪ್ರತಿ ತಿಂಗಳು 100 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ.

ನ್ಯಾಯಾಧೀಶರು ಮತ್ತು ವಕೀಲರು ಹೈಕೋರ್ಟ್‌ ಪೀಠದ ಅವಕಾಶ ಉಪಯೋಗಿಸಿಕೊಂಡು ಸೇವೆ ನೀಡಬೇಕು ಎಂದು ಹೇಳಿದರು. ಕಲಬುರಗಿ ಹೈಕೋರ್ಟ್‌ ಪೀಠದ ಗ್ರಂಥಾಲಯಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಇತ್ಯರ್ಥವಾಗಿರುವ 1915-2000ರವರೆಗಿನ ಎಲ್ಲ ಪ್ರಕರಣಗಳ ಸಂಪೂರ್ಣ ದಾಖಲೆಗಳನ್ನು ನೀಡಲಾಗುವುದು. ಇದು ಕಲಿಕಾ ವಕೀಲರಿಗೆ ಹಾಗೂ ನ್ಯಾಯಮೂರ್ತಿಗಳಿಗೆ ಹೆಚ್ಚಿನ ಅನುಕೂಲವಾಗುವುದು ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.