ಇಂದು ನಾಗಾವಿ ಯಲ್ಲಮ್ಮದೇವಿ ಜಾತ್ರೆ


Team Udayavani, Oct 20, 2021, 2:43 PM IST

gulbarga news

ಚಿತ್ತಾಪುರ: ತಾಲೂಕಿನ ನಾಗಾವಿ ಯಲ್ಲಮ್ಮದೇಗುಲ ದಕ್ಷಿಣ ಭಾರತದ ಸುಪ್ರಸಿದ್ಧ ಶಕ್ತಿ ಕ್ಷೇತ್ರಗಳಲ್ಲಿ ಒಂದಾಗಿದೆ. ರಾಷ್ಟ್ರಕೂಟ ಅರಸುಅಮೋಘವರ್ಷ ನೃಪತುಂಗನ ಕುಲದೇವತೆಎಂದೇ ಖ್ಯಾತಿ ಪಡೆದಿರುವ ನಾಗಾವಿ ಯಲ್ಲಮ್ಮದೇವಿ ಭಕ್ತರ ಇಷ್ಟಾರ್ಥ ಈಡೇರಿಸುವ ಶಕ್ತಿದೇವತೆಯಾಗಿದ್ದಾಳೆ.

ಪಟ್ಟಣದ ಸುಮಾರು 2 ಕಿ.ಮೀ ದೂರದಲ್ಲಿ ಕಲೆ,ಸಾಹಿತ್ಯ, ಶಿಲ್ಪಕಲೆ, ಶಾಸನಗಳಿರುವ ಐತಿಹಾಸಿಕಹಿನ್ನೆಲೆ, ಧಾರ್ಮಿಕ ಪರಂಪರೆ ಹೊಂದಿದ ಭವ್ಯವಾದನಾಗಾವಿ ಯಲ್ಲಮ್ಮ ದೇವಾಲಯವಿದೆ.ಮುಖ್ಯದ್ವಾರ ಪ್ರವೇಶಿಸಿ ಸ್ವಲ್ಪ ಮುಂದೆ ಹೋದರೆನಾಗಶೇಷ ಗುಡಿಯ 60 ಕಂಬಗಳು ಕಾಣಿಸುತ್ತವೆ.

ಈ ಕಂಬದ ಎದುರು ಯಲ್ಲಮ್ಮ ದೇವಿ ಗರ್ಭಗುಡಿಇದೆ. ಯಲ್ಲಮ್ಮ ದೇವಿ ಮೂರ್ತಿ ಬಲ,ಎಡಭಾಗದಲ್ಲಿ ಪುಷ್ಕರಣಿಗಳಿವೆ. ವಿಶಾಲವಾದಪ್ರಾಂಗಣ ಹೊಂದಿರುವ ಈ ದೇವಾಲಯದಲ್ಲಿಭಕ್ತಾದಿಗಳಿಗೆ ಛತ್ರಗಳು ನಿರ್ಮಾಣವಾಗಿವೆ.

ಈ ದೇವಾಲಯ ತುಂಬಾ ಪುರಾತನವಾಗಿದೆ.ಸ್ಕಂದ ಪುರಾಣದಲ್ಲಿ ಕಾಣಿಸಿಕೊಳ್ಳುವ ಶಕ್ತರುಯಲ್ಲಮ್ಮ ದೇವಿ ಆರಾಧಕರಾಗಿದ್ದರು. ಕ್ರಿ.ಶ 2ನೇಶತಮಾನದಲ್ಲಿನ ಮಾರ್ಕಾಂಡೇಯ ಪುರಾಣದಿಂದತಿಳಿದು ಬರುತ್ತದೆ.

ರಾಷ್ಟ್ರಕೂಟರ ಕುಲದೇವತೆ: ಕನ್ನಡ ನಾಡನ್ನಾಳಿದ ಚಕ್ರವರ್ತಿಗಳಾದ ಬಾದಾಮಿ ಚಾಲುಕ್ಯರು ಬನಶಂಕರಿ, ಕಲ್ಯಾಣಿ ಚಾಲುಕ್ಯರು ಚಂದ್ರಲಾ ಪರಮೇಶ್ವರಿ, ವಿಜಯನಗರ ಅರಸರು ಭುವನೇಶ್ವರಿ,ಮೈಸೂರು ಒಡೆಯರು ಚಾಮುಂಡೇಶ್ವರಿಯನ್ನುಕುಲದೇವತೆಯಾಗಿ ಪೂಜಿಸುವಂತೆ ರಾಷ್ಟ್ರ ಕೂಟರುನಾಗಾವಿ ಯಲ್ಲಮ್ಮ ದೇವಿಯನ್ನು ಪೂಜಿಸುತ್ತಿದ್ದರು.

ಯಲ್ಲಮ್ಮ ದೇವಿಗೆ ಕರ್ನಾಟಕ ಮಾತ್ರವಲ್ಲದೇಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತರಾಜ್ಯ ಹಾಗೂ ರಾಜ್ಯದ ಪ್ರಮುಖ ಜಿಲ್ಲೆಗಳಿಂದ ಹುಣ್ಣಿಮೆ, ಅಮವಾಸ್ಯೆ, ಪ್ರತಿ ಮಂಗಳವಾರ,ಶುಕ್ರವಾರ ಭಕ್ತಾದಿಗಳು ಅಪಾರ ಪ್ರಮಾಣದಲ್ಲಿಆಗಮಿಸಿ, ದರ್ಶನ ಪಡೆಯುತ್ತಾರೆ. ಆದರೆಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯೂ ಹೊರಜಿಲ್ಲೆ, ತಾಲೂಕು ಹಾಗೂ ರಾಜ್ಯದವರಿಗೆ ದರ್ಶನಕ್ಕೆಅವಕಾಶ ನೀಡಿಲ್ಲ.ದೇವಾಲಯದಲ್ಲಿ ಪ್ರತಿ ವರ್ಷ ಅಶ್ವಯುಜಶುದ್ಧ ಪ್ರತಿಪದೆಯಿಂದ ಘಟಸ್ಥಾಪನೆಯೊಂದಿಗೆಒಂಭತ್ತು ದಿನಗಳ ಕಾಲ ನವರಾತ್ರಿ ಪೂಜೆಗಳುನಡೆಯುತ್ತವೆ.

ಪ್ರತಿದಿನ ದೇವಿಗೆ ವಿಶೇಷ ಪೂಜೆ,ಕುಂಕುಮಾರ್ಚನೆ, ಮಂತ್ರ ಪುಷ್ಪಗಳ ಸೇವೆನಡೆಯುತ್ತದೆ.ಪ್ರತಿ ವರ್ಷ ಸೀಗಿ ಹುಣ್ಣಿಮೆಯಂದು ಪಲ್ಲಕ್ಕಿಉತ್ಸವ ಹಾಗೂ ಜಾತ್ರೆ ನಡೆಯುತ್ತದೆ. ಅ.20ರಂದು ಪಟ್ಟಣದ ಸರಾಫ ಲಚ್ಚಪ್ಪ ನಾಯಕಮನೆಯಲ್ಲಿ ಮಧ್ಯಾಹ್ನ 1:30ಕ್ಕೆ ಮಾಜಿ ಸಚಿವ,ಶಾಸಕ, ದೇವಸ್ಥಾನ ಸಮಿತಿ ಗೌರವಾಧ್ಯಕ್ಷಪ್ರಿಯಾಂಕ್‌ ಖರ್ಗೆ, ತಹಶೀಲ್ದಾರ್‌ ಉಮಾಕಾಂತಹಳ್ಳೆ ಅಧ್ಯಕ್ಷತೆಯಲ್ಲಿ ಪಟ್ಟಣದ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ವಿಘ್ನೇಶ್ವರ ಪೂಜೆ, ಗುರುಪೂಜೆ,ಪಲ್ಲಕ್ಕಿ ಪೂಜೆ ನಡೆಯುತ್ತದೆ.

ಮಧ್ಯಾಹ್ನ 2 ಗಂಟೆಗೆ ಪಲ್ಲಕ್ಕಿಯು ಪಟ್ಟಣದ ಪ್ರಮುಖ ಬೀದಿಗಳಮುಖಾಂತರ ಹೊರಟು ದೇವಸ್ಥಾನ ತಲುಪುತ್ತದೆ.ದೇವಸ್ಥಾನ ತಲುಪಿದ ನಂತರ ದೇವಸ್ಥಾನದ ಸುತ್ತಐದು ಪ್ರದಕ್ಷಿಣೆ ಹಾಕಿ ದೇವರ ಪಲ್ಲಕಿ ಗರ್ಭ ಗುಡಿ ತಲುಪುತ್ತದೆ.

ಎಂ.ಡಿ ಮಶಾಖ

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.