ಎರಡು ತಿಂಗಳೊಳಗೆ ಪೀಠಕ್ಕೆ ನ್ಯಾಯಮೂರ್ತಿಗಳ ನೇಮಕ


Team Udayavani, Sep 9, 2018, 11:56 AM IST

gul-2.jpg

ಕಲಬುರಗಿ: ಇಲ್ಲಿನ ಕರ್ನಾಟಕ ಹೈಕೋರ್ಟ್‌ ಪೀಠಕ್ಕೆ ನ್ಯಾಯಮೂರ್ತಿಗಳ ನೇಮಕ ಬೇಡಿಕೆ ಈಡೇರಿಕೆ ಕಾಲ ಸನ್ನಿಹಿತವಾಗುತ್ತಿದ್ದು, ಮುಂದಿನ ಎರಡು ತಿಂಗಳುಗಳಲ್ಲಿ ಈ ಪೀಠಕ್ಕೆ ನಾಲ್ವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಪ್ರಕಟಿಸಿದರು.

ಶನಿವಾರ ಇಲ್ಲಿನ ಕರ್ನಾಟಕ ಹೈಕೋರ್ಟ್‌ ಪೀಠದ ದಶಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಹಿಂದೆ ಮೊದಲ ಬಾರಿ ಭೇಟಿ ನೀಡಿದಾಗ ಪ್ರಕರಣಗಳ ತ್ವರಿತ ವಿಲೇವಾರಿಗೆ ಹೆಚ್ಚಿನ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಬೇಡಿಕೆ ಇಡಲಾಗಿತ್ತು. 

ಅದೀಗ ಕಾರ್ಯರೂಪಕ್ಕೆ ಬರಲಿದೆ. ಕಲಬುರಗಿ ವಿಭಾಗದಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗಿದ್ದರಿಂದ
ಈ ಭಾಗದ ಜನ ನ್ಯಾಯಕ್ಕಾಗಿ ಬೆಂಗಳೂರಿಗೆ ಅಲೆಯುವುದು ತಪ್ಪಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಸಾರ್ವಜನಿಕರ
ಮನೆ ಬಾಗಿಲಿಗೆ ತಲುಪಿಸಲಾಗಿದೆ.

ಹೈಕೋರ್ಟ್‌ ಪೀಠ ಸ್ಥಾಪನೆಯಾಗಿದ್ದರಿಂದ ಈ ಭಾಗಕ್ಕೆ ಹೆಚ್ಚಿನ ಮಹತ್ವ ದೊರೆತಿದ್ದು, ಹೆಚ್ಚು ಅಭಿವೃದ್ಧಿಯಾಗುತ್ತಿದೆ. ನ್ಯಾಯಾಲಯಗಳು ಜನರಿಗಾಗಿ ಇದ್ದು, ಜನರು ನ್ಯಾಯಾಲಯಕ್ಕಾಗಿ ಅಲ್ಲ ಎನ್ನುವ ಅಂಶ ತಿಳಿದು ಸಾರ್ವಜನಿಕರು ನ್ಯಾಯಾಲಯಗಳಿಗೆ ಆಗಮಿಸಿದಾಗ ತ್ವರಿತವಾಗಿ ನ್ಯಾಯ ದೊರಕಿಸಿಕೊಡಬೇಕು ಎಂದರು.
 
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್‌.ಕೆ. ಹಿರೇಮಠ ಸ್ವಾಗತಿಸಿ ಮಾತನಾಡಿ, 2008ರಲ್ಲಿ ಕಲಬುರಗಿ ಹೈಕೋರ್ಟ್‌ ಸಂಚಾರಿ ಪೀಠ ಪ್ರಾರಂಭವಾಯಿತು. ನಂತರ 2013ರಲ್ಲಿ ಕಾಯಂ ಪೀಠವಾಗಿ ಪರಿವರ್ತನೆಗೊಂಡಿತು.

ಕಲಬುರಗಿಯಲ್ಲಿ ಪೀಠ ಸ್ಥಾಪನೆಯಾದಾಗ ಹೈಕೋರ್ಟ್‌ ಪೀಠದ ವ್ಯಾಪ್ತಿಯ 9810 ಪ್ರಕರಣಗಳು ಬಾಕಿ ಇದ್ದವು. ಸದ್ಯ 32397 ಪ್ರಕರಣಗಳು ಬಾಕಿ ಇವೆ. 10 ವರ್ಷಗಳಲ್ಲಿ 1.50 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಹೊಸದಾಗಿ 1.37 ಲಕ್ಷ ಪ್ರಕರಣಗಳು ದಾಖಲಾಗಿವೆ ಎಂದರು.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದಿನೇಶ ಮಹೇಶ್ವರಿ ಅವರ ತಾಯಿ ರುಕ್ಮಿಣಿದೇವಿ ಮಹೇಶ್ವರಿ,
ಕರ್ನಾಟಕ ಹೈಕೋರ್ಟ್‌ ಕಲಬುರಗಿ ಪೀಠದ ನ್ಯಾಯಮೂರ್ತಿಗಳಾದ ಎಸ್‌. ಸುಜಾತಾ, ಎನ್‌.ಕೆ. ಸು ಧೀಂದ್ರರಾವ, ಮಹ್ಮದ್‌ ನವಾಜ್‌, ರವಿ ಮಳಿಮಠ, ರಾಜ್ಯ ಬಾರ್‌ ಕೌನ್ಸಿಲ್‌ ಸದಸ್ಯರಾದ ಕಾಶಿನಾಥ ಮೊತಕಪಲ್ಲಿ, ಎಸ್‌.ಎಸ್‌.ಮಿಥಲ್ಕೋಡ, ಕೆ.ಕೆ. ಕೋಟೇಶ್ವರ, ಆಸೀಫ್‌ ಅಲಿ, ಮೇಯರ್‌ ಶರಣಕುಮಾರ ಮೋದಿ, ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಹಿರಿಯ ನ್ಯಾಯವಾದಿಗಳಾದ ರಾಘವೇಂದ್ರ ನಾಡಗೌಡ, ಎಸ್‌.ಎಸ್‌. ಕುಮ್ಮಣ್ಣ,
ಉಸ್ತಾದ್‌ ಸಾದತ್‌ ಹುಸೇನ್‌, ಎಸ್‌ಪಿ ಎನ್‌. ಶಶಿಕುಮಾರ, ನ್ಯಾಯವಾದಿ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್‌. ಪಾಟೀಲ, ಉಪಾಧ್ಯಕ್ಷ ಸತೀಶ ಪಾಟೀಲ, ಹೈಕೋರ್ಟ್‌ ಘಟಕದ ಉಪಾಧ್ಯಕ್ಷ ಎಸ್‌.ಜಿ. ಮಠ, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಯಾದವ್‌ ಹಾಗೂ ನ್ಯಾಯವಾದಿಗಳ ಸಂಘದ ಇತರ ಪದಾಧಿಕಾರಿಗಳು, ಸದಸ್ಯರು, ಹಿರಿಯ
ನ್ಯಾಯವಾದಿಗಳು ಹಾಜರಿದ್ದರು. ಹಿರಿಯ ನ್ಯಾಯವಾದಿ ಅನುರಾಧಾ ದೇಸಾಯಿ ಹಾಗೂ ನಮೃತಾ ಪಾಟೀಲ ನಿರೂಪಿಸಿದರು. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.