ಸಾಲ ಮನ್ನಾ ಪ್ರಕ್ರಿಯೆ ಆರಂಭ


Team Udayavani, Sep 9, 2018, 12:45 PM IST

gul-4.jpg

ಕಲಬುರಗಿ: ರಾಷ್ಟ್ರೀಕೃತ ಬ್ಯಾಂಕ್‌ಗಳು ಸೇರಿದಂತೆ 30 ಸಾವಿರ ಕೋಟಿ ರೂ.ಗಳ ರೈತರ ಕೃಷಿ ಸಾಲ ಮನ್ನಾ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ರೈತರಿಗೆ ಲೇವಾದೇವಿದಾರರ ಕಾಟ ತಪ್ಪಿಸಲು ಋಣಮುಕ್ತ ಕಾಯ್ದೆಗೆ ಸರ್ಕಾರ ಅನುಮೋದನೆ ನೀಡಿದ್ದು, ಅಂಕಿತಕ್ಕಾಗಿ ರಾಷ್ಟ್ರಪತಿಗಳಿಗೆ ರವಾನಿಸಲಾಗಿದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ತಿಳಿಸಿದರು.

ನಗರದ ಎಪಿಎಂಸಿ ಸಭಾಂಗಣದಲ್ಲಿ ಸಹಕಾರ ಇಲಾಖೆ ಮತ್ತು ಎಪಿಎಂಸಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ ಸಂಕಷ್ಟವನ್ನರಿತು ಹಿಂದಿನ ಸಿದ್ದರಾಮಯ್ಯ ಸರ್ಕಾರ 50 ಸಾವಿರ ರೂ.ಗಳ ಸಾಲ ಮನ್ನಾ ಮಾಡಿತ್ತು. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಒಂದು ಲಕ್ಷ ರೂ.ಗಳವರೆಗೆ ರೈತರ ಸಾಲ ಮನ್ನಾ ಮಾಡಿದೆ ಎಂದರು. 

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲ ಮನ್ನಾಕ್ಕೂ ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿದ್ದು, ಈಗಾಗಲೇ 30 ಸಾವಿರ ಕೋಟಿ ರೂ. ಗಳ ಸಾಲ ಮನ್ನಾ ಪ್ರಕ್ರಿಯೆ ಆರಂಭವಾಗಿದೆ. ಸಾಲ ವಸೂಲಿಗೆ ಸಂಬಂಧಿಸಿದಂತೆ ಬ್ಯಾಂಕ್‌ ಅಧಿಕಾರಿಗಳು ರೈತರಿಗೆ ಅನಗತ್ಯ ತೊಂದರೆ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಲೇವಾದೇವಿದಾರರ ಕೈಯಲ್ಲಿ ಸಿಲುಕಿದ್ದ ರೈತರ ಕಷ್ಟ ನೋಡಿ ಸರ್ಕಾರ ಋಣಮುಕ್ತ ಕಾಯ್ದೆ ಜಾರಿಗೆ ತರಲು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿದೆ. ಎರಡನೇ ಹಂತದಲ್ಲಿ ಪಿಎಲ್‌ಡಿ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕಲಬುರಗಿ ಡಿಸಿಸಿ ಬ್ಯಾಂಕ್‌ನಡಿ ಕಳೆದ ಬಾರಿ 208 ಕೋಟಿ ರೂ. ಸಾಲ ಮನ್ನಾ ಆಗಿದ್ದರೆ, ಈ ಬಾರಿ 319 ಕೋಟಿ ರೂ. ಆಗಲಿದೆ. 1,41,035 ರೈತರಿಗೆ ಇದರ ಲಾಭ ಸಿಗಲಿದೆ. ಈ
ಬ್ಯಾಂಕಿನ ವ್ಯಾಪ್ತಿಯಲ್ಲಿ 4.71 ಲಕ್ಷ ರೈತರಿದ್ದು, ಶೇ.60ಕ್ಕೂ ಹೆಚ್ಚು ರೈತರು ಸಾಲದ ವ್ಯಾಪ್ತಿಯಲ್ಲಿಲ್ಲ. ಹೀಗಾಗಿ ಸಹಕಾರ ಸಾಲದ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕಿದೆ. ಮುಂದಿನ ಒಂದು ವರ್ಷದಲ್ಲಿ 15 ಲಕ್ಷ ರೈತರನ್ನು ಸಾಲದ ವ್ಯಾಪ್ತಿಗೆ ತರುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.

ಹೆಸರು ಕಾಳು ಖರೀದಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 300 ಕೇಂದ್ರ ಪ್ರಾರಂಭಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ 30 ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ. ಹೆಚ್ಚಿನ ಕೇಂದ್ರ ತೆರೆಯಲು ಮಂಜೂರಾತಿ ನೀಡಲು ಕೇಂದ್ರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಿದರು.

ಕಲಬುರಗಿ, ಬೀದರ್‌ ಮತ್ತು ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಸಂಘದಡಿ ಒಟ್ಟು 727 ನೋಂದಾಯಿತ ಹಾಲು ಉತ್ಪಾದಕರ ಸಂಘಗಳಿದ್ದು, ಈ ಪೈಕಿ 494 ಸಂಘಗಳು ಕಾರ್ಯಾಚರಣೆಯಲ್ಲಿವೆ. ಇವುಗಳಿಂದ ಪ್ರತಿದಿನ 70,081 ಲೀಟರ್‌ ಹಾಲು ಸಂಗ್ರಹಣೆ ಮಾಡಲಾಗುತ್ತಿದೆ. ಕ್ಷೀರಧಾರೆ ಯೋಜನೆಯಡಿ ಸರ್ಕಾರದಿಂದ ಪ್ರತಿ ಲೀಟರ ಹಾಲಿಗೆ 5 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕಲಬುರಗಿ ವಿಭಾಗದಲ್ಲಿ ಹಾಲು ಶೇಖರಣಾ ಘಟಕ ನಿರ್ಮಿಸಲು ಸೂಕ್ತವಾದ ನಿವೇಶನ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ, ಎಪಿಎಂಸಿ ಕಾರ್ಯದರ್ಶಿ ಮಂಜುಳಾ, ಸಹಕಾರ ಸಂಘಗಳ ಉಪ
ನಿಬಂಧಕ ಗಿರೆಡ್ಡಿ, ಸಹಾಯಕ ನಿಬಂಧಕ ವಿಶ್ವನಾಥ ಮಲಕೂಡೆ, ಜೆಡಿಎಸ್‌ ಮುಖಂಡ ಕೇದಾರಲಿಂಗಯ್ಯ
ಹಿರೇಮಠ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.