ಮತ್ತೂಮ್ಮೆ ಬಾಲ ಬಿಚ್ಚಿದ್ರೆ ಹುಷಾರ್‌!


Team Udayavani, Sep 13, 2018, 6:16 PM IST

gul-1.jpg

ಕಲಬುರಗಿ: ಏನೋ ನೀನು ರೌಡಿನಾ? ಕೈಯಲ್ಲಿ ಖಡ್ಗ ಯಾಕೋ ಬೇಕು ನಿನಗೆ? ಇದೇನು ಇಷ್ಟುದ್ದ ಕೂದಲು? ಬಾರೋ ಇಲ್ಲಿ, ಮತ್ತೂಮ್ಮೆ ಬಾಲ ಬಿಚ್ಚಿದ್ರೆ ಹುಷಾರ್‌ಎಂದು ನಗರದ ರೌಡಿಗಳಿಗೆ ಬುಧವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ್‌ ನೇತೃತ್ವದಲ್ಲಿ ಪೊಲೀಸರು ಕ್ಲಾಸ್‌ ತೆಗೆದುಕೊಂಡರು.

ನಗರದ ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಸೆ.13ರಂದು ಗೌರಿ-ಗಣೇಶ, ಸೆ.21ರಂದು ಮೋಹರಂ ಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಪರೇಡ್‌ ನಡೆಸಿ, ಸಮಾಜದ ಶಾಂತಿ
ಕದಡಿದರೆ ಪರಿಣಾಮ ನೆಟ್ಟಗಿರಲ್ಲ. ಕುಕೃತ್ಯಗಳಲ್ಲಿ ತೊಡಗಿದರೆ ಸುಮ್ಮನಿರೋದಿಲ್ಲ ಎಂದು ಎಚ್ಚರಿಸಿದರು.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಪಿ ಎನ್‌. ಶಶಿಕುಮಾರ, ಸದ್ಯ ಜಿಲ್ಲೆಯಲ್ಲಿ 3,800 ರೌಡಿಗಳಿದ್ದು, ಗೌರಿ ಗಣೇಶ ಹಾಗೂ ಮೋಹರಂ ಹಬ್ಬಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ 1,000 ರೌಡಿಗಳ ಪರೇಡ್‌ ನಡೆಸಲಾಯಿತು ಎಂದರು.
 
ಗ್ರಾಮೀಣ, ವಿಶ್ವವಿದ್ಯಾಲಯ, ರಾಘವೇಂದ್ರ ನಗರ, ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಗಳ ವ್ಯಾಪ್ತಿಯ ಸುಮಾರು 400 ರೌಡಿಗಳ ಪರೇಡ್‌ ಮಾಡಲಾಯಿತು. ಕಳೆದ ವರ್ಷ ಅನಾರೋಗ್ಯ, ಸನ್ನಡತೆ, ವಯಸ್ಸಾದವರು, ದೈಹಿಕ ಅಸಾಮರ್ಥ್ಯರು, ಜೀವಂತ ಇಲ್ಲದ 42 ರೌಡಿಗಳನ್ನು ಗುರುತಿಸಿ ರೌಡಿಶೀಟರ್‌ ಪಟ್ಟಿಯಿಂದ ಕೈಬಿಡಲಾಗಿದೆ
ಎಂದರು. 

ರೌಡಿಗಳಲ್ಲಿ ಮೂರು ಹಂತ: ಕೊಲೆ, ಕೊಲೆಗೆ ಯತ್ನ, ದರೋಡೆ, ಅಪಹರಣ ಮುಂತಾದ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ರೌಡಿಶೀಟರ್‌ ಪಟ್ಟಿ ತೆರೆಯಲಾಗಿದೆ. ಈ ರೌಡಿಗಳನ್ನು ಎ, ಬಿ ಹಾಗೂ ಸಿ ಎಂದು ವರ್ಗೀಕರಿಸಲಾಗಿದೆ. ಎ ಹಂತದಲ್ಲಿ ಸ್ಥಳೀಯ ರೌಡಿಗಳು, ಬಿ ಹಂತದಲ್ಲಿ ಸ್ಥಳೀಯವಾಗಿ ಕೃತ್ಯ ನಡೆಸಿ ಹೊರಗಡೆ ವಾಸವಾಗಿರುವರು. ಸಿ ಹಂತದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ, ಸಮಾಜದಲ್ಲಿ ಸೌಹಾರ್ದತೆ ಕದಡುವರು, ಶಾಂತಿಗೆ ಭಂಗವುಂಟು
ಮಾಡುವವರು ಎಂದು ವರ್ಗಾಯಿಸಲಾಗಿದೆ. ಎ, ಬಿ ಹಂತದ ರೌಡಿಗಳನ್ನು ರೌಡಿಶೀಟರ್‌ ಪಟ್ಟಿಯಿಂದ ಕೈಬಿಡಲು ಎಸ್‌ಪಿಗೆ ಅವಕಾಶವಿದ್ದರೆ, ಸಿ ಹಂತ ರೌಡಿಗಳನ್ನು ಡಿಎಸ್‌ಪಿಗಳೇ ಕೈಬಿಡಬಹುದು ಎಂದು ಮಾಹಿತಿ ನೀಡಿದರು.

ಎ ಉಪವಿಭಾಗದ ಎಎಸ್‌ಪಿ ಲೋಕೇಶ ಬಿ.ಜೆ., ಪಿಐಗಳಾದ ಪಾಂಡುರಂಗಯ್ಯ, ವಾಜೀದ್‌ ಪಟೇಲ್‌, ಶಕೀಲ್‌ ಅಂಗಡಿ, ಪಿಎಸ್‌ಐಗಳಾದ ಅಕ್ಕಮಹಾದೇವಿ, ಜಗದೇವಪ್ಪ ಪಾಳಾ, ಚಂದ್ರಶೇಖರ ತಿಗಡಿ ಹಾಗೂ ಇತರರಿದ್ದರು. 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.