ಕನ್ನಡ ಭವನದಲ್ಲಿ ಅತ್ಯಾಧುನಿಕ ಸಭಾಂಗಣ ನಿರ್ಮಾಣ
Team Udayavani, Sep 15, 2018, 11:02 AM IST
ಕಲಬುರಗಿ: ಸಾಹಿತ್ಯ ಚಟುವಟಿಕೆಗಳ ಬೆಳವಣಿಗೆ ಹಾಗೂ ಪ್ರೋತ್ಸಾದಾಯಕ ಪ್ರಮುಖ ಧ್ಯೇಯವಾಗಿರುವ ಕಸಾಪದಿಂದ ಹತ್ತಾರು ಕಾರ್ಯಚಟುವಟಿಕೆಗಳು ಮುನ್ನೆಡೆದಿದ್ದು, ಕನ್ನಡ ಭವನದಲ್ಲಿ ಆತ್ಯಾಧುನಿಕ 200 ಜನರು ಕುಳಿತುಕೊಳ್ಳುವಂತಹ ಸುಸಜ್ಜಿತ ಸಭಾಂಗಣ ನಿರ್ಮಿಸಲಾಗಿದೆ. ಅಲ್ಲದೇ ನವೆಂಬರ್ನಲ್ಲಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು 30 ಲಕ್ಷ ರೂ. ವೆಚ್ಚದಲ್ಲಿ ಸಭಾಂಗಣ ನಿರ್ಮಾಣವಾಗಿದೆ. ಇದು ಸಾಹಿತ್ಯ ಚಟುವಟಿಕೆಗಳಿಗೆ ಪೂರಕವಾಗಲಿದೆ ಎಂದು ತಿಳಿಸಿದರು. ಅದೇ ರೀತಿ ಮುಂದಿನ ಹಂತವಾಗಿ ಬಾಪುಗೌಡ ದರ್ಶನಾಪುರ ರಂಗಮಂದಿರ ಆಧುನೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಇದರ
ಜತೆ-ಜತೆಗೆ ಸಾಹಿತ್ಯ ಚಟುವಟಿಕೆಗಳನ್ನು ವೇಗಗೊಳಿಸಲಾಗುವುದು. ಧಾರವಾಡದಲ್ಲಿ ನಡೆಯುವ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ನಂತರ ಕಲಬುರಗಿಗೆ ಮುಂದಿನ ಸಾಹಿತ್ಯ ಸಮ್ಮೇಳನ ತರಲು ಯತ್ನಿಸಲಾಗುವುದು. ಬಹು ಮುಖ್ಯವಾಗಿ ಧಾರವಾಡ ಸಾಹಿತ್ಯ ಮ್ಮೇಳನಾಧ್ಯಕ್ಷರಾಗಿ ಜಿಲ್ಲೆಯವರಾಗಿರುವ ಹಿರಿಯ ಸಾಹಿತಿ ಚನ್ನಣ್ಣ ವಾಲೀಕಾರ ಅವರನ್ನು ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆಯಾಗಲು ಸಹ ಪ್ರಯತ್ನಿಸಲಾಗುವುದು ಎಂದು ಸಿಂಪಿ ವಿವರಿಸಿದರು.
ಕಲಬುರಗಿ ಭಾಗವೇ ಎಲ್ಲದಕ್ಕೂ ಪ್ರಥಮವಾಗಿದೆ. ವಚನ ಸಾಹಿತ್ಯ -ಕನ್ನಡದ ಮೊದಲ ಕೃತಿ ನಮ್ಮ ನೆಲ್ಲದ್ದೇ. ಇಂತಹವುಗಳನ್ನಿಟ್ಟುಕೊಂಡು ಬೇರೆ ಭಾಗದ್ದನ್ನು ಹೊತ್ತುಕೊಂಡು ತಿರುಗುತ್ತಿದ್ದೇವೆ. ಇದು ದೂರಾಗಿ ನಮ್ಮದೇ ಎಲ್ಲರೂ ಹೇಳುವಂತಾಗಬೇಕು ಎಂಬುದೇ ಕಸಾಪ ಆಶಯವಾಗಿದೆ. ಈ ನಿಟ್ಟಿನಲ್ಲಿ ಗಟ್ಟಿಯಾದ ಹೆಜ್ಜೆ ಇಟ್ಟರೆ ನಾಡಿನುದ್ದಕ್ಕೂ ಗಮನ ಸೆಳೆದು ಎಲ್ಲರೂ ಮಾತನಾಡಲು ಅಧ್ಯಾಯ ಶುರುವಾಗುತ್ತದೆ ಎಂದು ತಿಳಿಸಿದರು.
ಕನ್ನಡ ಭವನದಲ್ಲಿ ಸುಸಜ್ಜಿತ ಸಭಾಂಗಣ ಅಲ್ಲದೇ ಗಿಡಮರಗಳ ಪೋಷಣೆ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳು ಮುನ್ನೆಡೆದಿವೆ. ಕನ್ನಡ ಭವನ ಅಭಿವೃದ್ಧಿ ಹಾಗೂ ಸಾಹಿತ್ಯ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿದವರ ಹಾಗೂ
ಧನ ಸಹಾಯ ನೀಡಿದವರ ಪಟ್ಟಿಯನ್ನು ಕನ್ನಡ ಭವನದಲ್ಲಿ ಅಳವಡಿಸಿ ಸ್ಮರಿಸಲಾಗುತ್ತದೆ. ಅಕ್ಟೋಬರ್ನಲ್ಲಿ ನಡೆಯುವ ನೂತನ ಸುಸಜ್ಜಿತ ಸಭಾ ಭವನದ ಉದ್ಘಾಟನಾ ಸಮಾರಂಭದಲ್ಲಿ ಅವರೆಲ್ಲರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಕಸಾಪ ಗೌರವ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ವಿಜಯಕುಮಾರ ಪರೂತೆ, ಕಸಾಪ ಪದಾಧಿಕಾರಿಗಳಾದ ಲಿಂಗರಾಜ ಸಿರಗಾಪುರ, ಶಿವಾನಂದ ಕಶೆಟ್ಟಿ, ಸುಲೇಖಾ ಮಾಲಿಪಾಟೀಲ, ಆನಂದ ನಂದೂರಕರ್, ಝಾಕೀರ ಹುಸೇನ್, ಸಂಜೀವರೆಡ್ಡಿ, ರಾಧಾಕೃಷ್ಣನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ