ವೀರಶೈವ-ಲಿಂಗಾಯತ ಒಂದೇ: ರಂಭಾಪುರಿ ಶ್ರೀ


Team Udayavani, Sep 15, 2018, 11:52 AM IST

gul-5.jpg

ಕಾಳಗಿ: ವೀರಶೈವ ಮತ್ತು ಲಿಂಗಾಯತ ಯಾವತ್ತೂ ಒಂದೇ ಆಗಿದ್ದು, ಕೆಲವರು ನಾಸ್ತಿಕ ಮನೋಭಾವನೆಯಿಂದ ಪರಂಪರೆಗೆ ಕಳಂಕ ಹಚ್ಚುವ ಕೆಲಸದಲ್ಲಿ ತೊಡಗಿದ್ದಾರೆ. ದಾರಿ ತಪ್ಪಿಸುವವರ ಮಾತಿಗೆ ಜನರು ಕಿವಿಗೊಡಬಾರದು ಎಂದು ಬಾಳೆ ಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ ಶಿವಾಚಾರ್ಯ
ಹೇಳಿದರು.

ಕಾಳಗಿ ತಾಲೂಕು ರೇವಗ್ಗಿ (ರಟಕಲ್‌)ಯಲ್ಲಿ ಇಷ್ಟಲಿಂಗ ಪೂಜೆ, ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಮಹೋತ್ಸವ ಹಾಗೂ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಸ್ವಾಮೀಜಿ, ಸತ್ಯ ಧರ್ಮದ ರಕ್ಷಾ ಕವಚವಾಗಿದೆ. ಸತ್ಯದ ಧರ್ಮದಲ್ಲೇ ನಾವೆಲ್ಲರೂ ನಡೆಯಬೇಕಿದೆ ಎಂದು ಹೇಳಿದರು.

ರೇವಣಸಿದ್ದೇಶ್ವರರು ಧಾರ್ಮಿಕತೆ, ಸಾಂಸ್ಕೃತಿಕತೆ ಉಳಿಸಿ ಬೆಳೆಸಿದರು. ನೊಂದವರ ದನಿಯಾಗಿ ಕಷ್ಟಕಾರ್ಪಣ್ಯ ಬಗೆಹರಿಸಿದರು. ಇತಿಹಾಸ ಪ್ರಜ್ಞೆ ಇಲ್ಲದವರು ಅವರಿಗೆ ಪೌರಾಣಿಕ ವ್ಯಕ್ತಿ ಪಟ್ಟ ಕಟ್ಟುತ್ತಿದ್ದಾರೆ ಎಂದು ಹೇಳಿದರು.
 
ಕಾಶಿ ಪೀಠದ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ, ವೀರಶೈವದ ಪಂಚಪೀಠಗಳು ದೇಶದ ಸುಖ, ಶಾಂತಿ ಹಾಗೂ ಸಮೃದ್ಧಿ ಬಯಸುತ್ತವೆ. ಪಂಚಪೀಠದ ಧ್ವಜಗಳು ರೈತರ ಸುಖ, ಶಾಂತಿ, ತ್ಯಾಗ ಭಾವನೆ, ವಿಶಾಲ, ಗಂಭೀರತೆ, ಸತ್ಯ ಹಾಗೂ ಪರಿಪಕ್ವತೆ ಸಂಕೇತವಾಗಿವೆ ಎಂದು ಹೇಳಿದರು.

ರೇಣುಕಾಚಾರ್ಯರು, ಜಗದ್ಗುರು ರೇವಣಸಿದ್ದೇಶ್ವರರು ಹಾಗೂ ರೇಣುಕರ ಕಾಲಮಾನ, ಪವಾಡಗಳು ಬೇರೆ-ಬೇರೆಯಾಗಿವೆ. ಸಾಹಿತಿಗಳು ಬರೆಯುವಾಗ ಕಾಲಮಾನ ಬರೆಯದೆ ಮೂವರು ಗುರುಗಳ ಲೀಲೆಗಳು ಸೇರಿ ಬರೆದಿರುವುದಕ್ಕೆ ಐತಿಹಾಸಿಕ ಗೊಂದಲಗಳು ಸೃಷ್ಟಿಯಾಗಿವೆ ಎಂದು ಶ್ರೀಶೈಲ ಪೀಠದ ಡಾ| ಚನ್ನಸಿದ್ದರಾಮ ಶಿವಾಚಾರ್ಯ ಹೇಳಿದರು.
 
ಬೀದರ ಸಂಸದ ಭಗವಂತ ಖೂಬಾ ಮಾತನಾಡಿದರು. ಇದಕ್ಕೂ ಮೊದಲು ರೇವಗ್ಗಿ ಗ್ರಾಮದಿಂದ ರಟಕಲ್‌ಗ‌ುಡ್ಡದವರೆಗೆ ರಂಭಾಪುರಿ ಹಾಗೂ ಕಾಶಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮೆರವಣಿಗೆ ನಡೆಯಿತು. ಚಂದ್ರಗುಂಡ ಶಿವಾಚಾರ್ಯರು, ವೀರಭದ್ರ ಶಿವಾಚಾರ್ಯರು, ಗುರುಪಾದಲಿಂಗ ಮಹಾಸ್ವಾಮೀಜಿ, ರೇವಣಸಿದ್ದ ಶಿವಾಚಾರ್ಯರು, ಚನ್ನರುದ್ರಮುನಿ ಶಿವಾಚಾರ್ಯರು, ಶಿವಬಸವ ಶಿವಾಚಾರ್ಯರು, ಅಲ್ಲಮ ಪ್ರಭುಲಿಂಗ ಮಹಾಸ್ವಾಮಿ, ಶಿವಕುಮಾರ ಶಿವಾಚಾರ್ಯರು, ಸಿದ್ದಮಲ್ಲ ಶಿವಾಚಾರ್ಯರು, ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು, ಡಾ| ಮಲ್ಲಿಕಾರ್ಜುನ ಗಾಜರೆ, ತಹಶೀಲ್ದಾರ್‌ ಶಾಂತಗೌಡ ಬಿರಾದಾರ, ರಾಮು ರಾಠೊಡ ಇದ್ದರು. ಶಿವಕವಿ ಹಿರೇಮಠ ಹಾಗೂ ದತ್ತಾತ್ರೇಯ ರಾಯಗೋಳ ಕಾರ್ಯಕ್ರಮ ನಿರೂಪಿಸಿದರು.

ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಇಷ್ಟಲಿಂಗ ಪೂಜೆ
ಕಾಳಗಿ: ಸಂಸ್ಕಾರ ಸಂಸ್ಕೃತಿಯ ಆದರ್ಶ ಮೌಲ್ಯಗಳು ಬೆಳೆಸುವುದರ ಮೂಲಕ ರೇವಣಸಿದ್ದೇಶ್ವರರು ಅದ್ಭುತವಾದ ಸತ್ಮಾತಿ ಮಾಡಿದ್ದಾರೆ. ಅವರ ಕಾಂತ್ರಿ ಎಲ್ಲ ಕಾಂತ್ರಿಗಳಿಗೆ ಮೂಲ ಸೆಲೆಯಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಡಾ| ಪ್ರಸನ್ನರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗತ್ಪಾದರು ಅಭಿಪ್ರಾಯಪಟ್ಟರು.

ತಾಲೂಕಿನ ಸುಕ್ಷೇತ್ರ ರೇವಗ್ಗಿ(ರಟಕಲ್‌) ಜಗದ್ಗುರು ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದ ಇಷ್ಠಲಿಂಗ ಮಹಾಪೂಜೆಯಲ್ಲಿ ಆಶೀರ್ವಚನ ನೀಡಿದರು. ಸ್ವಾರ್ಥ ಮತ್ತು ಸಂಕುಚಿತ ಮನೋಭಾವ ಹೆಚ್ಚು ಬೆಳೆಯುತ್ತಿದೆ. ಪರಸ್ಪರ ಸಂಘರ್ಷದಿಂದ ಬದುಕು ದುರ್ಬಲಗೊಳ್ಳುತ್ತಿದೆ. ಅಳುತ್ತ ಬದುಕುವುದಕ್ಕಿಂತ ಜೀವನ ಅರಳುತ್ತ ಬದುಕಬೇಕಾಗುತ್ತಿದೆ. ಸುಂದರವಾದ ಮನೆಯನ್ನು ಎಲ್ಲರೂ ಕಟ್ಟಬಲ್ಲರು ಅದರೆ ಆ ಮನೆಯಲ್ಲಿ ಸಂತೋಷದಿಂದ ಹೇಗೆ ಬದುಕಬೇಕು ಎಂಬುದನ್ನು ತಿಳಿಯಲಾರದವನಾಗಿದ್ದಾನೆ. ಯುವ ಜನಾಂಗದಲ್ಲಿ ಸಂಸ್ಕಾರ, ಸಂಸ್ಕೃತಿ ಆದರ್ಶಗಳನ್ನು ಬೆಳೆಸಬೇಕಾಗಿದೆ.

ಶಾಂತಿ ಬೀಜ ಬಿತ್ತಿ ಸಮಾಜದ ಸ್ವಾಸ್ಥ್ಯ ಕಾಪಾಡಿದ ಕೀರ್ತಿ ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಅವರಿಗೆ ಸಲ್ಲುತ್ತದೆ. ಸಾನ್ನಿಧ್ಯ ವಹಿಸಿದ್ದ ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗತ್ಪಾದರು ಮತ್ತು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗತ್ಪಾದರು ಆಶೀರ್ವಚನ ನೀಡಿದರು. ಶ್ರಾವಣ ತಿಂಗಳ ಪರ್ಯಂತರ ಅನುಷ್ಠಾನ ಕೈಗೊಂಡ ಹೊನ್ನಕಿರಣಗಿ ಪೂಜ್ಯ ಚಂದ್ರಗುಂಡ ಶಿವಾಚಾರ್ಯರ ಸ್ವಾಮಿಗಳು ಶ್ರೀ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಮಂಗಲಗೊಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.