ಗುಣಮಟ್ಟದ ಶಿಕ್ಷಣಕ್ಕೆ ಶರಣಬಸವ ವಿವಿ ಬದ್ದ
Team Udayavani, Sep 18, 2018, 11:17 AM IST
ಕಲಬುರಗಿ: ಗುಣಮಟ್ಟದ ಶಿಕ್ಷಣ ನೀಡಲು ಶರಣಬಸವ ವಿಶ್ವವಿದ್ಯಾಲಯ ಕಂಕಣಬದ್ದವಾಗಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಹೇಳಿದರು. ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ 70ನೇ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಭಾರತಕ್ಕೆ ಸ್ವಾತಂತ್ರ್ಯಾ ದೊರಕಿದ್ದರೂ ಹೈದ್ರಾಬಾದ ಕರ್ನಾಟಕ ಭಾಗದ ಜನರಿಗೆ ಸ್ವಾತಂತ್ರ್ಯಾ ದೊರಕಿರಲಿಲ್ಲ.
ಈ ಭಾಗ ಹೈದ್ರಾಬಾದ ನಿಜಾಮನ ಅಧೀನದಲ್ಲಿತ್ತು. ಸರದಾರ ವಲ್ಲಭಭಾಯಿ ಪಟೇಲ್ ಅವರ ಮುಂದಾಳತ್ವದಿಂದ ಒಂದು ವರ್ಷದ ನಂತರ ಹೈ. ಕ.ಭಾಗಕ್ಕೆ ವಿಮೋಚನೆ ದೊರೆಯಿತು. ಬ್ರಿಟಿಷ್ ಮತ್ತು ನಿಜಾಮನ ಗುಲಾಮಗಿರಿಯಿಂದ ಮುಕ್ತಿ ಹೊಂದಿತು ಎಂದು ಹೇಳಿದರು.
ಸ್ವಾತಂತ್ರ್ಯಾ ಸಿಕ್ಕರೂ ಈ ಭಾಗ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಆಗಿರಲಿಲ್ಲ. ಆದರೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮತ್ತು ಬೇರೆ ಶಿಕ್ಷಣ ಸಂಸ್ಥೆಗಳಿಂದ ಶೈಕ್ಷಣಿಕ ಮಟ್ಟ ಹೆಚ್ಚಾಗುತ್ತಿದೆ. ಕಳೆದ ವರ್ಷದಿಂದ ಶರಣಬಸವ ವಿಶ್ವವಿದ್ಯಾಲಯ ಆರಂಭವಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಈ ಭಾಗದಲ್ಲಿ 4 ವಿಶ್ವವಿದ್ಯಾಲಯಗಳಿವೆ. ವೈದ್ಯಕೀಯ, ಇಂಜಿನಿಯರಿಂಗ್, ಎಂಬಿಎ ಸೇರಿದಂತೆ ಅನೇಕ ಶಾಲಾ
ಕಾಲೇಜುಗಳಲ್ಲಿ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಈ ಭಾಗ ಶಿಕ್ಷಣದ ಕೇಂದ್ರವಾಗಿ ಮಾರ್ಪಟ್ಟಿದೆ. ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿ ಕಳಚಿಕೊಂಡಿದೆ ಎಂದರು.
ವಿವಿ ಕುಲಪತಿ ಡಾ| ನಿರಂಜನ ವಿ. ನಿಷ್ಠಿ, ಸಹ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಡೀನ್ ಡಾ| ಲಿಂಗರಾಜ ಶಾಸ್ತ್ರೀ, ಪ್ರಾಚಾರ್ಯರಾದ ಡಾ| ನೀಲಾಂಬಿಕಾ ಶೇರಿಕಾರ, ಡಾ| ಎಂ.ಆರ್. ಹುಗ್ಗಿ, ಪ್ರೊ| ಬಿ.ಸಿ. ಚವ್ಹಾಣ, ಪಿಒ ವಿನೋದ ಪತಂಗೆ, ಪ್ರೊ| ಶಿಲ್ಪ ಬಿ. ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.
ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಯೋಗ ಮತ್ತು ಕರಾಟೆ ಪ್ರದರ್ಶನ ಮಾಡಿದರು. ಸಂಸ್ಥೆಯ ಬೇರೆ ಬೇರೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
PU Exam ನಕಲು ಮಾಡಲು ಸಹಕಾರ ನೀಡಿಲ್ಲವೆಂದು ಪೇದೆ ಮೇಲೆಯೇ ಹಲ್ಲೆ!
MUST WATCH
ಹೊಸ ಸೇರ್ಪಡೆ
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ