ಮುಸ್ಲಿಮರಿಂದ ದೇಹದಂಡನೆ


Team Udayavani, Sep 22, 2018, 2:21 PM IST

gul-2.jpg

ಕಲಬುರಗಿ: ಮೊಹರಂ ಹಬ್ಬದ ಅಂಗವಾಗಿ ಶಿಯಾ ಮುಸ್ಲಿಮರು ನಗರದಲ್ಲಿ ಶುಕ್ರವಾರ ದೇಹದಂಡನೆ ಮಾಡಿಕೊಂಡರು. ಚಿಕ್ಕ ಬಾಲಕರಿಂದಹಿಡಿದು ವೃದ್ಧರವರೆಗೆ ಕಬ್ಬಿಣದ ಸರಳು,  ಬ್ಲೇಡ್‌ಗಳಿಂದ ದೇಹ ದಂಡಿಸಿಕೊಳ್ಳುತ್ತ ದೇಹವನ್ನು ರಕ್ತಸಿಕ್ತವಾಗಿಸಿಕೊಂಡು ಮೆರವಣಿಗೆಯಲ್ಲಿ ಪಾಲ್ಗೊಂಡರು.

ಮೊಹರಂ ಹಬ್ಬ ಹಿಂದೂ-ಮುಸ್ಲಿಮರ ಭಾವೈಕ್ಯತೆಯ ಪ್ರತೀಕವಾಗಿದ್ದು, ಈ ಹಬ್ಬ ಚಾರಿತ್ರಿಕ ಹಾಗೂ ಧಾರ್ಮಿಕ ಹಿನ್ನೆಲೆ ಹೊಂದಿದೆ. ಮೊಹಮ್ಮದ್‌ ಪೈಗಂಬರ್‌ ಅವರ ಮೊಮ್ಮಗ ಇಮಾಮ್‌ ಹುಸೇನ್‌ ಧರ್ಮದ ಉಳಿವಿಗಾಗಿ ನಡೆದ ಯುದ್ಧದಲ್ಲಿ ಹುತಾತ್ಮರಾದ ಶೋಕಾಚರಣೆ ನಿಮಿತ್ತ ಶಿಯಾ ಮುಸ್ಲಿಮರು ತಮ್ಮ ದೇಹವನ್ನು ತಾವೇ ದಂಡಿಸಿಕೊಳ್ಳುತ್ತಾರೆ.

ನಗರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಾವಿರಾರು ಜನರ ಮಧ್ಯೆ ಸುಮಾರು ಜನರು ರೈಲ್ವೆ ನಿಲ್ದಾಣದಿಂದ ಸರ್ದಾರ್‌ ವಲ್ಲಭಭಾಯಿ ವೃತ್ತದವರೆಗೆ ದೇಹದಂಡಿಸಿಕೊಳ್ಳುತ್ತಾ ಮೆರವಣಿಗೆ ನಡೆಸಿದರು. ಬಾಲಕರು,
ಯುವಕರು ಸೇರಿದಂತೆ ವೃದ್ಧರು ರಕ್ತ ಸುರಿಯುತ್ತಿದ್ದರೂ ಲೆಕ್ಕಿಸದೆ ಕಬ್ಬಿಣದ ಸಂಕೋಲೆ, ಸರಳಿನಿಂದ ದೇಹ
ದಂಡಿಸಿಕೊಂಡರು.

ನಂತರ ವೃತ್ತದಲ್ಲಿ ಸಮಾವೇಶಗೊಂಡ ಧರ್ಮಗುರುಗಳು ಇಮಾಮ್‌ ಹುಸೇನ್‌ರ ಹೋರಾಟದ ಬಗ್ಗೆ ವಿವರಿಸಿದರು. ನೂರಾರು ಮುಸ್ಲಿಂ ಮಹಿಳೆಯರು ಪಾಲ್ಗೊಂಡಿದ್ದರು. ಈ ವೇಳೆ ವಾಹನ ಸವಾರರು ಸೇರಿದಂತೆ ಅನೇಕ ಜನರು ನೆರೆದಿದ್ದರು. ಮುಂಜಾಗ್ರತೆ ಕ್ರಮವಾಗಿ ಪೊಲೀಸ್‌ ಬಿಗಿ ಭದ್ರತೆ ಏರ್ಪಡಿಸಲಾಗಿತು

ಚಿಂಚೋಳಿ ಬಡಿದರ್ಗಾದಲ್ಲಿ ಮೊಹರಂ ಆಚರಣೆ 
ಚಿಂಚೋಳಿ: ಹಿಂದೂ ಮುಸ್ಲಿಮರ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಪಟ್ಟಣ ಸೇರಿದಂತೆ
ತಾಲೂಕಿನ ಅನೇಕ ಗ್ರಾಮಗಳಲ್ಲಿ ಆಚರಿಸಲಾಯಿತು. ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ತವಾಗಿ ಅಲಾಯಿ ಕೂಡಿಸುವ ಸ್ಥಳಗಳನ್ನು ವಿವಿಧ ಬಣ್ಣ ಅಲಂಕಾರಗಳಿಂದ ಸಿಂಗರಿಸಲಾಗಿತ್ತು.

ಗುರುವಾರ ಸಂಜೆ ಪಟ್ಟಣ ಬೀಬೀ ಫಾತಿಮಾ, ಚಂದಾ ಹುಸೇನಿ, ಹಸೇನ ಹುಸೇನಿ ಅಲಾಯಿ ಪೀರ ಬಡಿದರ್ಗಾ, ಚೋಟಿ ದರ್ಗಾ ಅಲ್ಲಿಸಾಬ್‌, ಮದರಸಾಬ್‌ ದರ್ಗಾ ಕೂಡಿಸಿದ ಪೀರ್‌ ಅಲಾಯಿಗಳಿಗೆ ಹಿಂದೂ-ಮುಸ್ಲಿಂ ಮಹಿಳೆಯರು ಹಸಿರು ಬಳೆ, ಉಡಿ ತುಂಬಿ ತಮ್ಮ ಹರಕೆ ಅರ್ಪಿಸಿದರು.

ಶುಕ್ರವಾರ ಮೊಹರಂ ಕೊನೆ ದಿನವಾಗಿರುವುದರಿಂದ ಅಲಾಯಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು. ಪಟ್ಟಣದ 15 ಸ್ಥಳಗಳಲ್ಲಿ ಕೂಡಿಸಿದ ಅಲಾಯಿಗಳು ಬಡಿದರ್ಗಾಕ್ಕೆ ಬಂದು ಹಸೇನ-ಹುಸೇನಿ, ಚಂದಾ ಹುಸೇನಿ ಭೇಟಿ ಮಾಡಿ ತಮ್ಮ ಸ್ಥಳಗಳಿಗೆ ತೆರಳಿದರು.  ಬಡಿದರ್ಗಾದಲ್ಲಿ ಹುಲಿವೇಷ ಕುಣಿತ ಮತ್ತು ಮೊಹರಂ ಪದಗಳನ್ನು ಜನರು ನೋಡಿ ಆನಂದಿಸಿದರು.

364 ವರ್ಷಗಳಿಂದ ಆಚರಿಕೊಂಡು ಬರುತ್ತಿರುವ ಮೊಹರಂ ಹಬ್ಬವನ್ನು ನೋಡಲು ಸುತ್ತಲಿನ ಜನರು ಆಗಮಿಸಿದ್ದರು. ಬಡಿದರ್ಗಾ ಸಜ್ಜಾದೇ ನಶಿನ ಅಕಬರ ಹುಸೇನಿ ಸಾಹೇಬ ನೇತೃತ್ವದಲ್ಲಿ ಮೊಹರಂ ಅಚರಣೆ ಅದ್ಧೂರಿಯಾಗಿ ನಡೆಯಿತು.
 
ಪುರಸಭೆ ಮಾಜಿ ಅಧ್ಯಕ್ಷ ಕೆ.ಎಂ. ಬಾರಿ, ಮಕಬೂಲಖಾನ್‌, ಶಿವಕುಮಾರ ಕೊಳ್ಳೂರ, ಎಸ್‌.ಕೆ. ಮುಕ್ತಾರ, ನಿಯಾಜ್‌ ಅಲಿ, ಶ್ರೀಕಾಂತ ಜಾನಕಿ, ಸುಬ್ಬಣ್ಣ ತೋಡಿ ಇನ್ನಿತರರು ಭಾಗವಹಿಸಿದ್ದರು.

ತಾಲೂಕಿನ ಮರನಾಳ, ಹೂವಿನಬಾವಿ, ಸುಲೇಪೇಟ, ಚಂದನಕೇರಾ, ಕೋಡ್ಲಿ, ರಟಕಲ್‌, ಗಡಿಕೇಶ್ವಾರ, ನಿಡಗುಂದಾ, ಕುಂಚಾವರಂ ಇನ್ನಿತರ ಗ್ರಾಮಗಳಲ್ಲಿ ಮೊಹರಂ ಹಬ್ಬ ಆಚರಿಸಲಾಯಿತು. ಸಿಪಿಐ ಇಸ್ಮಾಯಿಲ್‌ ಶರೀಫ, ಪಿಎಸ್‌ಐ ಎ. ಎಸ್‌. ಪಟೇಲ್‌, ರಾಜಶೇಖರ ರಾಠೊಡ ಸೂಕ್ತ ಬಂದೋಬಸ್ತ್ ಮಾಡಿದ್ದರು.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.