ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ: ಜಿಲ್ಲಾಧಿಕಾರಿ


Team Udayavani, Sep 23, 2018, 4:49 PM IST

gul-2.jpg

ಕಲಬುರಗಿ: ಜಿಲ್ಲೆಯಲ್ಲಿ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳ ಸಮೀಕ್ಷೆಯನ್ನು ಇನ್ನು ಮುಂದೆ ಸರ್ಕಾರದ ಮೊಬೈಲ್‌ ಆ್ಯಪ್‌ ಮೂಲಕ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದರು.

ನಗರದ ಡಾ| ಎಸ್‌.ಎಂ. ಪಂಡಿತ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಳೆ ಸಮೀಕ್ಷೆ ಮೊಬೈಲ್‌ ಆ್ಯಪ್‌ ಬಳಕೆದಾರರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ 1068 ಜನರನ್ನು ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆಗಾಗಿ ಗುರುತಿಸಲಾಗಿದ್ದು, ಒಂದು ಪ್ಲಾಟಿನ ಸಮೀಕ್ಷೆ ಕೈಗೊಂಡರೆ ಸೂಕ್ತ ಗೌರವ ಧನ ನೀಡಲಾಗುವುದು ಎಂದರು.

ಬೆಳೆ ಸಮೀಕ್ಷೆ ಸೂಕ್ತ ಸಮಯದಲ್ಲಿ ಕೈಗೊಳ್ಳಬೇಕಾಗುತ್ತದೆ. ಕಂದಾಯ ಇಲಾಖೆ ಅಧಿಕಾರಿಗಳು ಮೊಬೈಲ್‌ ಹೊಂದಿರುವ ಖಾಸಗಿ ವ್ಯಕ್ತಿಗಳಿಗೆ ಸಮೀಕ್ಷೆಗಾಗಿ ಸಹಾಯ ಮಾಡಬೇಕು. ಗ್ರಾಮ ಲೆಕ್ಕಿಗರನ್ನು ಮೇಲ್ವಿಚಾರಕರೆಂದು ನೇಮಿಸಲಾಗುತ್ತಿದ್ದು, ಖಾಸಗಿ ವ್ಯಕ್ತಿಗಳು ಕೈಗೊಂಡಿರುವ 40 ಪ್ಲಾಟುಗಳ ಬೆಳೆ ಸಮೀಕ್ಷೆ ಪರಿಶೀಲಿಸಿ, ದೃಢೀಕರಿಸಿ ಸಲ್ಲಿಸಬೇಕು. ಪ್ರತಿ ವರ್ಷ ಮೂರು ಖುತುಮಾನಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಅಧಿಕಾರಿಗಳಿಂದ ಸಾಧ್ಯವಿಲ್ಲ ಎನ್ನುವ ಭಾವನೆಯಿಂದ ಸಮೀಕ್ಷೆಗಾಗಿ ಖಾಸಗಿ ವ್ಯಕ್ತಿಗಳ ಸಹಾಯ ಪಡೆಯಲಾಗುತ್ತಿದೆ ಎಂದರು.

ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಕೃಷಿಗೆ ಸಂಬಂಧಿತ ಇನ್ನಿತರ ಇಲಾಖೆಗಳಿಂದ ಪ್ರತಿವರ್ಷ ಬೆಳೆ ಸಮೀಕ್ಷೆ ಮಾಡುವ ಪದ್ಧತಿ ಈ ಹಿಂದಿನಿಂದಲೂ ಇದೆ. ಈ ವರ್ಷದಿಂದ ಬೆಳೆ ಸಮೀಕ್ಷೆಯನ್ನು ಗಣಕೀಕೃತಗೊಳಿಸಲಾಗುತ್ತಿದ್ದು, ಮೊಬೈಲ್‌ ಆ್ಯಪ್‌ ಮೂಲಕ ಕೃಷಿ ಕ್ಷೇತ್ರದ ಹಾಗೂ ಇಳುವರಿ ಗಣಕೀಕರಣ ಮಾಡಲಾಗುತ್ತಿದೆ.

ಮೊಬೈಲ್‌ ಆ್ಯಪ್‌ನಿಂದ ಕೈಗೊಳ್ಳಲಾಗುವ ನಿಖರವಾದ ಬೆಳೆ ಸಮೀಕ್ಷೆಯಿಂದ ಬರಗಾಲ ಅಥವಾ ಅತಿವೃಷ್ಟಿ ಸಮಯದಲ್ಲಿ ರೈತರಿಗೆ ಪರಿಹಾರ ನಿಗದಿಪಡಿಸಲು ಅನುಕೂಲವಾಗುವುದು. ಬೆಳೆ ಸಮೀಕ್ಷೆಯಿಂದಾಗಿ ಎಷ್ಟು ಪ್ರದೇಶದಲ್ಲಿ ಯಾವ ಬೆಳೆ ಇದೆ ಹಾಗೂ ಎಷ್ಟು ಇಳುವರಿ ಬರುತ್ತದೆ ಎಂಬ ಅಂಕಿ-ಅಂಶಗಳನ್ನು ಸಂಗ್ರಹಿಸಲು ಸಾಧ್ಯವಾಗಿ ಆಹಾರ ಭದ್ರತೆ ಯೋಜನೆ ರೂಪಿಸಲು ಅನುಕೂಲವಾಗುವುದು ಎಂದರು. 

ರೈತರು ಪ್ರತಿ ವರ್ಷ ತಮ್ಮ ಹೊಲಗಳಲ್ಲಿ ಬೆಳೆ ಪದ್ಧತಿಯನ್ನು ಬದಲಿಸುತ್ತಾರೆ. ಇದರ ಮಾಹಿತಿ ಸೂಕ್ತವಾಗಿ ಲಭ್ಯವಾಗುವುದಿಲ್ಲ. ಪ್ರಸಕ್ತ ವರ್ಷದಿಂದ ಕೈಗೊಳ್ಳಲಾಗುತ್ತಿರುವ ಮೊಬೈಲ್‌ ಆ್ಯಪ್‌ ಸಮೀಕ್ಷೆಯಿಂದ ನಿಖರವಾಗಿ ಯಾವ ಹೊಲದಲ್ಲಿ ಯಾವ ಬೆಳೆ ಇದೆ ಎಂಬುದನ್ನು ತಿಳಿಯಬಹುದಾಗಿದೆ ಎಂದರು. ಪ್ರೊಬೇಷನರಿ ಐ.ಎ.ಎಸ್‌. ಅಧಿಕಾರಿ ಲೋಖಂಡೆ ಸ್ನೇಹಲ್‌ ಸುಧಾಕರ, ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.