ಸರ್ಕಾರಿ ಮಾತ್ರೆ ನುಂಗಲು ಹಿಂಜರಿಕೆ ಬೇಡ


Team Udayavani, Sep 29, 2018, 2:24 PM IST

gul-1.jpg

ವಾಡಿ: ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಮೂಲಕ ಅಭಿಯಾನ ರೂಪದಲ್ಲಿ ಸರಕಾರ ವಿತರಿಸುವ ಯಾವುದೇ ಮಾತ್ರೆಗಳನ್ನು ನುಂಗಲು ಸಾರ್ವಜನಿಕರು ಹಿಂಜರಿಯಬಾರದು ಎಂದು ತಾಲೂಕು ವೈದ್ಯಾಧಿಕಾರಿ ಸುರೇಶ ಮೇಕಿನ್‌ ಹೇಳಿದರು. 

ಪುರಸಭೆ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಅರಿವು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಘೀ ಹಾಗೂ ಆನೆಕಾಲು ರೋಗಗಳು ಹರಡದಂತೆ ತಡೆಯಲು ಮುಂಜಾಗೃತಾ ಕ್ರಮವಾಗಿ ಆರೋಗ್ಯ ಇಲಾಖೆ ವತಿಯಿಂದ ಮಾತ್ರೆ ವಿತರಣೆ ಅಭಿಯಾನ
ಹಾಕಿಕೊಳ್ಳಲಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಮತ್ತು ಮನೆಗಳಿಗೆ ತೆರಳಿ ರೋಗನಿರೋಧಕ ಮಾತ್ರೆಗಳನ್ನು ನೀಡಲಾಗುತ್ತದೆ. ಮಾತ್ರೆಗಳ ಸೇವನೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆ ಎಂಬ ತಪ್ಪು ಭಾವನೆ ಜನರಲ್ಲಿದೆ. ಇದು ರೋಗಗಳ ನಿಯಂತ್ರಣಕ್ಕೆ ಅಡ್ಡಿಯಾಗುತ್ತಿದೆ. ಜನರಲ್ಲಿನ ಅಪನಂಬಿಕೆ ಹೊಡೆದೋಡಿಸಲು ಜನಪ್ರತಿನಿಧಿಗಳು, ಹಿರಿಯ ಮುಖಂಡರು ಮತ್ತು ಸಂಘ ಸಂಸ್ಥೆಗಳ ಕಾರ್ಯಕರ್ತರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದರು.

ವ್ಯಾಪಕ ಜಾಗೃತಿ ಅಭಿಯಾನದ ಮೂಲಕವೇ ರಾಜ್ಯದಲ್ಲಿ ಪೋಲಿಯೋ ರೋಗವನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲಾಗಿದೆ. ಈಗ ಇಂದ್ರಧನುಷ್‌ ಎನ್ನುವ ಅಭಿಯಾನವನ್ನು ಜನರ ಆರೋಗ್ಯ ಕಾಳಜಿಯೊಂದಿಗೆ ಆರಂಭಿಸಲಾಗಿದೆ. ಆನೆಕಾಲು ರೋಗ ಕಲಬುರಗಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ.
 
ವಾಡಿ ಪಟ್ಟಣದಲ್ಲಿ ರೋಗ ಶಂಕಿತರ ರಕ್ತ ಪರೀಕ್ಷೆ ಮಾಡಲಾಗಿದ್ದು, ಮೂರು ಜನರಿಗೆ ಆನೆಕಾಲು ರೋಗದ ಸೋಂಕು ತಗುಲಿದೆ. ರೋಗ ನಿರೋಧಕ ಮಾತ್ರೆಗಳನ್ನು ನೀಡಲು ಮನೆಗೆ ಹೋದರೂ ಕೆಲವರು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ ಎಂದು ಕಳವಳ ವಕ್ತಪಡಿಸಿದರು.

ಸೊಳ್ಳೆ ಕಚ್ಚಿದ 10 ವರ್ಷಗಳ ನಂತರ ಕಾಲು ಮತ್ತು ಕೈಗಳು ಊದಿಕೊಳ್ಳುತ್ತವೆ. ಆಗ ರೋಗ ನಿಯಂತ್ರಣ ಅಸಾಧ್ಯವಾಗುತ್ತದೆ. ಮಾತ್ರೆಗಳನ್ನು ನುಂಗಿದರೆ ಆನೆಕಾಲು ರೋಗ ಹರಡದಂತೆ ತಡೆದು ಆರೋಗ್ಯವಂತರಾಗಿ ಬದುಕಬಹುದು ಎಂದರು.
ಪುರಸಭೆ ಸದಸ್ಯ ದೇವಿಂದ್ರ ಕರದಳ್ಳಿ ಮಾತನಾಡಿ, ಅಸ್ವತ್ಛತೆ ಎಲ್ಲಿರುತ್ತದೋ ಅಲ್ಲಿ ರೋಗಾಣುಗಳಿರುತ್ತವೆ. ಅದು ನಮ್ಮ ಅನಾರೋಗ್ಯಕ್ಕೆ ಕಾರಣವಾಗುತ್ತದೆ.

ಪುರಸಭೆ ಪೌರಕಾರ್ಮಿಕರು ಪಟ್ಟಣದ ಸ್ವತ್ಛತೆಗೆ ಶ್ರಮಿಸುತ್ತಿದ್ದಾರೆ. ಹಿಂದಿಗಿಂತಲೂ ಇಂದು ವಾಡಿ ಪಟ್ಟಣ ಸ್ವತ್ಛತೆಯಲ್ಲಿ ಮುಂದಿದೆ. ಮನೆ ಮನೆಯಿಂದ ಕಸ ಸಂಗ್ರಹ ಕಾರ್ಯ ಶುರುವಾದ್ದರಿಂದ ಅಸ್ವತ್ಛತೆ ನಿಯಂತ್ರಣದಲ್ಲಿದೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷೆ ಮೈನಾಬಾಯಿ ರಾಠೊಡ ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಡಾ| ಅಮೃತಾ, ಪುರಸಭೆ ಸದಸ್ಯರಾದ ಶರಣು ನಾಟೀಕಾರ, ಶೋಭಾ ಪವಾರ, ಅನಿತಾ ರಾಠೊಡ, ಜಿಲ್ಲಾ ಸಮೀಕ್ಷಣಾಧಿಕಾರಿ ಅನೀಲ ತಾಳಿಕೋಟಿ, ಪುರಸಭೆ ಸಮುದಾಯ ಸಂಘಟನಾಧಿಕಾರಿ ಕಾಶೀನಾಥ ಧನ್ನಿ, ಕಂದಾಯ ಅಧಿಕಾರಿ ಎಂ.ಪಂಕಜಾ, ಹಿರಿಯ ಆರೋಗ್ಯ ನಿರೀಕ್ಷಕ
ಶರಣಪ್ಪ ಮಡಿವಾಳ, ಈಶ್ವರ ಅಂಬೇಕರ, ವಿಶ್ವನಾಥ ಭಾಗೋಡಿ, ವಿಠ್ಠಲ ಸಿಂಗ್‌, ಶಿಕ್ಷಕ ರಮೇಶ ಮಾಶಾಳ, ವಿಶ್ವಾರಾಧ್ಯ ಪಾಲ್ಗೊಂಡಿದ್ದರು.

ಮಲ್ಲಿಕಾರ್ಜುನ ಹಡಪದ ನಿರೂಪಿಸಿ, ವಂದಿಸಿದರು. ನಂತರ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.