ಅಹಿಂಸೆ ಶಕ್ತಿ ತೋರಿಸಿದ್ದು ಗಾಂಧೀಜಿ
Team Udayavani, Oct 7, 2018, 2:02 PM IST
ಶಹಾಬಾದ: ಅಹಿಂಸಾತ್ಮಕ ಹೋರಾಟದ ಮೂಲಕವು ಗೆಲ್ಲಬಹುದು ಎನ್ನುವುದನ್ನು ಜಗತ್ತಿಗೆ ತೋರಿಸಿಕೊಟ್ಟ ಮಹಾಚೇತನ ಮಹಾತ್ಮ ಗಾಂಧೀಜಿ ಎಂದು ಗ್ರೇಡ್-1 ತಹಶೀಲ್ದಾರ್ ಅಂಜುಮ್ ತಬಸೂಮ್ ಹೇಳಿದರು.
ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಸ್ವತ್ಛ ಭಾರತ ಪರಿಕಲ್ಪನೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಬ್ರಿಟಿಷರ ದಾಸ್ಯದಿಂದ ಮುಕ್ತಗೊಂಡು ಅಹಿಂಸಾ ಚಳವಳಿ ಮೂಲಕ ಮಹಾತ್ಮ ಗಾಂಧಿಧೀಜಿ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ಗುಣಗಾನ ಮಾಡುತ್ತೇವೆ. ಏಕೆಂದರೆ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದರು ಎನ್ನುವುದಕ್ಕಿಂತ, ಹಿಂಸೆ ಇಲ್ಲದೇ ಶಾಂತಿಯ ಹೋರಾಟ ಮಾಡಿದರು ಎನ್ನುವ ಕಾರಣ ಮುಖ್ಯವಾದದ್ದು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರೇಡ್-2 ತಹಶೀಲ್ದಾರ್ ರವೀಂದ್ರ ಧಾಮಾ , ಮಹಾತ್ಮ ಗಾಂಧಿ ಅವರು ಅನುಸರಿಸಿದ ಸತ್ಯ, ಶಾಂತಿ ಅಹಿಂಸೆ, ತ್ಯಾಗ, ಸತ್ಯಾಗ್ರಹದಿಂದ ರಕ್ತರಹಿತ ಕ್ರಾಂತಿ ಉಂಟಾಗಿ ನಮಗೆ ಸ್ವಾತಂತ್ರ್ಯ ದೊರಕಿತು ಎಂದರಲ್ಲದೇ ಸ್ವತ್ಛತೆ ಜವಾಬ್ದಾರಿ ಎಲ್ಲರದ್ದು ಎಂದು ಹೇಳಿದರು. ಸರಕಾರಿ ಪ.ಪೂ ಕಾಲೇಜಿನ ಪ್ರಾಂಶುಪಾಲ ಶಮಸುದ್ದಿನ್ ಪಟೇಲ್, ದಲಿತ ಸಾಹಿತ್ಯ ಅಕಾಡೆಮಿ ಶಹಾಬಾದ ತಾಲೂಕಾಧ್ಯಕ್ಷ ನಾಗಪ್ಪ ಎಸ್.ಬೆಳಮಗಿ ಮಾತನಾಡಿದರು.
ಶಿವಪುತ್ರಪ್ಪ ಕೋಣಿನ್, ದೂರದರ್ಶನ ನಿರ್ದೇಶಕ ಶಂಕರ ಕೋಡ್ಲಾ, ಏಮನಾಥ ರಾಠೊಡ, ಡೋಹರ್ ಕಕ್ಕಯ್ಯ ಸಮಾಜದ ಸಾಯಿಬಣ್ಣ ಎಂ. ಹೋಳ್ಕರ್, ದಸಂಸ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಕರಣಿಕ್, ಮಾದಿಗ ದಂಡೋರ ಸಮಿತಿ ಅಧ್ಯಕ್ಷ ಸಂತೋಷ ಹುಲಿ, ಕಸಾಪ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ, ಕಸಾಪ ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪಟ್ಟಣಕರ್, ಅಮರ ಕೋರೆ ಹಾಜರಿದ್ದರು. ಇದೇ ವೇಳೆ ಆಕಾಶವಾಣಿ ಕಲಾವಿದರು ಗಾಯನ ಪ್ರಸ್ತುತಪಡಿಸಿದರು.
ಎಂ.ಎನ್. ಸುಗಂ ನಿರೂಪಿಸಿದರು, ರವೀಂದ್ರ ಬೆಳಮಗಿ ಸ್ವಾಗತಿಸಿದರು, ಹಾಜಪ್ಪ ರಾಮಪುರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು