ಗಂಡು ಶಿಶು ಪತ್ತೆ ಪ್ರಕರಣ: ಸುಂಠಾಣದಲ್ಲಿ ವಿಚಾರಣೆ
Team Udayavani, Oct 14, 2018, 1:16 PM IST
ಚಿಂಚೋಳಿ: ತಾಲೂಕಿನ ಸುಂಠಾಣ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಪಕ್ಕದಲ್ಲಿ ಗಂಡು ಶಿಶು ಬಿಟ್ಟು ಹೋಗಿರುವ ಪ್ರಕರಣ ಕುರಿತು ಗ್ರಾಮಕ್ಕೆ ಶನಿವಾರ ಭೇಟಿ ನೀಡಿ ಅಲ್ಲಿನ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರನ್ನು ವಿಚಾರಿಸಲಾಗಿದೆ ಎಂದು ರಟಕಲ್ ಪೊಲೀಸ್ ಠಾಣೆ ಪಿಎಸ್ಐ ಇಂದಿರಾ ಬಿ.ಪಾಟೀಲ ಚಿಂಚೋಳಿ ತಿಳಿಸಿದ್ದಾರೆ.
ಸುಂಠಾಣ ಗ್ರಾಮದಲ್ಲಿ ಗಂಡು ಶಿಶುವೊಂದನ್ನು ರಸ್ತೆ ಪಕ್ಕದಲ್ಲಿ ಬಿಟ್ಟು ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಟಕಲ್ ಮತ್ತು ಕೋಡ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಹೆರಿಗೆ ಆಗಿರುವ ಮಹಿಳೆಯರ ದಾಖಲಾತಿಗಳನ್ನು ಪರಿಶೀಲಿಸಲಾಗಿದೆ. ಗ್ರಾಮದಲ್ಲಿ ಗರ್ಭಿಣಿಯರ ಮತ್ತು ಬಾಣಂತಿಯರ ಮಾಹಿತಿಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಮಗುವಿನ ಪಾಲಕರ ಪತ್ತೆಯಾಗಿಲ್ಲ. ಈಗಾಗಲೇ ನವಜಾತ ಗಂಡು ಶಿಶುವನ್ನು ಕಲಬುರಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪಾಲಕರ ಪತ್ತೆ ಹಚ್ಚುವ ಕಾರ್ಯ ಜಾರಿಯಲ್ಲಿದೆ.
ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ