“ಹಿಂದೂ’ಗೆ ಧರ್ಮ ರೂಪ ನೀಡಿದ್ದು ಆಂಗ್ಲರು


Team Udayavani, Oct 15, 2018, 1:30 PM IST

gul-8.jpg

ಕಲಬುರಗಿ: ಹಿಂದೂ ಎಂಬ ಐತಿಹಾಸಿಕ ಪದವನ್ನು ಧರ್ಮ ರೂಪದಲ್ಲಿ ಹುಟ್ಟು ಹಾಕಿದ್ದು ಬ್ರಿಟಿಷರು. 18ನೇ ಶತಮಾನದವರೆಗೆ ಹಿಂದೂ ಪದ ಧಾರ್ಮಿಕ ಅರ್ಥದಲ್ಲಿ ಇರಲಿಲ್ಲ ಎಂದು ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದ ವೈಜ್ಞಾನಿಕ ಸಮಾಜವಾದ
ಅಧ್ಯಯನ ಕೇಂದ್ರದ ನಿರ್ದೇಶಕ ಡಾ| ಎನ್‌. ಅಂಜಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಸೂಪರ್‌ ಮಾರ್ಕೆಟ್‌ನಲ್ಲಿರುವ ಹೈದ್ರಾಬಾದ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿ ಸಭಾಂಗಣದಲ್ಲಿ ರವಿವಾರ ದೇವಿಪ್ರಸಾದ ಚಟ್ಟೋಪಾಧ್ಯಾಯ ಜನ್ಮ ಶತಮಾನೋತ್ಸವ ಸಮಿತಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಅವರು ಆಶಯ ಭಾಷಣ ಭಾಷಣ ಮಾಡಿದರು.

ಹಿಂದೂ ಎಂಬುವುದು ಐತಿಹಾಸಿಕ ಪದವಾಗಿದ್ದು, ರಾಜತರಂಗಿಣಿ ಸೇರಿದಂತೆ ಅನೇಕ ಐತಿಹಾಸಿಕ ಗ್ರಂಥಗಳಲ್ಲಿ ಹಿಂದೂ ಪದ ಬಳಕೆ ಮಾಡಲಾಗಿದೆ. ಆದರೆ, ದೇಶದಲ್ಲಿ ತಮ್ಮ ಮಾರುಕಟ್ಟೆಯನ್ನು ವಿಸ್ತರಿಸಲು ಬ್ರಿಟಿಷರು ಜನತೆಯನ್ನು ಹಿಂದೂಗಳೆಂದು ವಿಂಗಡಿಸಿ ಹಿಂದುತ್ವವನ್ನು ರಚಿಸಿದರು
ಎಂದು ವಿದ್ವಾಂಸರ ಪ್ರತಿಪಾದನೆಯಾಗಿದೆ ಎಂದರು. 

ಮುಸ್ಲಿಂ, ಕ್ರೈಸ್ತ, ಪಾರ್ಸಿ ಇತರ ಧರ್ಮಗಳ ಬಗ್ಗೆ ಸ್ಪಷ್ಟ ಉಲ್ಲೇಖವಿದೆ. ಆದರೆ, ದೇಶದಲ್ಲಿ ಮುಸ್ಲಿಂ, ಕ್ರೈಸ್ತ, ಪಾರ್ಸಿ ಧರ್ಮದವರನ್ನು ಆಯಾ ಜಾತಿಯವರೆಂದು ಹಾಗೂ ಈ ಜಾತಿಗಳನ್ನು ಅನುಸರಿಸದವರನ್ನು ಹಿಂದೂಗಳೆಂದು ಬ್ರಿಟಿಷರು ವಿಂಗಡಿಸುವ ಕೆಲಸ ಮಾಡಿದರು. ಮುಂದೆ 1872
ರಲ್ಲಿ ನಡೆದ ದೇಶದ ಮೊದಲ ಜನಗಣತಿಯಲ್ಲೂ ಇದನ್ನೇ ಅಧಿಕೃತವಾಗಿ ದಾಖಲೆಗಳಲ್ಲಿ ಬ್ರಿಟಿಷರು ಸೇರಿಸಿದರು. ಈ ಮೂಲಕ ಭಾರತದ ಬಹುಸಂಖ್ಯೆಯ ಜನ ಹಿಂದುಗಳು. ಇದು ಹಿಂದೂಸ್ಥಾನ. ಇಲ್ಲಿನ ಜನರು ಹಿಂದಿ ಭಾಷಿಕರು ಎಂದು ಬಿಂಬಿಸಿ ತಮ್ಮ ಮಾರುಕಟ್ಟೆಯನ್ನು ಬ್ರಿಟಿಷರು ವೃದ್ಧಿಸಿಕೊಂಡರು ಎಂದರು.

ಇದೇ ವೇಳೆ ಬ್ರಿಟಿಷರ ಕಾಲಕ್ಕಿಂತಲೂ ಮುಂಚೆ ಲಿಂಗಾಯತರು ಪ್ರತ್ಯೇಕವಾಗಿ ಗುರುತಿಸಿಕೊಂಡಿದ್ದರು ಎಂಬುವುದು ದಾಖಲೆಗಳಿಂದ ತಿಳಿಯುತ್ತಿದೆ. ಹೀಗಾಗಿ ಲಿಂಗಾಯತರು ಜೈನರಂತೆ ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದರು.

ಭಾರತದ ಚರಿತ್ರೆಯನ್ನು ಮಾರ್ಕ್‌ವಾದದ ದೃಷ್ಟಿಕೋನದಲ್ಲಿ ನೋಡಿದ ದೇವಿಪ್ರಸಾದ ಚಟ್ಟೋಪಾಧ್ಯಾಯರು, ಭಾರತೀಯ ಸಂಸ್ಕೃತಿಯನ್ನು ವೈಜ್ಞಾನಿಕ ಆಧಾರದಲ್ಲಿ ತಿಳಿಸಲು ಯತ್ನಿಸಿದವರಲ್ಲಿ ಒಬ್ಬರು. ಆದರೆ, ಈಗ ತತ್ವಶಾಸ್ತ್ರದ ಬಗ್ಗೆ ಆಸಕ್ತಿ ಕ್ಷೀಣಿಸುತ್ತಿದ್ದು, ಕರ್ನಾಟಕದಲ್ಲಿರುವ 17
ವಿಶ್ವವಿದ್ಯಾಲಯಗಳಲ್ಲಿ ತತ್ವಶಾಸ್ತ್ರದ ವಿಭಾಗಗಳು ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಿನ ಖ್ಯಾತ ವಿಚಾರವಾದಿ ಡಾ| ಎನ್‌. ಗಾಯತ್ರಿ ಮಾತನಾಡಿ, ದೇವಿಪ್ರಸಾದ ಚಟ್ಟೋಪಾಧ್ಯಾಯ ಅವರ ವಿಚಾರಗಳಲ್ಲಿ ಜ್ಞಾನದ ಬೆಳಕಿದೆ. ಅವರ ವಿಚಾರಗಳು ಅತ್ಯಂತ ಅಮೂಲ್ಯವಾಗಿದ್ದು, ಪ್ರತಿಯೊಬ್ಬರಿಗೂ ಮುಟ್ಟಿಸುವ ಕಾರ್ಯ ಆಗಬೇಕೆಂದರು.

ಖ್ಯಾತ ಕಲಾವಿದ ಡಾ| ವಿ.ಜಿ. ಅಂದಾನಿ ಉದ್ಘಾಟಿಸಿದರು. ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜು ಇಲಾಖೆ ಉಪ ನಿರ್ದೇಶಕ ಶಿವಶರಣಪ್ಪ ಮುಳೇಗಾಂವ, ಅರುಣಕುಮಾರ, ಡಾ| ಶಿವಗಂಗಮ್ಮಾ ರುಮ್ಮಾ, ಜೆ. ಮಲ್ಲಪ್ಪ, ಅಲ್ತಾಫ್‌ ಇನಾಂದಾರ್‌ ಹಾಜರಿದ್ದರು. ಡಾ| ಈಶ್ವರಯ್ಯ ಮಠ ಸ್ವಾಗತಿಸಿದರು, ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಿದರು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.