ರಾವಣ ದಹನ ದುಷ್ಟ ಶಕ್ತಿ ಸಂಹಾರ ಸಂಕೇತ


Team Udayavani, Oct 20, 2018, 12:12 PM IST

gul-2.jpg

ವಾಡಿ: ಮಾತೆ ದುರ್ಗೆ ಎದುರು ರಾವಣ ಪ್ರತಿಕೃತಿ ದಹನ ಮಾಡುವ ಕ್ರಿಯೆ ದುಷ್ಟ ಶಕ್ತಿಗಳ ಸಂಹಾರದ ಸಂಕೇತ ಎಂದು ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹೇಳಿದರು. 

ವಿಜಯದಶಮಿ ನಿಮಿತ್ತ ಗುರುವಾರ ಪಟ್ಟಣದ ರೈಲ್ವೆ ಕಾಲೋನಿಯಲ್ಲಿ ಏರ್ಪಡಿಸಲಾಗಿದ್ದ ದುರ್ಗಾ ಪೂಜೆ ಹಾಗೂ ರಾವಣ ದಹನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಾಡಹಬ್ಬ ದಸರಾ ವಿಜಯದ ಸಂಕೇತವಾಗಿದ್ದು, ರಕ್ಕಸರ ವಧೆ ಮಾಡುವ ಮೂಲಕ ದೇವಿ
ಶನಿ ಪೀಡೆಗಳನ್ನು ತೊಲಗಿಸುತ್ತಾಳೆ. ಹತ್ತು ದುಷ್ಟ ಗುಣಗಳನ್ನು ಹೊಂದಿದ ರಾವಣ ರಕ್ಕಸ ಪ್ರವೃತ್ತಿಯ ಅಸುರನಾಗಿದ್ದ. ರಾವಣ ದಹನ ಎನ್ನುವುದು ದಸರಾ ಹಬ್ಬದ ವಿಶೇಷತೆಯಾಗಿ ಬೆಳೆದು ಬಂದಿದೆ ಎಂದರು. ಮಾಜಿ ಶಾಸಕ ವಾಲ್ಮೀಕಿ ನಾಯಕ ಮಾತನಾಡಿ, ದಸರಾ ಹಬ್ಬವನ್ನು
ಹಿಂದೂಗಳು ಜಾತಿ ಬೇಧವಿಲ್ಲದೆ ಪಕ್ಷಾತೀತವಾಗಿ ಸಂಭ್ರಮದಿಂದ ಆಚರಿಸುವಂತೆ ಆಗಬೇಕು. ಹಬ್ಬಗಳು ರಾಜಕೀಯ ಪ್ರೇರಿತವಾಗಬಾರದು. ವಿಶೇಷವಾಗಿ ವಿಜಯದಶಮಿ ಹಬ್ಬದ ಸಾರ್ವಜನಿಕ ಆಚರಣೆ ಎಲ್ಲ ಧರ್ಮಗಳ ಜನರನ್ನು ಒಳಗೊಂಡಿರಬೇಕು ಎಂದರು.

40 ಅಡಿ ಎತ್ತರದ ರಾವಣ ಪ್ರತಿಕೃತಿಗೆ ಅಗ್ನಿಸ್ಪರ್ಷ ನೀಡಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಪಟ್ಟಣದಲ್ಲಿ ದಸರಾ ಆಚರಣೆಯನ್ನು ಇಷ್ಟೊಂದು ಅದ್ಧೂರಿಯಾಗಿ ಸಂಭ್ರಮಿಸುತ್ತಾರೆ ಎಂದು ತಿಳಿದಿರಲಿಲ್ಲ ಎಂದು ಹರ್ಷ ವ್ಯಕ್ತಪಡಿಸಿದ ಅವರು, ಇಲ್ಲಿನ ಜೈ ಭವಾನಿ
ಭವನ ಅಭಿವೃದ್ಧಿಗೆ 4.5 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು.

ಮುಸ್ಲಿಂ ಸಮಾಜದ ಮುಖಂಡ ಬಾಬುಮಿಯ್ನಾ ಮಾತನಾಡಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ, ಪುರಸಭೆ ಸದಸ್ಯ ಭೀಮಶಾ ಜಿರೊಳ್ಳಿ, ಪಿಎಸ್‌ಐ ವಿಜಯಕುಮಾರ ಭಾವಗಿ, ರೈಲ್ವೆ ಪಿಎಸ್‌ಐ ವೀರಭದ್ರಪ್ಪ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ನಿವೇದಿತಾ ದಹಿಹಂಡೆ, ಬಿಜೆಪಿ ಅಧ್ಯಕ್ಷ ಬಸವರಾಜ ಪಂಚಾಳ, ರೈಲು ನಿಲ್ದಾಣ ಪ್ರಬಂಧಕ ಎ.ಎಸ್‌. ಪ್ರಸಾದರಾವ್‌, ಎಪಿಎಂಸಿ ಸದಸ್ಯ ತಿಮ್ಮಯ್ಯ ಕುರುಕುಂಟಾ, ಉತ್ಸವ ಸಮಿತಿ ಮುಖಂಡರಾದ ಸುರೇಶ ಬಣಗಾರ, ಹರಿ ಗಲಾಂಡೆ, ರಾಜೇಶ ಕಾಂಬಳೆ, ರಾಜು ಮುಕ್ಕಣ್ಣ, ರಾಮಚಂದ್ರ ರೆಡ್ಡಿ, ಗಿರಿಮಲ್ಲಪ್ಪ ಕಟ್ಟಿಮನಿ, ವೀರಣ್ಣ ಯಾರಿ, ಬಸವರಾಜ ಕೋಲಿ ಸೇರಿದಂತೆ ವಿವಿಧ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

ರಾವಣ ದಹನ ಸಂದರ್ಭದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನ ಪಾಲ್ಗೋಂಡಿದ್ದರು. ರೈಲ್ವೆ ಕಾಲೋನಿ, ಎಸಿಸಿ ಕಾಲೋನಿ ಹಾಗೂ ಮರಾಠಾ ಗಲ್ಲಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ದೇವಿ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ಹನುಮಾನ ದೇವರ ದರ್ಶನ ಪಡೆದ ಸ್ಥಳೀಯರು ಪರಸ್ಪರ ಬನ್ನಿ ವಿನಿಮಯ ಮಾಡಿಕೊಂಡರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.