ಈಗಲೇ ಶುರುವಾಯಿತು ನೀರಿಗೆ ತತ್ವಾರ


Team Udayavani, Oct 20, 2018, 12:21 PM IST

gul-3.jpg

ಅಫಜಲಪುರ: ಮಳೆಗಾಲದಲ್ಲಿ ಮಳೆ, ಚಳಿಗಾಲದಲ್ಲಿ ಚಳಿ, ಬೇಸಿಗೆಯಲ್ಲಿ ಬಿಸಿಲು ಇದು ಪ್ರಕೃತಿ ನಿಯಮ. ಆದರೆ ಈಗ ಮಳೆಗಾಲದಲ್ಲಿ ಮಳೆಯಾಗುತ್ತಿಲ್ಲ, ಬದಲಾಗಿ ಸುಡುವ ಬಿಸಿಲಿದೆ, ಮಳೆಗಾಲವೇ ಇನ್ನೂ ಮುಗಿದಿಲ್ಲ ಈಗಲೇ ನೀರಿಗಾಗಿ ಬರ ಶುರುವಾಗಿದೆ.

ತಾಲೂಕಿನಾದ್ಯಂತ ಅನೇಕ ಗ್ರಾಮಗಳಲ್ಲಿ ಮಳೆಗಾಲದಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು , ಹನಿ ನೀರಿಗಾಗಿಯೂ ಗ್ರಾಮಸ್ಥರು ಪರದಾಡುವಂತಾಗಿದೆ. ಎಲ್ಲಿ ನೋಡಿದರೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಎಷ್ಟು ಕೊಳವೆ ಬಾವಿ ಕೊರೆದರೂ ಭೂಮಿಯಿಂದ ಹನಿ ನೀರು ಹೊರಗೆ ಬರುತ್ತಿಲ್ಲ.

ಹೊಸೂರ ಗ್ರಾಮದಲ್ಲಿ ಬತ್ತಿದ ಅಂತರ್ಜಲ: ತಾಲೂಕಿನ ಗಡಿ ಗ್ರಾಮದಲ್ಲೀಗ ನೀರಿಗಾಗಿ ಪರದಾಟ ಆರಂಭವಾಗಿದೆ. ಗ್ರಾಮದಲ್ಲಿ ಅಕ್ಷರಶಃ ಭೀಕರ ಜಲಕ್ಷಾಮ ಉಂಟಾಗಿದೆ. ಎಲ್ಲಿ ನೋಡಿದರೂ ಹನಿ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ಎಲ್ಲ ಜಲ ಮೂಲಗಳಲ್ಲಿ ಅಂತರ್ಜಲ ಮಟ್ಟ ಖಾಲಿಯಾಗಿದ್ದು, ಗ್ರಾಮಸ್ಥರು ಒಂದು ಕೊಡ ನೀರು ತರಬೇಕಾದರೆ ಕಿಲೋ ಮೀಟರ್‌ಗಟ್ಟಲೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಳ್ಳಿಗಳಲ್ಲೀಗ ಜಲಮೂಲ ಖಾಲಿ: ತಾಲೂಕಿನ ಹೊಸೂರ ಮಾತ್ರವಲ್ಲದೆ ಚಿಂಚೋಳಿ, ಮಾತೋಳಿ, ಮಲ್ಲಾಬಾದ, ಚಿಕ್ಕರೇವೂರ, ಅರ್ಜುಣಗಿ, ಗೊಬ್ಬೂರ (ಬಿ), ಬಳೂರ್ಗಿ, ಬಂದರವಾಡ, ಸ್ಟೇಷನ್‌ ಗಾಣಗಾಪುರ ಸೇರಿದಂತೆ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಜಲಮೂಲ ಖಾಲಿಯಾಗಿ ಕುಡಿಯುವ ನೀರಿನ ಬವಣೆ ಶುರುವಾಗಿದೆ. ಜನಸಾಮಾನ್ಯರು ತಮ್ಮ ದನಕರುಗಳಿಗೆ ಮತ್ತು ತಮಗೆ ಕುಡಿಯಲು ನೀರು ತರುವ ಸಲುವಾಗಿ ಎಲ್ಲ ಕೆಲಸಗಳನ್ನು ಬದಿಗಿಟ್ಟು ಖಾಸಗಿಯವರು ಹೊಲ ಗದ್ದೆಗಳಿಗೆಲ್ಲ ಅಲೆದಾಡಿ ನೀರು ಹೊತ್ತು ತರುವಂತಾಗಿದೆ. 

ಇನ್ನು ಕೆಲವು ಕಡೆಯಲ್ಲಿ ಅಲ್ಪಸ್ವಲ್ಪ ನೀರು ಬರುತ್ತದೆ ಅಂತ ಊರುಗಳಲ್ಲಿ ಮನೆಗೆಲಸ ಬಿಟ್ಟು ಮಹಿಳೆಯರು ಮಕ್ಕಳು ಎಲ್ಲರೂ ಕೊಡ ನೀರಿಗಾಗಿ ದಿನವಿಡಿ ಕಾಯುತ್ತ ಕೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರು ತರುವ ಸಲುವಾಗಿ ಮಕ್ಕಳು ಶಾಲೆ ಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. 

ನದಿ ಪಾತ್ರದ ಗ್ರಾಮಗಳಲ್ಲೂ ನೀರಿಲ್ಲ: ಇನ್ನು ತಾಲೂಕಿನಲ್ಲಿ ಹರಿಯುವ ಭೀಮಾ ನದಿ ಮಳೆಗಾಲದಲ್ಲಿ ಮಾತ್ರ ತುಂಬಿ ಹರಿಯುತ್ತದೆ. ಆದರೆ ಈ ಬಾರಿಯ ಮಳೆಗಾಲ ಮುಗಿಯಲು ಬಂದರೂ ನದಿಗಳು ತುಂಬಿ ಹರಿದಿಲ್ಲ. ಹೀಗಾಗಿ ನದಿ ಪಾತ್ರದ ಗ್ರಾಮಗಳಲ್ಲೂ ನೀರಿನ ಕೊರತೆ ಕಾಡುತ್ತಿದೆ. 

ಇಲಾಖೆ, ಜನಪ್ರತಿನಿಧಿಗಳ ಬೇಜವಬ್ದಾರಿ: ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಳ್ಳುವಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವಿಫಲವಾಗಿದ್ದು ಅವರ ಬೇಜವಾಬ್ದಾರಿ ತೋರಿಸುತ್ತಿದೆ. ಇವರ ನಡೆಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ತಾಲೂಕಿನ ಮಾತೋಳಿ ಗ್ರಾಮಸ್ಥರು ತಾಲೂಕಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಭೇಟಿ ಕೊಟ್ಟಾಗ ಖಾಲಿ ಕೊಡಗಳೊಂದಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಆದರೂ ಯಾವುದೇ ಪ್ರಯೋಜವಾಗಿಲ್ಲ.

ಹೊಸೂರ ಊರಾಗ ಎಲ್ಲಿನೂ ಹನಿ ನೀರ್‌ ಸಿಗಲಾರ್‌ª ಪರಿಸ್ಥಿತಿ ಬಂದಾದ್ರಿ, ಮನ್ಯಾನ್‌ ಮಂದಿ, ಮಕ್ಕಳೆಲ್ಲ ಸೇರಿ ದೂರ್‌ದ ಗೌಡ್ರ, ಕುಲಕಾಣ್ಯಾರ್‌ ಹೊಲಕ್‌ ಹೋಗಿ ನೀರ್‌ ತರಬೇಕ್ರೀ, ನಮ್‌ ಗೋಳ್‌ ಕೇಳುವರು ಯಾರೂ ಇಲ್ರಿ.
 ಹೊಸೂರ್‌ ಗ್ರಾಮಸ್ಥರು

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಈಗಾಗಲೇ ಪರ್ಯಾಯ ವ್ಯವಸ್ಥೆ ಕೈಗೊಳ್ಳುವ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಖಾಸಗಿಯವರಿಂದ ನೀರು ಖರೀದಿಸಿ ಸರಬರಾಜು ಮಾಡಲಾಗುತ್ತದೆ. ಯಾವ ಗ್ರಾಮದಲ್ಲಾದರೂ ಸಮಸ್ಯೆ ಹೆಚ್ಚಿದ್ದರೆ ತುರ್ತಾಗಿ ಸ್ಪಂದಿಸಲಾಗುತ್ತದೆ.
 ಗುರುನಾಥ ಶೆಟಗಾರ, ತಾಪಂ ಇಒ

„ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.