ಬದಲಾವಣೆಗಾಗಿ ಶರಣರು ಮರಣಕ್ಕಂಜಿಲ್ಲ


Team Udayavani, Oct 22, 2018, 11:46 AM IST

gul-3.jpg

ಅಫಜಲಪುರ: 12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮರಣಕ್ಕಂಜಿಲ್ಲ ಎಂದು ಭಾರತೀಯ ಬಸವ ಬಳಗದ ಅಧ್ಯಕ್ಷ ಶಂಕರರಾವ್‌ ಹುಲ್ಲೂರ ಹೇಳಿದರು.

ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಹಾಗೂ ಭಾರತೀಯ ಬಸವ ಬಳಗ ಮತ್ತು ಬಸವ ಮಾರ್ಗ ಪ್ರತಿಷ್ಠಾನ, ಲಿಂಗಾಯತ ಮಹಾಸಭಾ ಸಹಯೋಗಲ್ಲಿ ಮರಣವೇ ಮಹಾನವಮಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶರಣ ಹರಳಯ್ಯನವರ ಮಗ ಮತ್ತು ಬ್ರಾಹ್ಮಣ ಮದುವರಸನ ಮಗಳು ಲಾವಣ್ಯವತಿ ಮದುವೆ ಕಲ್ಯಾಣ ಕಾಂತ್ರಿಗೆ ನೆಪ ಮಾತ್ರ ಆಗಿತ್ತು. ಬಸವಾದಿ ಶರಣರ ಪ್ರತಿಯೊಂದು ಕಾರ್ಯಗಳು ಕ್ರಾಂತಿಯಾಗಿದ್ದವೆಂದು ಹೇಳಿದರು. ಜಾತೀಯತೆಗಾಗಿ ಮತ್ತು ಶ್ರೀಮಂತ, ಬಡವರೆನ್ನುವ ಬೇಧಕ್ಕಾಗಿ, ಮೂಢನಂಬಿಕೆಗಾಗಿ, ಸ್ತ್ರೀ ಸಮಾನತೆಗಾಗಿ ಹೀಗೆ ಸದಾ ಹೋರಾಟದಲ್ಲಿ ತೊಡಿಗಿರುವಾಗ ಅಂತರ್ಜಾತಿ ಮದುವೆ ಮುಂದಿಟ್ಟುಕೊಂಡು ಜಾತಿವಾದಿಗಳ ಅರಸ ಬಿಜ್ಜಳನ ಕಿವಿ ಊದಿ ಕ್ರಾಂತಿಗೆ ಏರ್ಪಾಡು ಮಾಡಿದರು. ಬಸವಣ್ಣನವರನ್ನು ಗಡಿಪಾರು ಮಾಡಿಸಿದರು. ಈ ಕಡೆ ಎರಡು
ಕುಂಟುಬದ ಶರಣ ಹರಳಯ್ಯನವರ ಮತ್ತು ಮದುವರಸರ ಎಲ್ಲರನ್ನು ಆನೆ ಕಾಲಿಗೆ ಕಟ್ಟಿ ಎಳೆಸಿ ಕೊಲ್ಲಿದರು. ಶರಣರು ಮರಣಕ್ಕಂಜದೆ ಈ ವ್ಯವಸ್ಥೆ ಬದಲಿಸಲು ಹುತಾತ್ಮರಾದರು ಎಂದು ಹೇಳಿದರು.

ಅಮೃತರಾವ್‌ ಪಾಟೀಲ, ಬಸವರಾಜ ಚಾಂದಕವಟೆ, ಡಾ| ಸಿ.ವಿ. ಟಕ್ಕಳಕಿ, ಸಿದ್ದು ಶಿವಣಗಿ ಮಾತನಾಡಿ, ಬಸವಣ್ಣನವರು ಗಡಿಪಾರಾಗಿ ಕೂಡಲಸಂಗಮಕ್ಕೆ ಹೋದಾಗ ಕಲ್ಯಾಣದಲ್ಲಿ ಬಹುದೊಡ್ಡ ಕ್ರಾಂತಿ ನಡೆದು ಹೋಯಿತು. ಅದರಲ್ಲಿ ಮಡಿವಾಳ ಮಾಚಿದೇವ, ಅಂಬಿಗರ ಚೌಡಯ್ಯನವರು ದೊಡ್ಡ ಹೋರಾಟವನ್ನೇ ಮಾಡಿದರು.  ಬಿಜ್ಜಳನ ಕೊಲೆಯಾದ ನಂತರ ಮರಿ ಅರಸ ಸೋಹಿ ದೇವನನ್ನು ಮಡಿವಾಳ ಮಾಚಿ ದೇವರು ತಮ್ಮ ಮೇಲೆ ದಾಳಿ ಮಾಡಲು ಬಂದಾಗ ಕೊಲೆ ಮಾಡಿದರು. ನಂತರ ವಚನ ಸಾಹಿತ್ಯ ಉಳವಿ ಗುಹೆಯಲ್ಲಿ ಬಚ್ಚಿಟ್ಟರು ಎಂದು ಹೇಳಿದರು.

ಮುಖಂಡರಾದ ಸದಾಶಿವ ಮೇತ್ರೆ, ಶರಣು ಮೇತ್ರೆ, ಗೋಪಾಲ ಹಳಾಳ, ಶಂಕರಪ್ಪ ಮಣೂರ, ಡಾ| ಭೀಮರಾಯ ಚಿಂಚೋಳಿ, ಸಿದ್ದಣಗೌಡ ಮಾಲಿಪಾಟೀಲ, ಬಸವರಾಜ ಉಪ್ಪಾರ ಇದ್ದರು. ಜಿ.ಎಸ್‌. ಬಾಳಿಕಾಯಿ ಸ್ವಾಗತಿಸಿದರು. ಬಸವರಾಜ ಕೆಂಗನಾಳ ನಿರೂಪಿಸಿದರು. ಬಸವರಾಜ
ನಿಂಬರ್ಗಿ ವಂದಿಸಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.