ಜನ ಸಂಘರ್ಷ ಯಾತ್ರೆಗೆ ತೆರಳಿದ ಖರ್ಗೆ ದಂಪತಿ
Team Udayavani, Oct 25, 2018, 1:10 PM IST
ಕಲಬುರಗಿ: ನಗರ ಹೊರವಲಯದ ಶ್ರೀನಿವಾಸ ಸರಡಗಿ ಬಳಿಯ ವಿಮಾನ ನಿಲ್ದಾಣದಿಂದ ಬುಧವಾರ ಬೆಳಗ್ಗೆ ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ತಮ್ಮ ಪತ್ನಿ ರಾಧಾಬಾಯಿ ಅವರೊಂದಿಗೆ ಮಹಾರಾಷ್ಟ್ರದ ಲಾತೂರಿನ ಹೌಸ್ದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ 3ನೇ ಜನಸಂಘರ್ಷ ಯಾತ್ರೆಯಲ್ಲಿ ಭಾಗವಹಿಸಲು ಪ್ರಥಮ ಬಾರಿ ವಿಮಾನದಲ್ಲಿ ತೆರಳಿದರು.
ಬೆಳಗ್ಗೆ ಮುಂಬೈ ಮೂಲದ ಖಾಸಗಿ ಕಂಪನಿಯ ವಿಶೇಷ ವಿಮಾನದಲ್ಲಿ ಪತ್ನಿ ರಾಧಾಬಾಯಿ ಅವರೊಂದಿಗೆ, ಸಂಸದ ಖರ್ಗೆ ವಿಮಾನ ಹತ್ತಿದಾಗ ಪಕ್ಷದ ಕಾರ್ಯಕರ್ತರ ದಂಡು ಸಂಭ್ರಮಿಸಿತು. ಕಾರ್ಯಕರ್ತರ ಉತ್ಸಾಹ ಕಂಡು ಖರ್ಗೆ ಅವರು ಕಾರ್ಯಕರ್ತರತ್ತ ಕೈಬೀಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ವಿಜಯಕುಮಾರ ಜಿ. ರಾಮಕೃಷ್ಣ, ಸಂತೋಷ ಪಾಟೀಲ ದಣ್ಣೂರ ಈ ಸಂದರ್ಭದಲ್ಲಿದ್ದರು. ವಿಮಾನ ಯಾನ ಪ್ರಾಯೋಗಿಕ ಹಾರಾಟ ಆರಂಭವಾದ ಮೇಲೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಥಮ ಬಾರಿಗೆ ವಿಮಾನ ನಿಲ್ದಾಣದಲ್ಲಿ ಹೆಲಿಕ್ಯಾಪ್ಟರ್ ಮೂಲಕ ಬಂದು ಹೈ.ಕ. ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ನ್ಯಾಯವಾದಿ ಪಿ.ಚಿದಂಬರಂ ಕಲಬುರಗಿಯ ಹೈಕೋರ್ಟ್ನ ಪ್ರಕರಣವೊಂದರಲ್ಲಿ ವಾದಿಸಲು ವಿಮಾನ ನಿಲ್ದಾಣದಲ್ಲಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಬಂದು ಹೋಗಿದ್ದರು. ಈಗ ಸಂಸದ ಮಲ್ಲಿಕಾರ್ಜುನ ಖರ್ಗೆ ಖಾಸಗಿ ವಿಮಾನದ ಮೂಲಕ ತೆರಳಿದ್ದಾರೆ.
ಉಡಾನ್ ಯೋಜನೆಯಡಿ ಕಲಬುರಗಿ ವಿಮಾನ ನಿಲ್ದಾಣ ಸೇರ್ಪಡೆಯಾದರೆ ಇಲ್ಲಿನ ಸಾರ್ವಜನಿಕರು ವಿಮಾನಯಾನ ಕೈಗೊಳ್ಳುವ ದಿನ ಸಮೀಪಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು