ದೀನ ದಲಿತರ ಸೇವೆಯಲ್ಲೇ ಜೀವನ ಸಾರ್ಥಕತೆ: ಹಿರೋಳಿ


Team Udayavani, Nov 11, 2018, 11:48 AM IST

gul-6.jpg

ಕಲಬುರಗಿ: ಜೀವಿತಾವಧಿಯಲ್ಲಿ ಸಾಧ್ಯವಾದಷ್ಟು ದೀನ-ದಲಿತರಿಗೆ ಸಹಾಯ ಮಾಡಬೇಕು. ಅವರ ಸೇವೆಯಲ್ಲಿಯೇ ಬದುಕಿನ ಸಾರ್ಥಕತೆ ಇದೆ. ನಾವು ಅಳಿದರೂ ಉಳಿಯುವಂಥ ಸೇವೆ ನಮ್ಮಿಂದಾಗಬೇಕು ಎಂದು ತಹಶೀಲ್ದಾರ್‌ ಅಶೋಕ ಹಿರೋಳಿ ಮಾತನಾಡಿದರು.

ನಗರದ ಹೊರವಲಯದ ಸೈಯದ್‌ ಚಿಂಚೋಳಿ ಕ್ರಾಸ್‌ನಲ್ಲಿರುವ ಮಹಾದೇವಿ ತಾಯಿ ವೃದ್ಧಾಶ್ರಮದ ನಿಸರ್ಗದ ಮಡಿಲಲ್ಲಿ ಇಲ್ಲಿನ ದೇವೀಂದ್ರಪ್ಪ ಜಿ.ಸಿ.ಸಂಗೀತ ಸಾಹಿತ್ಯ ಕಲಾ ಸಂಸ್ಥೆಯ ಸಹಯೋಗದೊಂದಿಗೆ ವಿಶ್ವಜ್ಯೋತಿ ಪ್ರತಿಷ್ಠಾನವು ಆಯೋಜಿಸಿದ “ಆರದಿರಲಿ ಬೆಳಕು’ ಇದು ಭರವಸೆ ಬೆಳಕು… ಎನ್ನುವ ವಿಶೇಷ ಸಂದೇಶ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವೀರಶೈವ ಮಹಾಸಭಾದ ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ ಮಾತನಾಡಿ, ಬಾಲ್ಯದಲ್ಲಿ ನಾವು ನಮ್ಮ ತಂದೆ-ತಾಯಿಯಿಂದ ಪಡೆದ ಪ್ರೀತಿ, ವಾತ್ಸಲ್ಯ, ಸೇವೆಯನ್ನು ಅವರ ವೃದ್ಯಾಪ್ಯದಲ್ಲಿ ನೀಡಿ ಜೀವನವನ್ನು ಪಾವನಗೊಳಿಸಿಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿದರು. ಹಿರಿಯ ಸಾಹಿತಿ ಡಾ| ವಾಸುದೇವ ಸೇಡಂ, ಮಳಖೇಡದ ಅಲ್ಟ್ರಾಟೆಕ್‌ ಕಮ್ಮುನಿಟಿ ಫೌಂಡೇಷನ್‌ ಮುಖ್ಯಸ್ಥೆ ಚಂದಮ್ಮ ಅಂಬಲಗಿ, ಇಂಡಿಯನ್‌ ಬ್ಯಾಂಕಿನ ವ್ಯವಸ್ಥಾಪಕಿ ರಮಾ ಎಸ್‌.ಧರ್ಗಿ, ಸಹಕಾರಿ ಧುರೀಣ ಮಲ್ಲಿಕಾರ್ಜುನ ಖೇಮಜಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬಿ.ಸಂದೀಪ, ಸಮಾಜ ಚಿಂತಕಿ ರೀಟಾ ಜೇಮ್ಸ್‌ ಮಿನೇಂಜೇಸ್‌, ಸಾಹಿತ್ಯ ಪ್ರೇಮಿ ರವೀಂದ್ರಕುಮಾರ ಭಂಟನಳ್ಳಿ, ಚಿಂತಕ ಶಿವಕುಮಾರ ದೊಡ್ಮನಿ, ಕಾಂಗ್ರೇಸ್‌ ಯುವ ಮುಖಂಡ ಶಿವಾನಂದ ಹೊನಗುಂಟಿ, ಹಿರಿಯ ಸಾಹಿತಿ ಶಿವಕವಿ ಜೋಗೂರ, ಜಲಜಾಕ್ಷಿ ಕೋರೆ, ಪ್ರಮುಖರಾದ ಡಾ| ನಾಗರತ್ನಾ ಬಿ.ದೇಶಮಾನ್ಯೆ, ಡಾ| ಕೆ.ಗಿರಿಮಲ್ಲ, ಪರಮೇಶ್ವರ ಶಟಕಾರ, ಶಿವರಾಜ ಅಂಡಗಿ, ಶ್ರೀಕಾಂತ ಪಾಟೀಲ ತಿಳಗೂಳ, ಶಿವಾನಂದ ಮಠಪತಿ, ಸವಿತಾ ಪಾಟೀಲ, ಜಗದೀಶ ಮರಪಳ್ಳಿ, ನಾಗೇಂದ್ರಪ್ಪ ಮಾಡ್ಯಾಳೆ, ಪ್ರಭುಲಿಂಗ ಮೂಲಗೆ, ಸತೀಶ ಸಜ್ಜನ ಹಾಗರಗುಂಡಗಿ, ಎಸ್‌.ಬಿ.ಐ.ಬ್ಯಾಂಕಿನ ವ್ಯವಸ್ಥಾಪಕ ಅಶೋಕ ಕಾಳೆ, ವಿರಾಜಕುಮಾರ ವಿ.ಕಲ್ಯಾಣ ಹಾಗೂ ನೂರಾರು ಜನರು ಭಾಗವಹಿಸಿದ್ದರು.

ಖ್ಯಾತ ಸಂಗೀತ ಕಲಾವಿದರಾದ ಸಿದ್ಧಾರ್ಥ ಚಿಮ್ಮಾಇದಲಾಯಿ ಹಾಗೂ ಶ್ರೀಧರ ಹೊಸಮನಿ, ನಾಗಲಿಂಗಯ್ಯ ಸ್ಥಾವರಮಠ, ಕವಿರಾಜ ಪಾಟೀಲ ಭಂಟನಳ್ಳಿ ಅವರಿಂದ ಜಾನಪದ ಝೇಂಕಾರ ಮುದುಡಿದ ಮನಗಳಿಗೆ ಮುದ ನೀಡಿತು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.