ಯುವಕನ ಕೊಂದ ಮೂವರ ಸೆರೆ
Team Udayavani, Nov 19, 2018, 10:33 AM IST
ಕಲಬುರಗಿ: ನಗರದ ಲಾರಿ ತಂಗುದಾಣದ ಬಳಿ ಇತ್ತೀಚೆಗೆ ಯುವಕನೊಬ್ಬನ ಮೇಲೆ ಭಾರಿ ಗಾತ್ರದ ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಚೌಕ್ ಪೊಲೀಸರು ಯಶಸ್ವಿಯಾಗಿದ್ದಾರೆ. ಅಂಬೇಡ್ಕರ್ ಆಶ್ರಯ ಕಾಲೋನಿಯ ರಾಘವೇಂದ್ರ ಅಲಿಯಾಸ್ ರಾಕೇಶ ಎನ್ನುವನನ್ನು ನ.15 ರಂದು ಬೆಳಗಿನ ಜಾವ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಸ್ಪಿ, ಹೆಚ್ಚುವರಿ ಎಸ್ಪಿ, ಬಿ.ಉಪವಿಭಾಗದ ಡಿಎಸ್ಪಿ ಎಂ. ಪಾಂಡುರಂಗಯ್ಯ ಮಾರ್ಗದರ್ಶನದಲ್ಲಿ ಚೌಕ್ ಪಿಐ ಸಂಗಮನಾಥ ಹಿರೇಮಠ ಹಾಗೂ ಸಿಬ್ಬಂದಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆಶ್ರಯ ಕಾಲೋನಿಯ ಮಹೇಶ ಲಂಕೇಶ ಕಾತರಕಿ, ಕಾರು ಚಾಲಕ ನಾಗೇಶ ಅಲಿಯಾಸ್ ನಾಗೂ ಸುಭಾಶ್ಚಂದ್ರ ಮಹಾಶೆಟ್ಟಿ, ಬಸವರಾಜ ಅಲಿಯಾಸ್ ಬಸ್ಸು ಸಿದ್ದಣ್ಣ ಕುಂಬಾರ ಎನ್ನುವರನ್ನು ಬಂಧಿಸಿ, ಕೊಲೆಗೆ ಬಳಸಲಾದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಪ್ರಕರಣದ ಪ್ರಥಮ ಆರೋಪಿ ಮಹೇಶ ಕಾತರಕಿ ಏಳು ಸ್ಟಾರ್ ಪ್ರದೀಪ ಗ್ಯಾಂಗ್ನ ಸಹಚರ ಎನ್ನಲಾಗಿದ್ದು, ಈ ಕೊಲೆ ರೌಡಿ ಪ್ರದೀಪನ ಬೆಂಬಲದಿಂದಲೇ ಆಗಿದೆ ಎಂದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್