ವಿಧುಶೇಖರ ಭಾರತಿ ಶ್ರೀ ಶೋಭಾಯಾತ್ರೆ
Team Udayavani, Nov 20, 2018, 11:12 AM IST
ಕಲಬುರಗಿ: ನಗರಕ್ಕೆ ಮೊದಲ ಬಾರಿಗೆ ಆಗಮಿಸಿದ ಶ್ರೀ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನದ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರ ಶೋಭಾಯಾತ್ರೆ ಸೋಮವಾರ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಿಂದ ನೂತನ ವಿದ್ಯಾಲಯ ಸಂಸ್ಥೆ ಆವರಣದವರೆಗೆ ವಿಜೃಂಭಣೆಯಿಂದ ನಡೆಯಿತು.
ಮಹಾಸಂಸ್ಥಾನದ ಕಲಬುರಗಿ ಶಾಖೆ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ವಿಜಯ ಯಾತ್ರೆಯಲ್ಲಿ
ಪಾಲ್ಗೊಳ್ಳಲು ಶ್ರೀ ವಿಧುಶೇಖರ ಭಾರತಿ ಮೊದಲ ಬಾರಿಗೆ ನಗರಕ್ಕೆ ಸೋಮವಾರ ಸಂಜೆ ಆಗಮಿಸಿದರು. ಸರ್ದಾರ್ ಪಟೇಲ್ ವೃತ್ತದಲ್ಲಿ ಮಂಗಳ ವಾದ್ಯದೊಂದಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ನಂತರ ಶ್ರೀಗಳ ವೈಭವದ ಶೋಭಾಯಾತ್ರೆ ನಡೆಯಿತು. ನೂತನ ವಿದ್ಯಾಲಯ ಸಂಸ್ಥೆ ಆವರಣದಲ್ಲಿ ಧೂಳಿ ಪಾದಪೂಜೆ, ಪ್ರಾರ್ಥನೆ ಮತ್ತು ಸಾರ್ವಜನಿಕರಿಂದ ಶ್ರೀಗಳಿಗೆ ಸನ್ಮಾನ ನಡೆಯಿತು.
ನ. 20ರಂದು ಬೆಳಗ್ಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಶ್ರೀಗಳ ದರ್ಶನ, ಮಂತ್ರಾಕ್ಷತೆ, ಭಕ್ತಾದಿಗಳಿಂದ ಪಾದುಕಾ ಪೂಜೆ ಹಮ್ಮಿಕೊಳ್ಳಲಾಗಿದೆ. ಸಂಜೆ 6:00ಕ್ಕೆ ಶಂಕರಾಚಾರ್ಯರ ಅಷ್ಟೋತ್ತರ ಶತನಾಮ ಪಾರಾಯಣ ಹಾಗೂ ಸೌಂದರ್ಯ ಲಹರಿ ಸ್ತೋತ್ರ ಸಮರ್ಪಣೆ ನಡೆಯಲಿದೆ. ನ.21ರಂದು ಶ್ರೀಗಳ ದರ್ಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ