ಆಧುನಿಕ ತಂತ್ರಜ್ಞಾನದಿಂದ ಓದುಗರ ಸಂಖ್ಯೆ ಕ್ಷೀಣ


Team Udayavani, Nov 20, 2018, 11:58 AM IST

gul-6.jpg

ಸೇಡಂ: ಆಧುನಿಕ ತಂತ್ರಜ್ಞಾನದಿಂದ ಓದುಗರ ಸಂಖ್ಯೆ ಕ್ಷೀಣಿಸುತ್ತಿದೆ. ಪತ್ರಿಕೆಗಳಲ್ಲಿ ಬರುವ ಲೇಖನಗಳು ಜಾಸ್ತಿಯಾಗಿವೆ ಆದರೆ ಸಾಹಿತ್ಯಾಸಕ್ತರು ಕಡಿಮೆಯಾಗಿದ್ದಾರೆ ಎಂದು ರಾಜ್ಯಸಭಾ ಮಾಜಿ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ ಹೇಳಿದರು.

ಪಟ್ಟಣದ ಮಾತೃಛಾಯಾ ಕಾಲೇಜು ಪ್ರಾಂಗಣದಲ್ಲಿ ಹಾರಕೂಡದ ಡಾ| ಚನ್ನವೀರ ಶಿವಾಚಾರ್ಯರ 54ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಹಿತ್ಯ ಚಿಂತನಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಅನಾದಿಕಾಲದಲ್ಲಿ ಜ್ಞಾನದ ಜ್ಯೋತಿ ಬೆಳಗಲು ವೇದ, ಪುರಾಣ, ಉಪನಿಷತ್ತುಗಳಿದ್ದವು. 

ಬರಬರುತ್ತ ಆಧುನಿಕ ತಂತ್ರಜ್ಞಾನದ ಎದುರು ಸುಧಾ-ತರಂಗದಂತಹ ಬಹು ಸಂಖ್ಯೆ ಓದುಗರನ್ನು ಹೊಂದಿದ್ದ ಪತ್ರಿಕೆಗಳು ಕುಂದುತ್ತ ಬಂದವು. ಈಗ ದೈನಂದಿನ ಸಾಹಿತ್ಯ ಗೊಂದಲ ಸೃಷ್ಟಿಸುತ್ತಿದೆ. ಇದರಿಂದ ನಿಜವಾದ ಸಾಹಿತ್ಯ ಗುರುತಿಸುವುದು ಕಷ್ಟಕರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬದುಕಿಗೆ ಆನಂದ ಕೊಡುವ ಸುಂದರ ಸಾಹಿತ್ಯದ ಅವಶ್ಯಕತೆ ಇದೆ. ಸತ್ಸಂಗ, ವಾಣಿಯಿಂದ ಬದುಕು ಬದಲಾವಣೆ ಸಾಧ್ಯ.
ಜಗವೆಲ್ಲ ಕಲ್ಯಾಣವಾಗಲು ಉತ್ತಮ ಸಾಹಿತ್ಯ ಬೇಕು ಎಂದು ಹೇಳಿದರು. 

ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿ ಆಡಳಿತಾಧಿಕಾರಿ ಶಿವಯ್ಯ ಮಠಪತಿ, ಶ್ರೀ ಕೊತ್ತಲ ಬಸವೇಶ್ವರ ಸಂಸ್ಥಾನದ ಸದಾಶಿವ ಸ್ವಾಮೀಜಿ, ಭಾಲ್ಕಿ ಜಿಲ್ಲೆ ಮೇಹಕಲ್‌ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕಿ ಶ್ರೀದೇವಿ ಖಂಡಾಳೆ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿದರು.

ಹಾರಕೂಡದ ಡಾ| ಚನ್ನವೀರ ಶಿವಾಚಾರ್ಯರು ನೇತೃತ್ವ ವಹಿಸಿದ್ದರು. ಶಿವಶಂಕರ ಮಠದ ಶಿವಶಂಕರ ಶಿವಾಚಾರ್ಯರು. ಹಾಲಪ್ಪಯ್ಯ ವಿರಕ್ತ ಮಠದ ಪಂಚಾಕ್ಷರಿ ಸ್ವಾಮೀಜಿ, ಸಿದ್ದಪ್ಪ ತಾತ, ಮಳಖೇಡದ ಕೊಟ್ಟೂರೇಶ್ವರ ಸ್ವಾಮೀಜಿ, ಮಾಜಿ ಶಾಸಕ ಡಾ| ನಾಗರೆಡ್ಡಿ ಪಾಟೀಲ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಬಸಪ್ಪ ಹಾಗರಗಿ, ಹೈಕೋರ್ಟ್‌ ವಕೀಲ ಕಾಶಿನಾಥ ಮೋತಕಪಲ್ಲಿ, ಹಾಪಕಾಮ್ಸ್‌  ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್ವರರಾವ ಮಾಲಿಪಾಟೀಲ, ಶಂಭುರೆಡ್ಡಿ ಮದ್ನಿ, ಕಲ್ಯಾಣಪ್ಪಗೌಡ ಪಾಟೀಲ, ವಿಶ್ವನಾಥ ಪಾಟೀಲ, ಸಿದ್ದಣ್ಣಗೌಡ ಪಾಟೀಲ ಕೋಲಕುಂದಾ, ರಾಮಯ್ಯ ಪೂಜಾರಿ, ಜಗದೇವಪ್ಪ ಪಾಟೀಲ, ಡಿ.ಕೆ. ಹಿರೇಮಠ, ಎಂ.ಕೆ. ಹಿರೇಮಠ, ಶ್ರೀಕಾಂತರೆಡ್ಡಿ ಪಾಟೀಲ ಮುಧೋಳ, ಸಹಜಾನಂದ ಶಾಸ್ತ್ರಿ ಸಿಂಧನಮಡು, ಕಲ್ಲಪ್ಪ ಮುಕ್ತಾಪುರ ಇದ್ದರು. ಶಿವಶಂಕರ ಬಿರಾದಾರ ಕೋಟನೂರ ತಂಡ ಪ್ರಸ್ತುತಪಡಿಸಿದ ಸಂಗೀತ ಕಾರ್ಯಕ್ರಮ ನೆರೆದವರನ್ನು ಹಿಡಿದಿಡುವಲ್ಲಿ ಯಶಸ್ವಿಯಾಯಿತು. ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರು ಸ್ವಾಗತಿಸಿದರು. ನವಲಿಂಗ ಪಾಟೀಲ ನಿರೂಪಿಸಿ, ವಂದಿಸಿದರು.

ಸಾಹಿತಿಗಳಿಲ್ಲದ ಚಿಂತನಾ ಸಮಾವೇಶ
ಮಾತೃಛಾಯಾ ಕಾಲೇಜು ಮೈದಾನದಲ್ಲಿ ಸೋಮವಾರ ನಡೆದ ಸಾಹಿತ್ಯ ಚಿಂತನ ಸಮಾವೇಶ ಸಾಹಿತಿಗಳ ಕೆಂಗಣ್ಣಿಗೆ ಗುರಿಯಾಯಿತು. ಕಾರಣ ಸಾಹಿತಿಗಳಿಲ್ಲದೆಯೇ ಸಾಹಿತ್ಯದ ಚಿಂತನೆ ನಡೆಸುವಂತಾಗಿತ್ತು. ರಾಜ್ಯಸಭಾ ಮಾಜಿ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ, ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿ ಆಡಳಿತಾಧಿಕಾರಿ ಶಿವಯ್ಯ ಮಠಪತಿ ಹೊರತುಪಡಿಸಿದರೆ ಸಾಹಿತ್ಯ ಚಿಂತನೆ ನಡೆಸುವವರು ಯಾರೂ ಇರಲಿಲ್ಲ. ಕಲಬುರಗಿ ನೆಲದಲ್ಲಿ ನೂರಾರು ಹಿರಿಯ ಸಾಹಿತಿಗಳಿದ್ದಾರೆ. ಅಂತವರ ಪೈಕಿ ಕೆಲವರನ್ನು ಆಹ್ವಾನಿಸಬಹುದಿಲ್ಲವೇ ಎಂಬ ಪ್ರಶ್ನೆಗಳು ಸಾಹಿತ್ಯ ವಲಯದಲ್ಲಿ ಕೇಳಿಬಂದವು. ಇದಲ್ಲದೆ ಪ್ರೇಕ್ಷಕರಲ್ಲೂ ಬೆರಳೆಣಿಕೆ ಸಾಹಿತಿಗಳು ಕಂಡು ಬಂದರು.

ಜಗತ್ತಿನ ಬಹುದೊಡ್ಡ ಸಾಹಿತಿ ಸುಧಾಮೂರ್ತಿ ಸುಧಾಮೂರ್ತಿ ಇಂಗ್ಲಿಷ್‌ ಜಗತ್ತಿನ ಬಹುದೊಡ್ಡ ಸಾಹಿತಿಯಾಗಿದ್ದಾರೆ. ಆದರೆ ರಾಜ್ಯದ ಸಾಹಿತಿಗಳಲ್ಲಿ ಅವರನ್ನು ಗುರುತಿಸುವವರಿಲ್ಲ. ಸಾಹಿತಿಗಳೊಂದಿಗೆ ತಿರುಗಾಡುವವರೂ ಸಹ ಸಾಹಿತಿಗಳಾ ಗುತ್ತಿರುವುದು ದುರದೃಷ್ಟಕರ ಸಂಗತಿ. ಸಾಹಿತ್ಯ ರಚನೆಗಿರುವ ಕಿಂಚಿತ್ತೂ ಕಲೆ, ಕಾಳಜಿ, ಜ್ಞಾನ ಇಲ್ಲದ ಅನೇಕರು ಪ್ರಸ್ತುತ ದಿನಗಳಲ್ಲಿ ಸಾಹಿತಿಗಳು, ಲೇಖಕರು, ಕವಿಗಳು ಎಂದು ಗುರುತಿಸಿಕೊಳ್ಳುತ್ತಿರುವುದು ಸಾಹಿತ್ಯ ಲೋಕಕ್ಕೆ ಬಹುದೊಡ್ಡ ನಷ್ಟ. 
ಡಾ| ಬಸವರಾಜ ಪಾಟೀಲ ಸೇಡಂ, ರಾಜ್ಯಸಭಾ ಮಾಜಿ ಸದಸ್ಯರು

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.