ಗದಗ-ವಾಡಿ ರೈಲ್ವೆ ಮಾರ್ಗ ಅಧಿಕಾರಿಗಳಿಂದ ಪರಿಶೀಲನೆ


Team Udayavani, Nov 22, 2018, 11:11 AM IST

gul-6.jpg

ಕುಷ್ಟಗಿ: ಗದಗ-ವಾಡಿ ರೈಲ್ವೆ ಮಾರ್ಗದ ಹಳಿ ಜೋಡಣಾ ಕಾಮಗಾರಿಗೆ ಕೈಗೆತ್ತಿಕೊಳ್ಳುವ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವಲಯದ ಹಿರಿಯ ಅಭಿಯಂತರ ಮನ್ಸೂರ್‌ಅಲಿ ಅವರು ಬುಧವಾರ ಪಟ್ಟಣ ವ್ಯಾಪ್ತಿಯಲ್ಲಿ ಗುರುತಿಸಿದ ಭೂಸ್ವಾಧೀನದ ಸ್ಥಳ ಪರಿಶೀಲನೆ ನಡೆಸಿದರು.

ಪಟ್ಟಣ ವ್ಯಾಪ್ತಿಯಲ್ಲಿರುವ ಗದಗ-ವಾಡಿ ರೈಲ್ವೆ ಮಾರ್ಗದ ವಿನ್ಯಾಸದಲ್ಲಿ ಭೌಗೋಳಿಕ ಆಧಾರವಾಗಿ ಕೊಪ್ಪಳ ರಸ್ತೆ ಹಾಗೂ ರಾಯಚೂರು ರಸ್ತೆಯಲ್ಲಿ ಕೆಳ ಸೇತುವೆಗಳು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲ್ಸೇತುವೆ ನಿರ್ಮಿಸಲು ವಿನ್ಯಾಸಗೊಳಿಸಲಾಗಿದೆ. ಉದ್ದೇಶಿತ ಯೋಜನೆಯನ್ನು ಬದಲಿಸಲಾಗದು ಸ್ಥಳೀಯ ಶಾಸಕರು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಥಾಸ್ಥಿತಿಯಲ್ಲಿ ಮೇಲ್ಸೇತುವೆ, ಕೊಪ್ಪಳ ರಸ್ತೆ ಹಾಗೂ ರಾಯಚೂರು ರಸ್ತೆಗಳಲ್ಲಿ ಕೆಳ ಸೇತುವೆ ಬದಲಿಗೆ ಮೇಲ್ಸೇತುವೆ ನಿರ್ಮಿಸಲು
ಯೋಜನೆಯಲ್ಲಿ ಮಾರ್ಪಟು ಮಾಡಲು ಅವಕಾಶದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ವಿಚಾರವನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.

ಗದಗ-ವಾಡಿ ರೈಲ್ವೆ ಮಾರ್ಗಕ್ಕೆ ಯಲಬುರ್ಗಾ ತಾಲೂಕಿನ ತಳಕಲ್‌ನಿಂದ ಕುಷ್ಟಗಿಯವರೆಗೂ 54 ಕಿ.ಮೀ. ಭೂಸ್ವಾಧೀನಗೊಂಡಿದ್ದು, ಕುಷ್ಟಗಿಯಿಂದ ಮುದೇನೂರು, ಕಿಡದೂರು, ಮ್ಯಾಗಳಪೇಟೆ ಲಿಂಗಸುಗೂರು ಭೂಸ್ವಾ ಧೀನ ಶೀಘ್ರವೇ ಕೈಗೆತ್ತಿಕ್ಕೊಳ್ಳಲಾಗುವುದು. ಕುಷ್ಟಗಿ ಪಟ್ಟಣದ ಸಂತ ಶಿಶುನಾಳ ಶರೀಫ್‌ ನಗರ, ಮಾರುತಿ ನಗರದ ಮಧ್ಯೆ 1.4 ಕಿ.ಮೀ. ಉದ್ದವಾಗಿ ಹಾಗೂ ರೈಲ್ವೆ ಮಾರ್ಗ ಮಧ್ಯದಿಂದ ಎಡಭಾಗ 85 ಮೀಟರ್‌, ಬಲ ಭಾಗ 50 ಮೀಟರ್‌ ವ್ಯಾಪ್ತಿಯಲ್ಲಿ ರೈಲ್ವೆ ಸ್ಟೇಷನ್‌ ಜಾಗೆ ಮೀಸಲಿರಿಸಲಾಗಿದೆ. ರೈಲ್ವೆ ಮಾರ್ಗವು, ಮಾರ್ಗ ಮಧ್ಯದಿಂದ ಎರಡು ಕಡೆ 20 ಮೀಟರ್‌ ನಂತೆ 40 ಮೀಟರ್‌ ಜಾಗೆಯಲ್ಲಿ ರೈಲ್ವೆ ಹಳಿಗಳ ಜೋಡಣೆ ಕಾರ್ಯ ನಡೆಯಲಿದೆ.

ಕುಷ್ಟಗಿ ಪಟ್ಟಣ ವ್ಯಾಪ್ತಿಯಲ್ಲಿ ಶೀಘ್ರವೇ ಕಾಮಗಾರಿ ಕೈಗೆತ್ತಿಗೊಳ್ಳಲಾಗುತ್ತಿದ್ದು, ಈಗಾಗಲೇ ಈ ಮಾರ್ಗದಲ್ಲಿ ಬರುವ ಕೃಷ್ಣೆ ಹಾಗೂ ಭೀಮಾ ನದಿಗೆ ಸೇತುವೆ ನಿರ್ಮಾಣ ಕಾರ್ಯಕ್ಕೆ ಚಾಲನೆ ಸಿಕ್ಕಿದೆ ಎಂದು ಮನ್ಸೂರ್‌ ಅಲಿ ಮಾಹಿತಿ ನೀಡಿದರು.

ಇದೇ ವೇಳೆ ಶಾಸಕ ಅಮರೇಗೌಡ ಪಾಟೀಲ ಬಯ್ನಾಪೂರ ಅವರು ವಿಷಯ ಪ್ರಸ್ತಾಪಿಸಿ, ಸಂತ ಶಿಶುನಾಳ ಶರೀಫ್‌ ನಗರದ ರೈಲ್ವೆ ಸ್ಟೇಷನ್‌ಗಾಗಿ 10 ಮನೆಗಳು, ಶಾಲೆ, ಅಂಗನವಾಡಿ ತೆರವುಗೊಳಿಸಲಾಗುತ್ತಿದೆ. ಈಗಾಗಲೇ ಮನೆಗಳ ವಾರಸುದಾರರಿಗೆ ಪರಿಹಾರವೂ ಸಿಕ್ಕಿದೆ. ಪುನರ್ವಸತಿಗಾಗಿ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆಂದು ತಿಳಿಸಿದರು.

ಯೋಜನೆಯಲ್ಲಿ ಕೊಪ್ಪಳ, ರಾಯಚೂರು ರಸ್ತೆಗಳಲ್ಲಿ ಕೆಳ ಸೇತುವೆ, ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ನಿರ್ಮಿಸಲು ಯೋಜಿಸಲಾಗಿದ್ದು, ಎಲ್ಲವೂ ಏಕಪ್ರಕಾರವಾಗಿ ಮೇಲ್ಸೇತುವೆಯಾಗಿ ಮಾರ್ಪಟ್ಟರೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ವಲಯದ ಸಂಬಂಧಿಸಿದ ಮುಖ್ಯಸ್ಥರಿಗೂ ಪತ್ರ ಬರೆದು ಮನವಿ ಮಾಡಲಾಗುವುದು ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದೇವೇಂದ್ರಪ್ಪ ಬಳೂಟಗಿ, ಪುರಸಭೆ ಸದಸ್ಯ ವಸಂತ ಮೇಲಿನಮನಿ, ತಾಪಂ ಸದಸ್ಯ ಸುರೇಶ ಕುಂಟನಗೌಡ್ರು, ಫಕೀರಪ್ಪ ಚಳಗೇರಿ, ಸೋಮಶೇಖರ ವೈಜಾಪೂರ, ಬಾಪುಗೌಡ ಮಾಲಿಪಾಟೀಲ ಇದ್ದರು. 

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.