ಗಂಡೋರಿ ನಾಲಾ ನೀರು ಬೆಳೆಗೆ ಹರಿಸಲು ಒತ್ತಾಯ


Team Udayavani, Dec 1, 2018, 11:32 AM IST

gul-7.jpg

ಕಲಬುರಗಿ: ಗಂಡೋರಿ ನಾಲಾ ನೀರನ್ನು ರೈತರ ಹೊಲಗಳಿಗೆ ಈಗಾಗಲೇ ಬಿಟ್ಟಿದ್ದು, ಬಿಡುಗಡೆ ಮಾಡಲಾದ ನೀರು ಕೆಲ ಗ್ರಾಮಗಳ ರೈತರಿಗೆ ತಲುಪುತ್ತಿಲ್ಲ, ಕೂಡಲೇ ಎಲ್ಲ ರೈತರ ಜಮೀನುಗಳಿಗೆ ಗಂಡೋರಿ ನಾಲೆ ನೀರು ಹರಿಸುವ ಮೂಲಕ ರೈತರ ಬೆಳೆಗಳ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರು ಕರ್ನಾಟಕ ನೀರಾವರಿ ನಿಗಮದ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಛಾಯೆ ಎದುರಿಸುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಹೇಳುವವರು, ಕೇಳುವವರಿಲ್ಲದಂತಾಗಿದೆ. ಮಳೆಯಿಲ್ಲದ ಕಾರಣ ಈಗಾಗಲೇ ತೊಗರಿ ಬೆಳೆ ಹಾನಿಯಾಗಿ ನಷ್ಟ ಅನುಭವಿಸುತ್ತಿದ್ದಾರೆ.

ಗಂಡೋರಿ ನಾಲಾದ ನೀರು ಕೆಲ ಜಮೀನುಗಳಿಗೆ ಬರುತ್ತಿದ್ದು, ಇನ್ನು ಕೆಲವರಿಗೆ ನೀರು ಮುಟ್ಟುತ್ತಿಲ್ಲ. ಇದು ಒಂದು ಕಣ್ಣಿಗೆ ಸುಣ್ಣ , ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವಂತಾಗಿದೆ. ಕಾಲುವೆ ಮೂಲಕ ನೀರು ಹರಿಯುತ್ತಿದ್ದರೂ ಕೆಲ ಗ್ರಾಮಗಳ ಜಮೀನಿಗೆ
ತಲುಪುತ್ತಿಲ್ಲ.ಇದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ನಾಲೆಯ ಮೂಲಕ ವ್ಯರ್ಥವಾಗಿ ಹರಿಯುತ್ತಿರುವ ನೀರನ್ನು ತಡೆದು ರೈತರ ಜಮೀನಿಗೆ ಮುಟ್ಟಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕಂದಗೋಳ, ಅರಣಕಲ್‌, ರೇವಗ್ಗಿ, ರಟಕಲ್‌ ಭಾಗಗಳ ರೈತರಿಗೆ ಗಂಡೋರಿ ನಾಲೆಯ ನೀರು ತಲುಪುತ್ತಿಲ್ಲ. ಕೂಡಲೇ ನೀರು ಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ ರೂಪಿಸಬೇಕಾಗುವುದು ಎಂದು ಎಚ್ಚರಿಸಿದರು. ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ರೇವಣಸಿದ್ದ ಬಡಾ, ರೇವಣಸಿದ್ದ ಅರಣಕಲ್‌, ಸಂಜು ಗೌಡರ್‌, ರಾಘವೇಂದ್ರ ಜಿ
ಹಾಗೂ ಇತರರು ಪಾಲ್ಗೊಂಡಿದ್ದರು.

ಕಾಲುವೆ ನೀರು ಸ್ಥಗಿತ
 ಕಲಬುರಗಿ: ಗಂಡೋರಿನಾಲಾ ಜಲಾಶಯದಲ್ಲಿ ಸದ್ಯಕ್ಕೆ 1.320 ಟಿಎಂಸಿ ಅಡಿ ನೀರು ಲಭ್ಯವಿದೆ. ಈ ನೀರನ್ನು ಬೇಸಿಗೆ ವರೆಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಾಗಿದೆ. ಅಲ್ಲದೇ ಹಿಂಗಾರು ಮಳೆಯು ಬಾರದೆ ಸಂಪೂರ್ಣ ಕೈಕೊಟ್ಟಿರುವುದರಿಂದ ಅನಿವಾರ್ಯವಾಗಿ ಕಾಲುವೆ ನೀರನ್ನು ಡಿ. 1 ರಿಂದ ಸ್ಥಗಿತಗೊಳಿಸಲಾಗುತ್ತಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಐಪಿಸಿ ವಿಭಾಗ ನಂ. 1ರ ಕಾರ್ಯಪಾಲಕ ಇಂಜಿನಿಯರ್‌ ತಿಳಿಸಿದ್ದಾರೆ.

ಪ್ರಸಕ್ತ ವರ್ಷ ಮಳೆ ಅಭಾವ ಇರುವುದರಿಂದ ಬೆಳೆ ಬೆಳೆಯಲು ಹಾಗೂ ದನಕರುಗಳಿಗೆ ನೀರಿನ ಅವಶ್ಯಕತೆಯಿದೆ. ಕಲಬುರಗಿ (ಗ್ರಾಮೀಣ) ಶಾಸಕ ಬಸವರಾಜ ಮತ್ತಿಮಡು ಅವರ ಕೋರಿಕೆ ಹಾಗೂ ರೈತರ ಬೇಡಿಕೆ ಮೇರೆಗೆ ಗಂಡೋರಿನಾಲಾ ಯೋಜನೆಯಿಂದ 2018ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ಕಾಲುವೆ ಜಾಲದಲ್ಲಿ ನಡೆಯುತ್ತಿರುವ ಆಧುನೀಕರಣ ಕಾಮಗಾರಿ ಸ್ಥಗಿತಗೊಳಿಸಿ ಮೇಲಾಧಿಕಾರಿಗಳ ಪರವಾನಗಿ ಪಡೆದು ನ. 7 ರಿಂದ ಕಾಲುವೆಯಲ್ಲಿ ನೀರು ಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.