ಸಾಲ ಮನ್ನಾ: ಸೇಡಂನಲ್ಲಿ ಪ್ರಾಯೋಗಿಕ ಜಾರಿ
Team Udayavani, Dec 2, 2018, 11:00 AM IST
ಕಲಬುರಗಿ: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಸೇಡಂ ತಾಲೂಕನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದ್ದರಿಂದ ರೈತರಿಂದ ಸಾಲದ ವಿವರ ಹಾಗೂ ಸ್ವಮಾಹಿತಿ ಒಳಗೊಂಡ ಅರ್ಜಿ ಸಲ್ಲಿಕೆ ವೇಗ ಹೆಚ್ಚಿಸಲು ಜಿಲ್ಲಾಡಳಿತ ಮುಂದಾಗಿದೆ.
ರಾಜ್ಯ ಸರ್ಕಾರ ಸೇಡಂ ತಾಲೂಕನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡು ಈಗಾಗಲೇ 20 ದಿನಗಳು ಕಳೆದಿದ್ದು, ಈ ಅವಧಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲ ಪಡೆದಿರುವ ಅಂದಾಜು 19 ಸಾವಿರ ರೈತರ ಪೈಕಿ ಇಲ್ಲಿಯವರೆಗೆ ಕೇವಲ ಸಾವಿರ ರೈತರಿಂದ ಮಾತ್ರ ಬೆಳೆ ಸಾಲ ಹಾಗೂ ವೈಯಕ್ತಿಕ ವಿವರದ ಅರ್ಜಿ ಸಲ್ಲಿಕೆಯಾಗಿವೆ.
ಸೇಡಂ ಆಯ್ಕೆ ಏಕೆ?: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾ ಪ್ರಕ್ರಿಯೆಗೆ ಚಾಲನೆ ನೀಡುವ ಅಂಗವಾಗಿ ಸರ್ಕಾರ ರಾಜ್ಯದ ದೊಡ್ಡಬಳ್ಳಾಪುರ ಹಾಗೂ ಜಿಲ್ಲೆಯ ಸೇಡಂ ತಾಲೂಕುಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡಿದೆ. ಸೇಡಂ ಆಯ್ಕೆ ಮಾಡಿಕೊಳ್ಳಲು ಪ್ರಮುಖ ಕಾರಣವೆಂದರೆ ಕಡಿಮೆ ಸಂಖ್ಯೆಯಲ್ಲಿ ರೈತರು ಸಾಲ ಪಡೆದಿರುವುದು. ಡಿಸಿಸಿ ಬ್ಯಾಂಕ್ನ ಸಹಕಾರಿ ಸಂಘಗಳಲ್ಲಂತೂ ಅತ್ಯಂತ ಕಡಿಮೆ ಎಂದರೆ ಜಿಲ್ಲೆಯ ತಾಲೂಕೊಂದರ ಹೋಬಳಿಯಲ್ಲಿ ಪಡೆಯಲಾದ ಸಾಲವನ್ನು ಇಡೀ ಸೇಡಂ ತಾಲೂಕಿನ ರೈತರು ಪಡೆದಿದ್ದಾರೆ. ಅದೇ ಸ್ಥಿತಿ ರಾಷ್ಟೀಕೃತ ಬ್ಯಾಂಕ್ ಗಳಲ್ಲೂ ಇದೆ.
ಡಿಸಿಸಿ ಬ್ಯಾಂಕ್ನ ಒಂದು ಲಕ್ಷ ರೂ. ವರೆಗಿನ ಬೆಳೆ ಸಾಲದ ಮನ್ನಾ ಯೋಜನೆ ಲಾಭ ಪಡೆಯಲು ಜಿಲ್ಲೆಯಾದ್ಯಂತ 52 ಸಾವಿರ ರೈತರು ಅರ್ಹರಾಗಿದ್ದರೆ ಸೇಡಂ ತಾಲೂಕಿನಲ್ಲಿ ಕೇವಲ 2473 ರೈತರಿದ್ದಾರೆ. ಬೆಳೆ ಸಾಲ ಮನ್ನಾ ಮೊತ್ತ ಕೇವಲ 5 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇಡೀ ಜಿಲ್ಲೆಯಾದ್ಯಂತ 144 ಕೋಟಿ ರೂ. ಬೆಳೆ ಸಾಲ ಮನ್ನಾ ಆಗಲಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಸಾಲ ಮನ್ನಾದ ರೈತರ ಪಟ್ಟಿ ಹಾಗೂ ಹಣದ ವಿವರಣೆ ಬ್ಯಾಂಕ್ ಹಾಗೂ ಶಾಖೆಯೊಂದಿಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಅದೇ ರೀತಿ ಸೇಡಂ ತಾಲೂಕಿನಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ 19 ಸಾವಿರ ರೈತರು ಬೆಳೆ ಸಾಲ ಪಡೆದಿದ್ದಾರೆ. ಅಂದಾಜು 20 ಕೋಟಿ ರೂ. ಮನ್ನಾ ಆಗುವ ಸಾಧ್ಯತೆಗಳಿವೆ. ಒಟ್ಟಾರೆ ರಾಜ್ಯದಲ್ಲಿಯೇ ಕಡಿಮೆಯಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಎಲ್ಲ ಪ್ರಕ್ರಿಯೆ ಸರಳ ಹಾಗೂ ಬೇಗ ಮುಗಿಸುವಂತಾಗಲು ಸೇಡಂ ತಾಲೂಕನ್ನು ಆಯ್ಕೆ ಮಾಡಿಕೊಂಡಿದೆ.
ನಾಡ ಕಚೇರಿಯಲ್ಲೂ ಅವಕಾಶ: 20 ದಿನಗಳಲ್ಲಿ ಕೇವಲ ನಾಲ್ಕು ಸಾವಿರ ರೈತರ ಹೆಸರುಗಳು ಮಾತ್ರ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬೆಳೆ ಸಾಲ ಮನ್ನಾದ ಅರ್ಹತೆಯ ಅರ್ಜಿ ಸಲ್ಲಿಕೆಯಾಗಿವೆ. ಇನ್ನು 9 ದಿನಗಳ ಕಾಲ ಮಾತ್ರ ಉಳಿದಿದೆ. ಈ ಅವಧಿಯಲ್ಲಿ ಉಳಿದ ರೈತರ ಹೆಸರುಗಳೆಲ್ಲ ನೋಂದಣಿಯಾಗಲು ಅಸಾಧ್ಯ ಎನ್ನುವುದನ್ನು ಮನಗಂಡ ಜಿಲ್ಲಾಡಳಿತ ಈಗ ನಾಡಕಚೇರಿಯಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರ ಸರದಿ ಇರುವುದನ್ನು ಮನಗಂಡು ಈ ವ್ಯವಸ್ಥೆ ಮಾಡಲಾಗಿದೆ. ಇದರ ಜತೆಗೆ ಬೇಗನೇ ಮನ್ನಾ ಹಣ ಪಡೆಯುವ ಅರ್ಹತಾ ರೈತರ ಪಟ್ಟಿ ಅಂತಿಮಗೊಳಿಸಲು ತಂತ್ರಾಂಶವೊಂದನ್ನು ರೂಪಿಸಲಾಗಿದೆ.
ರೈತರ ಪಟ್ಟಿ ಬಿಡುಗಡೆ: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಬೆಳೆ ಸಾಲ ಹೊಂದಿದ್ದ ರೈತರ ಪ್ರಾಥಮಿಕ ಪಟ್ಟಿಯನ್ನು ಶಾಖೆ ಹಾಗೂ ಸಾಲದ ಮೊತ್ತದ ವಿವರಣೆಯೊಂದಿಗೆ ಪ್ರಕಟಿಸಲಾಗಿದೆ. ಎರಡೆರಡು ಕಡೆ ಸಾಲ ಪಡೆದಿರುವುದನ್ನು ಪತ್ತೆ ಮಾಡಿದಾಗ ಒಂದೆಡೆ ಮಾತ್ರ ಹೆಸರು ಅಂತಿಮಗೊಳಿಸಲಾಗಿದೆ. ಒಟ್ಟಾರೆ ಪಟ್ಟಿಯಲ್ಲಿ ಹೆಸರು ಇರದೇ ಇದ್ದವರು ಆಯಾ ತಾಲೂಕಾ ತಹಶೀಲ್ದಾರ ಅಧ್ಯಕ್ಷತೆಯಲ್ಲಿ ರಚಿತವಾಗುವ ಸಾಲ ಮನ್ನಾದ ಸಮಿತಿಗೆ ಸಾಲ ಮನ್ನಾದ ಅರ್ಜಿಯೊಂದಿಗೆ ಎಲ್ಲ ವಿವರಣೆಯನ್ನು ಸಲ್ಲಿಸಬೇಕೆಂದು ಜಿಲ್ಲಾಡಳಿತ ಕೋರಿದೆ.
ತನಿಖೆ ಕಾರ್ಯ ಚುರುಕು: ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (ವಿಎಸ್ಎಸ್ಎನ್) ಸಂಘಗಳಲ್ಲಿ ಬೆಳೆ ಸಾಲ ವಿತರಣೆಯಲ್ಲಿ ಅವ್ಯಹವಾರ, ಸಾಲ ಮನ್ನಾದಲ್ಲಿ ಲೋಪಕ್ಕೆ ಸಂಬಂಧಿಸಿದಂತೆ ಸಹಕಾರಿ ಕಾಯ್ದೆ 69ರ ಅಡಿ ತನಿಖೆ ಕಾರ್ಯ ಚುರುಕುಗೊಂಡಿದೆ. ಸಂಘದ ಕಾರ್ಯದರ್ಶಿಯವರು ಐದಾರು ವರ್ಷಗಳಿಂದ ರೈತರಿಗೆ ಸಾಲ ವಿತರಿಸದೇ ಇರುವುದು ಹಾಗೂ ಬೆಳೆ ಸಾಲ ಮನ್ನಾ ಹಣ ವಿತರಿಸದೇ ಇರುವುದು ಜತೆಗೆ ಅಮಾಯಕ ಹಾಗೂ ಮೃತ ರೈತರ ಹೆಸರಿನಲ್ಲಿ ಸಾಲ ಎತ್ತಿ ಹಾಕಿರುವುದು ಪತ್ತೆಯಾಗಿದೆ ಎನ್ನಲಾಗಿದೆ.
ಆಶ್ಚರ್ಯಕರ ಸಂಗತಿ ಎಂದರೆ ಬಂಗಾರ ಅಡವು ಇಡದೇ ಸಾಲ ಎತ್ತಿ ಹಾಕಿರುವುದು ಈಗ ಸಾಲ ಮರು ಪಾವತಿ ಮಾಡಿರುವುದು ಪತ್ತೆಯಾಗಿದೆ. ತನಿಖೆಯನ್ನು ಜಿಲ್ಲಾಧಿಕಾರಿಗಳು ನಿಗಾ ವಹಿಸುತ್ತಿರುವುದನ್ನು ಅವಲೋಕಿಸಿದರೆ ತನಿಖೆ ಒಂದು ಹಂತ ತಲುಪಲಿದೆ ಎನ್ನಲಾಗುತ್ತಿದೆ.
ಸೇಡಂ ತಾಲೂಕಿನ ರೈತರು ಸದ್ಯ ವಾಣಿಜ್ಯ ಬ್ಯಾಂಕ್ಗಳಲ್ಲಿ ಪಡೆದ ಸಾಲ ಮನ್ನಾ ಪಡೆಯುವುದಕ್ಕಾಗಿ ರೈತರು ತಮ್ಮ
ಸ್ವಯಂ ಘೋಷಣೆಯನ್ನು ತಾಲೂಕಿನ ಯಾವುದೇ ನಾಡಕಚೇರಿಯಲ್ಲಿ ಸಲ್ಲಿಸಬಹುದು. ಪ್ರತಿ ದಿನ ಒಂದು ನಾಡಕಚೇರಿಯವರು 50 ಜನ ರೈತರ ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದ್ದು, 50ಕ್ಕಿಂತ ಹೆಚ್ಚಿನ ಅರ್ಜಿಗಳಿಗೆ ಟೋಕನ್ ಕೊಡಲಾಗುವುದು. ಇದಲ್ಲದೇ ಪ್ರತಿ ಬ್ಯಾಂಕ್ನ ಶಾಖೆಯಲ್ಲಿ ಒಬ್ಬ ಗ್ರಾಮ ಲೆಕ್ಕಾಧಿಕಾರಿ ಹಾಗೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಆರ್.ವೆಂಕಟೇಶಕುಮಾರ, ಜಿಲ್ಲಾಧಿಕಾರಿ, ಕಲಬುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’