ಕೊಲೆ ಪ್ರಕರಣ: ಜ್ಯೋತಿ ಸೋದರ ಬಂಧನ


Team Udayavani, Dec 6, 2018, 10:48 AM IST

gul-2.jpg

ಕಲಬುರಗಿ: ಚಿಂಚೋಳಿ ತಾಲೂಕಿನ ನಿಡಗುಂದಾ ಗ್ರಾಮದಲ್ಲಿ ವಧುದಕ್ಷಿಣೆಗಾಗಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಕೊಲೆಯಾದ ಅಜಯ ಅಲಿಯಾಸ್‌ ನಾಗೇಶ ಮತ್ತು ಜ್ಯೋತಿ ಅಲಿಯಾಸ್‌ ಲಲಿತಾ ಪತಿ-ಪತ್ನಿಯರಲ್ಲ. ಈ ಇಬ್ಬರೂ ಮದುವೆಯಾಗದೆ ಸಹಜೀವನ
ನಡೆಸುತ್ತಿದ್ದರು. ಜ್ಯೋತಿಯ ಸಹೋದರನೇ ಈ ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್‌ ತನಿಖೆಯಿಂದ ಬಯಲಿಗೆ ಬಂದಿದೆ.

ಕಳೆದ ನ.2ರಂದು ರಾತ್ರಿ ನಿಡಗುಂದಾ ಗ್ರಾಮದ ಸರ್ಕಾರಿ ಉರ್ದು ಶಾಲೆಯಲ್ಲಿ ಅಜಯ ಮತ್ತು ಜ್ಯೋತಿ ಒಟ್ಟಿಗೆ ಇದ್ದಾಗ ಮೂವರು ಆರೋಪಿಗಳು ಕಬ್ಬಿಣದ ರಾಡ್‌ನಿಂದ ಹೊಡೆದು ಜೋಡಿಯನ್ನು ಕೊಲೆ ಮಾಡಿದ್ದರು. ನಂತರ ಇಬ್ಬರ ಶವಗಳನ್ನು ಗ್ರಾಮದಿಂದ ಒಂದು ಕಿ.ಮೀ ದೂರದ ಹೊಲವೊಂದರಲ್ಲಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು.

ಪ್ರಕರಣದ ಸಂಬಂಧ ಡಿ.4 ರಂದು ಸೇಡಂ ಬಸ್‌ ನಿಲ್ದಾಣದಲ್ಲಿ ನಿಡಗುಂದಾ ಗ್ರಾಮದ ನಿವಾಸಿ, ಜ್ಯೋತಿಯ ಮಲತಾಯಿ ಮಗ ದತ್ತು ಅಲಿಯಾಸ್‌ ದತ್ತಪ್ಪ ಪಾರ್ದಿ ಎನ್ನುವಾತನನ್ನು ಬಂಧಿಸಲಾಗಿದೆ. ಮತ್ತಿಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ ತಿಳಿಸಿದ್ದಾರೆ.

ನಗರದ ಪೊಲೀಸ್‌ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆಯಾದ ಅಜಯ ಮಹಾರಾಷ್ಟ್ರ ಮೂಲದವನಾಗಿದ್ದು, ಕಳ್ಳತನದಂತ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಅದೇ ರೀತಿ ದತ್ತು ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದ. ಈ ನಡುವೆ ಇಬ್ಬರ ಮಧ್ಯೆ ಸೇ°ಹ ಬೆಳೆದು, ಅಲ್ಲಿಂದ ಅಜಯ ನಿಡಗುಂದಾ ಗ್ರಾಮದಲ್ಲಿ ಬಂದು ನೆಲೆಸಿದ್ದ. ತದನಂತರ ದತ್ತುವಿನ ಸಹೋದರಿಯಾದ ಜ್ಯೋತಿ ಮತ್ತು
ಅಜಯ ನಡುವೆಯೂ ಸ್ನೇಹ ಬೆಸೆದಿತ್ತು. ಜ್ಯೋತಿ ಹಾಗೂ ಅಜಯ ಇಬ್ಬರೂ ಮದುವೆಯಾಗಲು ಒಪ್ಪಿಕೊಂಡು ಒಟ್ಟಿಗೆ ವಾಸವಾಗಿದ್ದರು ಎಂದರು.

ಇವರು ಪಾರ್ದಿ ಸಮುದಾಯದವರಾಗಿದ್ದು, ತಮ್ಮ ಸಂಪ್ರದಾಯದಂತೆ ಜ್ಯೋತಿಯನ್ನು ಮದುವೆಯಾಗಲು ಒಂದು ಲಕ್ಷ ರೂ. ವಧುದಕ್ಷಿಣೆ ನೀಡಲು ಅಜಯ ಒಪ್ಪಿಕೊಂಡಿದ್ದ. ಆದರೆ, ಮದುವೆಗೆ ಮುನ್ನವೇ ಜ್ಯೋತಿಯೊಂದಿಗೆ ಸಹ ಜೀವನ ನಡೆಯುತ್ತಿರುವುದರಿಂದ ವಧುದಕ್ಷಿಣೆ ನೀಡಲು ಅಜಯ ನಿರಾಕರಿಸಿದ್ದ. ಅಲ್ಲದೇ, ಈ ಹಿಂದೆ ಕಳ್ಳತನ ಮಾಡಿದ್ದ ಚಿನ್ನಾಭರಣದಲ್ಲಿ 80 ಗ್ರಾಂ ಚಿನ್ನದ ಪಾಲನ್ನು ದತ್ತುವಿಗೆ ಅಜಯ ನೀಡಬೇಕಿತ್ತು ಅದನ್ನು ನೀಡಿರಲಿಲ್ಲ ಎಂದು ವಿವರಿಸಿದರು.

ವಧುದಕ್ಷಿಣೆ ನಿರಾಕರಣೆ ಹಾಗೂ ತನಗೆ ಸಿಗಬೇಕಿದ್ದ ಚಿನ್ನದ ಪಾಲು ಸಿಕ್ಕಿಲ್ಲ ಎನ್ನುವ ಸಿಟ್ಟಿನಿಂದ ನ.2ರಂದು ಅಜಯ, ಜ್ಯೋತಿ ಒಟ್ಟಿಗೆ ಇದ್ದ ಸ್ಥಳಕ್ಕೆ ಆರೋಪಿ ದತ್ತು ತನ್ನ ಇಬ್ಬರು ಸಹಚರರೊಂದಿಗೆ ತೆರಳಿದ್ದ. ಈ ವೇಳೆ ಅಜಯ ನೊಂದಿಗೆ ಮೂವರು ಜಗಳ ತೆಗೆದು ಕೊಲೆ ಮಾಡಿದ್ದರು.
 
ಜತೆಗೆ ಅಜಯ ಕೊಲೆಯ ವಿಷಯ ಹಾಗೂ ಹಿಂದಿನ ಕಳ್ಳತನ ಪ್ರಕರಣಗಳು ಬೆಳಕಿಗೆ ಬರಬಾರದೆಂದು ಜ್ಯೋತಿಯನ್ನು ಆರೋಪಿಗಳು ಹತ್ಯೆ ಮಾಡಿದ್ದರು. ಅಲ್ಲಿಂದ ಶವಗಳನ್ನು ಸಾಗಿಸಿ ಹೊಲದಲ್ಲಿ ಸುಟ್ಟು ಪರಾರಿಯಾಗಿದ್ದರು. ಈ ಕೊಲೆಗಳನ್ನು ಮುಂಬೈ ಕಡೆಯಿಂದ ಬಂದು ಯಾರೋ ಮಾಡಿ ಹೋಗಿದ್ದಾರೆ ಎಂಬಂತೆ ಬಿಂಬಿಸಲು ಈ ರೀತಿ ಮಾಡಿದ್ದಾರೆ ಎಂದು ತಿಳಿಸಿದರು.

ಸೇಡಂ ತಾಲೂಕಿನ ಅಪರಿಚಿತ ಮಹಿಳೆ ಕೊಲೆ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯಾಚರಣೆ ವೇಳೆ ಅಜಯ ಮತ್ತು ಜ್ಯೋತಿ ಕೊಲೆ ಪ್ರಕರಣ ಬಯಲಿಗೆ ಬಂದಿದೆ ಎಂದು ಮಾಹಿತಿ ನೀಡಿದರು. ಎಸ್‌ಪಿ, ಹೆಚ್ಚುವರಿ ಎಸ್‌ಪಿ ಮಾರ್ಗದರ್ಶನದಲ್ಲಿ ಶಹಾಬಾದ ಡಿಎಸ್‌ಪಿ ಕೆ. ಬಸವರಾಜ, ಸುಲೇಪೇಟ್‌ ಸಿಪಿಐ ಡಿ.ವಿ. ಕಟ್ಟಿಮನಿ, ಸೇಡಂ ಸಿಪಿಐ ಶಂಕರಗೌಡ, ಸುಲೇಪೇಟ್‌ ಪಿಎಸ್‌ಐ ರಾಜಶೇಖರ, ಸೇಡಂ ಪಿಎಸ್‌ಐ ಸುನೀಲ ಕುಮಾರ
ಹಾಗೂ ಸಿಬ್ಬಂದಿಯಾದ ಶ್ರೀಕಾಂತ, ಹಣಮಂತ, ಜಗನ್ನಾಥ, ದುಧಿರಾಮ, ಮನೋಹರ, ಶಿವಕುಮಾರ, ಯೋಗೇಂದ್ರ ಅವರನ್ನೊಳಗೊಂಡ ತನಿಖಾ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಹೆಚ್ಚುವರಿ ಎಸ್‌ಪಿ ಜಯಪ್ರಕಾಶ, ಸಿಪಿಐ ಶಂಕರಗೌಡ ಹಾಗೂ ಮತ್ತಿತರ ಪೊಲೀಸ್‌ ಸಿಬ್ಬಂದಿ ಹಾಜರಿದ್ದರು.

ಅಜಯ ಐದು ಮಕ್ಕಳ ತಂದೆ
ಕೊಲೆಯಾದ ಅಜಯ ಮೂಲತಃ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಲ್ಟನ್‌ ತಾಲೂಕಿನ ರಾಜೀವ ನಗರ ಕೊಳಗಿ ನಿವಾಸಿಯಾಗಿದ್ದಾನೆ. ಈ ಮೊದಲೇ ಈತನಿಗೆ ಮದುವೆಯಾಗಿದ್ದು, ಐವರು ಮಕ್ಕಳಿದ್ದಾರೆ. ಕಳ್ಳತನವೇ ವೃತ್ತಿಯಾಗಿದ್ದ ಈತನ ವಿರುದ್ಧ ಮುಂಬೈ ಸೇರಿದಂತೆ ಇತರ ಠಾಣೆಗಳಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಅಜಯಗಾಗಿ ಮಹಾರಾಷ್ಟ್ರ ಪೊಲೀಸರು ಶೋಧ ನಡೆಸುತ್ತಿದ್ದರು. ಆದರೆ, ಮಹಾರಾಷ್ಟ್ರದಿಂದ ಎರಡೂಮೂರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಈತ ದತ್ತು ಸ್ನೇಹದಿಂದಾಗಿ ನಿಡಗುಂದಾ ಗ್ರಾಮದಲ್ಲಿ ನೆಲೆಸಿದ್ದ. ಈ ವೇಳೆ ಜ್ಯೋತಿಯೊಂದಿಗೆ ಸಂಬಂಧ ಬೆಳೆದಿತ್ತು ಎಂದು ಎಸ್‌ಪಿ ಎನ್‌. ಶಶಿಕುಮಾರ ತಿಳಿಸಿದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.