ಮನೆಗೆ ಆಕಸ್ಮಿಕ ಬೆಂಕಿ: ಆಭರಣ-ನಗದು ಆಹುತಿ
Team Udayavani, Dec 8, 2018, 10:36 AM IST
ಚಿಂಚೋಳಿ: ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದ 6 ತೊಲೆ ಬಂಗಾರ, 25 ತೊಲೆ ಬೆಳ್ಳಿ ಹಾಗೂ ನಗದು ಲಕ್ಷಾಂತರ ರೂ. ಬೆಂಕಿಗೆ ಆಹುತಿ ಆಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಚಂದ್ರಕಾಂತ ಭೀಮಶಾ ಭಜಂತ್ರಿ ಎನ್ನುವರ ಮನೆಯೇ ಬೆಂಕಿಗೆ ಆಹುತಿಯಾಗಿದ್ದು. ಮನೆಯವರೆಲ್ಲ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿದ ಮನೆಯೊಂದರ ಗೃಹಪ್ರವೇಶಕ್ಕೆ ಹೋಗಿ ಅಲ್ಲಿಯೇ ತಂಗಿದ್ದರು. ಈ ವೇಳೆ ಘಟನೆ ನಡೆದಿದೆ.
ಆಕಸ್ಮಿಕವಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದ್ದನ್ನು ನೋಡಿದ ಗ್ರಾಮಸ್ಥರು ಬೆಂಕಿ ಆರಿಸುವ ಮೊದಲೇ ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು, ದಿನ ಬಳಕೆ ಆಹಾರ ಧಾನ್ಯ, ಬಟ್ಟೆ ಹಾಗೂ ಮಗಳ ಮದುವೆ ಸಂಗ್ರಹಿಸಿಟ್ಟಿದ್ದ ಕಿವಿಯೋಲೆ, ತಾಳಿ ಹಾಗೂ ಇನ್ನಿತರ ಒಡವೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಶಾಸಕರ ಭೇಟಿ: ಬೆಂಕಿಗೆ ಮನೆಯೊಳಗಿದ್ದ ಬೆಲೆ ಬಾಳುವ ವಸ್ತುಗಳು ಹಾನಿಯಾಗಿದ್ದು ಹಾಗೂ ಲಕ್ಷಾಂತರ ರೂ.ಗಳು ಸುಟ್ಟ ಬಗ್ಗೆ ಕಂದಾಯ ಅಧಿಕಾರಿಗಳಿಗೆ ಮತ್ತು ರಟಕಲ್ ಪೊಲೀಸರಿಗೆ ವರದಿ ನೀಡುವಂತೆ ತಿಳಿಸಲಾಗಿದೆ. ಶೀಘ್ರವೇ ಸರ್ಕಾರದಿಂದ ಪರಿಹಾರ ಕೊಡಿಸುತ್ತೇನೆ ಎಂದು ಶಾಸಕ ಡಾ| ಉಮೇಶ ಜಾಧವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಭರವಸೆ ನೀಡಿದರು.
ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಪಿಎಸ್ಐ ಇಂದಿರಾ ಪಾಟೀಲ ಚಂದಾಪುರ, ಮಾರುತಿ ಜಮಾದಾರ, ಅಲಿಮ ನಾಯಕೋಡಿ, ಮಲ್ಲಿಕಾರ್ಜುನ ಚಿಂತಕುಂಟ, ಬಸವರಾಜ ಕೋಲಕುಂದಿ, ದೇವಲಾ ನಾಯಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ