17ನೇ ಅಕ್ಷರ ಜಾತ್ರೆಗೆ ಕಂಗೊಳಿಸುತ್ತಿದೆ ಕನ್ನಡ ಭವನ


Team Udayavani, Dec 8, 2018, 10:56 AM IST

gul-3.jpg

ಕಲಬುರಗಿ: ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 8ರಿಂದ ಆರಂಭವಾಗಲಿದ್ದು, ಪ್ರಾಧ್ಯಾಪಕಿ, ಸಾಹಿತಿ ಡಾ| ನಾಗಾಬಾಯಿ ಬುಳ್ಳಾ ಅವರ ಸರ್ವಾಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ಅಕ್ಷರ ಜಾತ್ರೆ ನಡೆಯಲಿದ್ದು, ಇಡೀ ಕನ್ನಡ ಭವನ ಆವರಣ ನವ ವಧುವಿನಿಂದ ಕಂಗೊಳಿಸುತ್ತಿದೆ. ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಸಮ್ಮೇಳನದ ವೇದಿಕೆ ಸೇರಿದಂತೆ ಸಂಪೂರ್ಣ ಕನ್ನಡ ಭವನದ ಆವರಣವನ್ನು ಸಿಂಗಾರಗೊಳಿಸಲಾಗಿದೆ.

ಕನ್ನಡದ ಧ್ವಜ ಮತ್ತು ದೇಶಿ ಸಂಸ್ಕೃತಿಯನ್ನು ಬಿಂಬಿಸುವ ಛತ್ರಿ, ಚಾದರ್‌ಗಳು ರಾರಾಜಿಸುತ್ತಿವೆ. ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ ಹಾಗೂ ಪದಾಧಿಕಾರಿಗಳು, ಸ್ವಾಗತ ಸಮಿತಿ ಸದಸ್ಯರು ಶುಕ್ರವಾರ ರಾತ್ರಿಯವರೆಗೆ ಸಮ್ಮೇಳನದ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ. 

ಶನಿವಾರ ಬೆಳಗ್ಗೆ 9 ಗಂಟೆಗೆ ನಗರದ ನೆಹರು ಗಂಜ್‌ನ ನಗರೇಶ್ವರ ಬಾಲ ಭವನದಿಂದ ಬಾಪುಗೌಡ ದರ್ಶನಾಪುರ ರಂಗಮಂದಿರದ ವರೆಗೆ ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆ ನಡೆಯಲಿದೆ. 19 ವರ್ಷಗಳ ನಂತರ ಮಹಿಳೆಯೊಬ್ಬರು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಆಗುವ ಮೂಲಕ ಕನ್ನಡದ ತೇರು ಎಳೆಯುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ನಂತರ ಸಮ್ಮೇಳನಕ್ಕೆ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಚಾಲನೆ ನೀಡುವರು.

ಸಮ್ಮೇಳನಕ್ಕಾಗಿ 325ಕ್ಕೂ ಹೆಚ್ಚು ವಿವಿಧ ಸಂಪನ್ಮೂಲ ವ್ಯಕ್ತಿಗಳನ್ನು ಬಳಸಿಕೊಳ್ಳಲಾಗಿದ್ದು, ಮೆರವಣಿಗೆಯಲ್ಲಿ 15ಕ್ಕೂ ಅಧಿಕ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಈ ಬಾರಿ ಸಮ್ಮೇಳನದಲ್ಲಿ ದೇಶಿ ಸಂಸ್ಕೃತಿ ಮತ್ತು ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಗಣ್ಯರು, ಶಿಕ್ಷಕರು, ಶಾಲಾ ಮಕ್ಕಳು, ಕನ್ನಡಾಭಿಮಾನಿಗಳು ಸೇರಿ ಎರಡು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸಮ್ಮೇಳನಕ್ಕೆ ಐದು ಸಾವಿರ ಕನ್ನಡಾಸಕ್ತರು ಭಾಗಹಿಸುವ ಸಾಧ್ಯತೆ ಇದೆ ಎನ್ನುತ್ತಾರೆ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ.

ಡಿ.8 ಮತ್ತು ಡಿ. 9ರಂದು ನಡೆಯುವ ಅಕ್ಷರ ಜಾತ್ರೆಯಲ್ಲಿ ವಿವಿಧ ವಿಚಾರ ಸಂಕಿರಣ ಮತ್ತು ಕವಿ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಪುಸ್ತಕ ಮಳಿಗೆಗಳಿಗೂ ಆದ್ಯತೆ ನೀಡಲಾಗಿದೆ. ಸಾಹಿತ್ಯಾಭಿಮಾನಿಗಳನ್ನು ಸೆಳೆಯಲು ನಗರಾದ್ಯಂತ ಸಮ್ಮೇಳನದ ಸ್ವಾಗತ ಫಲಕಗಳನ್ನು ಅಳವಡಿಸಲಾಗಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಇರುವರೆಗೂ 16 ಸಮ್ಮೇಳನಗಳನ್ನು ಯಶಸ್ವಿಯಾಗಿ ಸಂಘಟಿಸಿದೆ. 17ನೇ ಸಮ್ಮೇಳನವನ್ನು ಸಕಲ ರೀತಿಯಲ್ಲೂ ಅರ್ಥಪೂಣವಾಗಿ ಆಚರಿಸಲು ಕಸಾಪ ಅಧ್ಯಕ್ಷ ಮತ್ತು ಪದಾಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಹಾಲಿ ಅಧ್ಯಕ್ಷ ವೀರಭದ್ರ ಸಿಂಪಿ ಇದುವರೆಗೂ 9 ವರ್ಷಗಳ ಕಾಲ ಜಿಲ್ಲಾ ಕಸಾಪದ ಸಾರಥ್ಯ ವಹಿಸಿದ್ದು, ಅವರ ಅಧಿಕಾರಾವಧಿಯಲ್ಲಿ ನಡೆಯುತ್ತಿರುವ 8ನೇ ಸಮ್ಮೇಳನ ಇದಾಗಿದೆ. ಹೀಗಾಗಿ ಆರು ತಿಂಗಳಿಂದಲೂ ಸಮ್ಮೇಳನಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಂಡು ಬಂದಿದ್ದು, ಶುಕ್ರವಾರವೂ ಸಮ್ಮೇಳನಕ್ಕೆ ಅಂತಿಮ ರೂಪುರೇಷೆ ನೀಡುವಲ್ಲಿ ತಲ್ಲೀನರಾಗಿದ್ದ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.