ವೈದ್ಯರ ಕರೆ ತರಲೂ ಬಳಕೆಯಾಗ್ತಿದೆ ಆಂಬ್ಯುಲೆನ್ಸ್‌


Team Udayavani, Dec 16, 2018, 10:21 AM IST

gul-1.jpg

ಕಲಬುರಗಿ: ರೋಗಿಗಳನ್ನು ಅವರಿದ್ದ ಸ್ಥಳದಿಂದ ಆಸ್ಪತ್ರೆ ವರೆಗೂ ಸಾಗಿಸುವ 108 ಆಂಬ್ಯುಲೆನ್ಸ್‌ ಕಾರ್ಯಾಚರಣೆಗೆ ಬಂದ ನಂತರ ಜಿಲ್ಲಾಸ್ಪತ್ರೆ ಹಾಗೂ ತಾಲೂಕಾಸ್ಪತ್ರೆ ಜತೆಗೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿದ್ದ ಆಂಬ್ಯುಲೆನ್ಸ್‌ಗಳು ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿವೆ.

ವಿಭಾಗೀಯ ಕೇಂದ್ರ ಸ್ಥಾನವಾಗಿರುವ ಮಹಾನಗರದಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ನಾಲ್ಕು ಆಂಬ್ಯುಲೆನ್ಸ್‌ಗಳಿವೆ. ಅದರಲ್ಲಿ ಆಸ್ಪತ್ರೆಯಲ್ಲಿ ಹೆರಿಗೆಯಾದ ಬಾಣಂತಿ ಹಾಗೂ ನವಜಾತ ಶಿಶುವನ್ನು ಅವರ ಸ್ಥಳಗಳಿಗೆ ಬಿಟ್ಟು ಬರುವ ನಗು ಮಗು ಆಂಬ್ಯುಲೆನ್ಸ್‌ನಲ್ಲಿ ಮಾತ್ರ ವೆಂಟಿಲೇಟರ್‌ ಹಾಗೂ ಸುಸಜ್ಜಿತ ವ್ಯವಸ್ಥೆಯಿದೆ. ಉಳಿದ ಮೂರು ಆಂಬ್ಯುಲೆನ್ಸ್‌ಗಳಲ್ಲಿ ಒಂದರಲ್ಲಿ ಮಾತ್ರ ವೆಂಟಿಲೇಟರ್‌ ಸೌಲಭ್ಯವಿದೆ. ಉಳಿದೆರಡು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿವೆ.

ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಡಿ ತಾಲೂಕಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜಿಲ್ಲೆಯಾದ್ಯಂತ ಒಟ್ಟು 37 ಆಂಬ್ಯುಲೆನ್ಸ್‌ಗಳಿವೆ. ಆದರೆ ಇವುಗಳಲ್ಲಿ ಏಳು ಕೆಟ್ಟು ನಿಂತಿವೆ. ಕಾರ್ಯನಿರ್ವಹಣೆಯ 30 ಆಂಬ್ಯುಲೆನ್ಸ್‌ಗಳಲ್ಲಿ ಎಂಟು ಆಂಬ್ಯುಲೆನ್ಸ್‌ಗಳಿಗೆ ಮಾತ್ರ ವೆಂಟಿಲೇಟರ್‌ ಸೌಲಭ್ಯವಿದೆ. ಉಳಿದ 22 ಆಂಬ್ಯುಲೆನ್ಸ್‌ಗಳು ಈಗಿನ ವೇಗತೆ -ದಕ್ಷತೆ ಹಾಗೂ ಇತರ ಸೌಲಭ್ಯಗಳನ್ನು ಹೊಂದಿಲ್ಲ.
 
ವೈದ್ಯರಿಗೆ ಬಳಕೆ: ಇಲ್ಲಿನ ಜಿಲ್ಲಾಸ್ಪತ್ರೆ ಆಂಬ್ಯುಲೆನ್ಸ್‌ಗಳನ್ನು ತುರ್ತು ಚಿಕಿತ್ಸೆ ಸಲುವಾಗಿ ನಗರದ ಬಸವೇಶ್ವರ ಆಸ್ಪತ್ರೆ ಹಾಗೂ ಇತರ ಆಸ್ಪತ್ರೆಗಳಿಗೆ ರೋಗಿಗಳನ್ನು ಸಾಗಿಸಲು ಬಳಕೆ ಮಾಡಲಾಗುತ್ತಿದೆ. ಆಂಬ್ಯುಲೆನ್ಸ್‌ಗಳು ಅಷ್ಟೊಂದು
ಸುಸಜ್ಜಿತವಾಗದಿರುವುದನ್ನು ನೋಡಿದಾಗ ಸ್ಪಷ್ಟವಾಗಿ ಅರಿವಿಗೆ ಬರುತ್ತದೆ. ತುರ್ತು ಚಿಕಿತ್ಸೆಗಾಗಿ ರಾತ್ರಿ ಸಮಯದಲ್ಲಿ ವೈದ್ಯರನ್ನು ಕರೆ ತರಲು ಆಂಬ್ಯುಲೆನ್ಸ್‌ ಬಳಕೆಯಾಗುತ್ತಿದೆ ಎನ್ನುವ ಅಂಶ ಈ ಸಂದರ್ಭದಲ್ಲಿ ಕಂಡು ಬಂತು. ಆಸ್ಪತ್ರೆ ಆಡಳಿತಾಧಿಕಾರಿಗಳ ನಿರ್ದೇಶನ ಮೇರೆಗೆ ಆಂಬ್ಯುಲೆನ್ಸ್‌ನು ರಾತ್ರಿ ಸಮಯದಲ್ಲಿ ವೈದ್ಯರ ಮನೆಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ಚಾಲಕರು ವಿವರಣೆ ನೀಡುತ್ತಾರೆ.

ಶ್ರದ್ಧಾಂಜಲಿಗೆ ಉಪಯೋಗ: ಕಡು ಬಡುವರು ಹಾಗೂ ನಿರ್ಗತಿಕರು ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆ ಅಂತವರ ಶವ ಸಾಗಿಸುವ ಶ್ರದ್ಧಾಂಜಲಿ ವಾಹನ ಹೆಚ್ಚು ಉಪಯೋಗವಾಗುತ್ತಿದೆ. ಈ ವಾಹನ ಶವವನ್ನು ಅವರ ಮನೆಗೆ ಹಚ್ಚಿ ಬರುತ್ತಿದೆ. ವಾಹನದ ಬಣ್ಣ ಕಪ್ಪಾಗಿದೆ.

ಆಧುನಿಕ ಮಾದರಿ ಅಂದರೆ ವೇಗ ಹಾಗೂ ಇತರ ಸುಸಜ್ಜಿತ ಸೌಲಭ್ಯಗಳು ತಮ್ಮ ಆಂಬ್ಯುಲೆನ್ಸ್‌ಗಳಲ್ಲಿ ಇಲ್ಲ. ಆದರೆ ನಗು ಮಗು ಆಂಬ್ಯುಲೆನ್ಸ್‌ಗಳು ಸುಸಜ್ಜಿತವಾಗಿವೆ. ಏಳು ಸಂಪೂರ್ಣ ಕೆಟ್ಟು ಹೋಗಿವೆ. 22 ಆಂಬ್ಯುಲೆನ್ಸ್‌ಗಳಲ್ಲಿ ಇನ್ನೂ ಕೆಲವು ದುರಸ್ತಿಗೆ ಬಂದಿವೆ. ಎರಡು ಸುಸಜ್ಜಿತ ಹಾಗೂ ಆಧುನಿಕತೆಯ ಎರಡು ಆಂಬ್ಯುಲೆನ್ಸ್‌ಗಳಿಗೆ ಹೈದ್ರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
 ಡಾ| ಮಾಧವರಾವ್‌ ಪಾಟೀಲ, ಡಿಎಚ್‌ಒ, ಕಲಬುರಗಿ

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.