ಕೈ ತಪ್ಪಿದ ಸಚಿವ ಸ್ಥಾನ:ಕಲಬುರಗಿಯಲ್ಲಿ ಅಜಯಸಿಂಗ್ ಅಭಿಮಾನಿಗಳ ಆಕ್ರೋಶ
Team Udayavani, Dec 23, 2018, 1:01 PM IST
ಕಲಬುರಗಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಜೇವರ್ಗಿ ಕ್ಷೇತ್ರದ ಶಾಸಕ ಡಾ| ಅಜಯ್ ಸಿಂಗ್ ಅವರಿಗೆ ಸ್ಥಾನಸಿಗದೇ ಕೈ ತಪ್ಪಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಶನಿವಾರ ಜೇವರ್ಗಿ ಪಟ್ಟಣದಲ್ಲಿ ಏಕಾಏಕಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಹೈ ಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಡಾ| ಅಜಯಸಿಂಗ್ ಎರಡನೇ ಬಾರಿಗೆ ಶಾಸಕರಾಗಿದ್ದಾರಲ್ಲದೇ ಅವರ ತಂದೆ ದಿ. ಧರ್ಮಸಿಂಗ್ ಕ್ರಾಂಗ್ರೆಸ್ಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಧರ್ಮಸಿಂಗ್ ಅವರಿಂದು ಇದ್ದಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ. ಸಚಿವ ಸ್ಥಾನ ನೀಡದೇ ದ್ರೋಹ ಬಗೆಯಲಾಗಿದೆ. ಈಗಲಾದರೂ ಪರಿಸ್ಥಿತಿ ಅರಿತು ನ್ಯಾಯ ಕಲ್ಪಿಸಬೇಕೆಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ರಾಜಶೇಖರ ಸಿರಿ, ಸಿದ್ದಲಿಂಗರೆಡ್ಡಿ ಇಟಗಾ, ಚಂದ್ರಕಾಂತ ಯಂಕಂಚಿ, ರಹಿಮಾನ್ ಪಟೇಲ, ಬಹದ್ಧೂರ ರಾಠೊಡ, ಪ್ರಕಾಶ ಪುಲಾರೆ, ನೀಲಕಂಠ ಅವುಂಟಿ, ರವಿ ಕೋಳಕೂರ, ಬೆಣ್ಣೆಪ್ಪ ಕೊಂಬಿನ, ಸಕ್ರೆಪ್ಪಗೌಡ ಹರನೂರ, ತುಕಾರಾಮ ಚವ್ಹಾಣ ಗುಡೂರ, ತಿಪ್ಪಣ್ಣ ಕನಕ, ಶರಣು ಗುತ್ತೇದಾರ, ಬಸಣ್ಣ ಸರಕಾರ, ಬೀದಿ ವ್ಯಾಪಾರಿ ಸಂಘದ ಅಧ್ಯಕ್ಷರಾದ ಇಮಾಮಸಾಬ್ ಭಾಗವಾನ ಮಿರ್ಚಿ, ಫಯಾಜ ಜಮಾದಾರ, ದೌಲಪ್ಪ ಮದನ, ಮಲ್ಲಿಕಾರ್ಜುನ ಕೆಲ್ಲೂರ, ಶ್ರೀಮಂತ ಧನಕರ್, ಮಲ್ಲಣ್ಣ ಕೊಡಚಿ, ಸುನಿಲ ಹಳ್ಳಿ, ಮಲ್ಲಮ್ಮ ಕೊಂಬಿನ, ಸಿದ್ಧು ಶರ್ಮಾ ಜನಿವಾರ, ದೇವಿಂದ್ರ ಮುದಬಾಳ, ಮರೆಪ್ಪ ಸರಡಗಿ, ಸಿದ್ರಾಮ ಕಟ್ಟಿ, ಭೀಮಾಶಂಕರ ಜನಿವಾರ, ಪ್ರಶಾಂತಗೌಡ ಮಾಲಿ ಪಾಟೀಲ ಜೈನಾಪೂರ, ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ವಿಷ ಸೇವಿಸಿದ ಯುವಕ
ಜೇವರ್ಗಿ ಶಾಸಕ ಡಾ| ಅಜಯಸಿಂಗ್ ಅವರಿಗೆ ಸಚಿವ ಸ್ಥಾನ ಸಿಗದೇ ಇದ್ದುದ್ದಕ್ಕೆ ಬೇಸರಗೊಂಡ ಅವರ ಅಭಿಮಾನಿಯೊಬ್ಬ ವಿಷ ಸೇವಿಸಿದ್ದಾನೆ. ಡಾ| ಅಜಯ್ಸಿಂಗ್ ಕಟ್ಟಾ ಅಭಿಮಾನಿಯಾಗಿರುವ 35 ವರ್ಷದ ಚಿಕ್ಕ ಜೇವರ್ಗಿ ಗ್ರಾಮದ ಮಹ್ಮದ್ ಜಿಲಾನಿ ಮುನ್ಸಿ ವಿಷ ಸೇವಿಸಿದ ಯುವಕ. ಶಾಸಕರಿಗೆ ಸಚಿವ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿಷ ಸೇವಿಸಿದ್ದಾನೆ. ಈತನೀಗ ಜೇವರ್ಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಹ್ಮದ ಜಿಲಾನಿ ಚಿಕಿತ್ಸೆಗೆ ಸ್ವಲ್ಪ ಮಟ್ಟಿಗೆ ಸ್ಪಂಧಿಸುತ್ತಿದ್ದು, ಎರಡೂಮೂರು ದಿನಗಳ ಕಾಲ ಸ್ಪಷ್ಟವಾಗಿ ಏನೂ ಹೇಳಲಿಕ್ಕೆ ಸಾಧ್ಯವಿಲ್ಲ ಎಂದು ಚಿಕಿತ್ಸೆ ನೀಡಿದ ಡಾ| ರಾಘವೇಂದ್ರ ಕುಲಕರ್ಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್