ಇವಿಎಂ ಬಳಸಿ ಮತ ಕದಿಯುತ್ತಿದೆ ಬಿಜೆಪಿ: ಧನ್ನಿ


Team Udayavani, Jan 1, 2019, 6:43 AM IST

gul-2.jpg

ಆಳಂದ: ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಅವರ ಕೈ ಬಲಪಡಿಸಿ, ಲೋಕಸಭೆ ಚುನಾವಣೆಯಲ್ಲಿ ಮತ್ತಷ್ಟು ಶಕ್ತಿ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸೇರಿದಂತೆ ರಾಷ್ಟ್ರವ್ಯಾಪಿ ಕಾರ್ಯಕರ್ತರೆಲ್ಲ ಒಗ್ಗೂಡಿ ಡಿ.12ರಿಂದ ಜ.12ರ ವರೆಗೆ ಮಾಯಾವತಿ ಅವರ 63ನೇ ಜನ್ಮದಿನದ ಅಂಗವಾಗಿ ಆರ್ಥಿಕ ಸಂಯೋಗ ದಿನದ ಅಭಿಯಾನ ಪ್ರಾರಂಭಿಸಿದಂತೆ ಸೋಮವಾರ ತಾಲೂಕಿನಲ್ಲೂ ಚಾಲನೆ ನೀಡಲಾಯಿತು.

ಜ.15ರಂದು 10 ಜಿಲ್ಲೆಗಳನ್ನು ಒಳಗೊಂಡು ಕಲಬುರಗಿಯಲ್ಲೇ ವಿಭಾಗ ಮಟ್ಟದಲ್ಲಿ ಕುಮಾರಿ ಮಾಯಾವತಿ ಅವರ 63ನೇ ಜನ್ಮದಿನ ಆಚರಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 63 ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಬಿಎಸ್‌ಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಹಾಗೂ
ಕಲಬುರಗಿ ವಿಭಾಗೀಯ ಉಸ್ತುವಾರಿ ಮಹಾದೇವ ಬಿ. ಧನ್ನಿ ಹೇಳಿದರು. 

ಚುನಾವಣೆ ಮುನ್ನವೇ ಮತದಾರರಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅವರಿಂದ ಆರ್ಥಿಕ ಸಹಾಯ ಪಡೆಯಲು ಗ್ರಾಮೀಣಮಟ್ಟ ಸೇರಿದಂತೆ ಪಟ್ಟಣದಲ್ಲಿ ಸಂಚರಿಸಲಾಗುವುದು. ಮತದಾರರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್‌, ಬಿಜೆಪಿ ದೇಶವನ್ನು 70 ವರ್ಷಗಳ ಕಾಲ ಆಳಿದರೂ ಸಂವಿಧಾನ ಆಶಯದಂತೆ ನಡೆದುಕೊಂಡಿಲ್ಲ. ವ್ಯವಸ್ಥೆ ಖಾಸಗೀಕರಣಗೊಳಿಸಿ ವಿದ್ಯಾವಂತರಿಗೆ ಅತಂತ್ರಗೊಳಿಸಿದ್ದು, ಇಂದಿಗೂ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿಲ್ಲ. ಸ್ವತ್ಛ ಭಾರತ ಕೇವಲ ಹೆಸರಿಗೆ ಮಾತ್ರ, ಸರ್ಕಾರಿ ಆಸ್ಪತ್ರೆಗಳು ದನದ ಕೊಟ್ಟಿಗೆಯಾಗಿವೆ. ವಸತಿ ನಿಲಯಗಳು ಹಂದಿಗಳ ಗೂಡಾಗಿವೆ. ಶಿಕ್ಷಣ ಖಾಸಗೀಕರಣದಿಂದ ಅತಿಯಾದ ಶುಲ್ಕ ಭರಿಸುವಂತಾಗಿದೆ. ಪ್ರಧಾನಿ ಮೋದಿ ಅವರು, ಸಬಕಾ ಸಾತ್‌, ಸಬಕಾ ವಿಕಾಸ್‌ ಎಂದು ಹೇಳಿದ್ದು ಸುಳ್ಳಿನಿಂದ ಕೂಡಿದೆ. ಜನರ ಖಾತೆಗೆ 15 ಲಕ್ಷ ರೂ. ನೀಡುವ ಭರವಸೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಎಂದು ಜನರಿಗೆ ಮೋಸಮಾಡಿದ್ದಾರೆ. 

ನೋಟು ಅಮಾನ್ಯಿಕರಣದಿಂದ ಜನರಿಗೆ ತೊಂದರೆ ಮಾಡಿ, ಜಂಗಲ್‌ ರಾಜ್ಯವಾಗಿಸಿದ್ದಾರೆ. ಬಿಜೆಪಿ ಸರ್ಕಾರ ಇರುವ ಕಡೆ ದಲಿತ ಮಹಿಳೆಯರು ಮೇಲೆ ದೌರ್ಜನ್ಯ, ಗೂಂಡಾಗಿರಿ, ದಲಿತರ ಹಲ್ಲೆ ನಡೆದರೂ ಕಣ್ಣುಮುಚ್ಚಿಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ಗಾಳಿಗೆ ತೂರಿ ಚುನಾವಣೆಯಲ್ಲಿ ಇವಿಎಂ ಬಳಸಿ ಮತಗಳನ್ನು ಕದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಮತಪತ್ರಗಳ ಮೂಲಕವೇ ಮತದಾನ ನಡೆಯಬೇಕು. ಆದರೆ ಯಂತ್ರಗಳ ಮೋಸದಿಂದ ದೇಶದ ಶೇ. 85ರಷ್ಟು ಜನರ ಹಿತ ಕಾಯುವ ಬದಲು ಬೆರಳೆಣಿಕೆಯಷ್ಟೇ ಜನರ ಹಿತಕಾಯುತ್ತಿದ್ದಾರೆ. ಮೋದಿ ಅವರಿಗೆ ಬಂಡವಾಳ ಶಾಹಿಗಳೇ ಆಸ್ತಿಯಾದರೆ, ಅಕ್ಕ ಮಾಯಾವತಿ ಅವರಿಗೆ ಒಂದು ವೋಟಿನ ಜೊತೆಗೆ ಒಂದು ನೋಟು ನೀಡಿ ಆರ್ಥಿಕ ಮತ್ತು ಅಧಿಕಾರದ ಶಕ್ತಿ ತುಂಬುವ ಜನರೇ ಆಸ್ತಿಯಾಗಲಿದ್ದಾರೆ ಎಂದು ಹೇಳಿದರು.

ಶ್ಯಾಮರಾವ್‌ ಕಾಂಬಳೆ ಹೆಬಳಿ, ಸೂರ್ಯಕಾಂತ ಜಿಡಗಾ, ಮಲ್ಲಿಕಾರ್ಜುನ ವೈಜಾಪುರ ಹಾಗೂ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.