6ನೇ ಚಿತ್ರಸಂತೆಯಲ್ಲಿ ಕಲಾಕೃತಿಗಳ ಕಲರವ


Team Udayavani, Jan 14, 2019, 6:59 AM IST

gul-3.jpg

ಕಲಬುರಗಿ: ಕಳೆದ ಆರು ವರ್ಷಗಳಿಂದ ವರ್ಷಂಪ್ರತಿ ನಡೆದುಕೊಂಡು ಬರುತ್ತಿರುವ ಚಿತ್ರಸಂತೆ ರವಿವಾರ ನಗರದ ಸಾರ್ವಜನಿಕ ಉದ್ಯಾನವನದಲ್ಲಿ ನಡೆದು ಕಲಾಕೃತಿಗಳ ಕಲರವ ಮೆರಗು ತಂದಿತು. ಸಾರ್ವಜನಿಕ ಉದ್ಯಾನವನದಲ್ಲಿ ರವಿವಾರ ಬೆಳಗ್ಗೆ 10ರಿಂದ ರಾತ್ರಿ 7:30ರ ವರೆಗೆ ನಡೆದ 6ನೇ ಚಿತ್ರಸಂತೆಯಲ್ಲಿ ನೂರಾರು ಕಲಾವಿದರು ತಮ್ಮ ಕಲಾಕೃತಿಗಳೊಂದಿಗೆ ಆಸಕ್ತಿಯಿಂದ ಭಾಗವಹಿಸಿದ್ದರು.

ಚಿತ್ರರಸಿಕರು ಆಸಕ್ತಿಯಿಂದ ವೀಕ್ಷಿಸಿದರಲ್ಲದೇ ಕಲಾಕೃತಿಗಳನ್ನು ಖರೀದಿ ಮಾಡಿ ಕಲಾವಿದರಿಗೆ ಸಹಾಯ ಮಾಡಿದರು. ಆದರೆ ಈ ವರ್ಷ ಮೂರು ಲಕ್ಷ ರೂ. ಮೌಲ್ಯದಷ್ಟು ಕಲಾಕೃತಿಗಳು ಮಾರಾಟವಾದವು ಎನ್ನಲಾಗಿದೆ. ಆದರೆ ಹಿಂದಿನ ವರ್ಷ 6 ರಿಂದ 7ಲಕ್ಷ ರೂ. ಮೌಲ್ಯದಷ್ಟು ಕಲಾಕೃತಿಗಳು ಮಾರಾಟವಾಗಿದ್ದವು.

ಕಲಾ ಗ್ಯಾಲರಿ ಸ್ಥಾಪನೆಯಾಗಲಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಎಚ್ಕೆಸಿಸಿಐ, ಗುಲ್ಬರ್ಗ ವಿವಿ , ಕೇಂದ್ರೀಯ ವಿವಿ, ವಿಕಾಸ ಅಕಾಡೆಮಿ, ಹೈ.ಕ ಶಿಕ್ಷಣ ಸಂಸ್ಥೆ, ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ಚೈತನ್ಯಮಯಿ ಆರ್ಟ್‌ ಗ್ಯಾಲರಿ ಹಾಗೂ ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿದ್ದ 6ನೇ ಚಿತ್ರ ಸಂತೆಗೆ ಚಾಲನೆ ನೀಡಿದ ಕರ್ನಾಟಕ ಕೇಂದ್ರೀಯ ವಿವಿ ಕುಲಪತಿಗಳಾದ ಪ್ರೊ| ಎಚ್.ಎಂ. ಮಹೇಶ್ವರಯ್ಯ ಮಾತನಾಡಿ, ಜಗದ್ವಿಖ್ಯಾತ ಚಿತ್ರಕಲಾವಿದ ಡಾ| ಎಸ್‌.ಎಂ. ಪಂಡಿತ, ನಾಡೋಜ ಜೆ.ಎಸ್‌. ಖಂಡೇರಾವ್‌, ಡಾ| ಎ.ಎಸ್‌. ಪಾಟೀಲ ಮುಂತಾದ ಶ್ರೇಷ್ಠ ಕಲಾವಿದರ ನಾಡಾದ ಕಲಬುರಗಿಯಲ್ಲಿ 20 ಎಕರೆ ಭೂ ಪ್ರದೇಶದಲ್ಲಿ ಒಂದು ಶ್ರೇಷ್ಠ ಕಲಾ ಗ್ಯಾಲರಿ ನಿರ್ಮಾಣವಾಗುವುದು ಅಗತ್ಯವಾಗಿದೆ. ಇದು ಸಾಕಾರಗೊಂಡಲ್ಲಿ ಕಲಾಕೃತಿಗಳನ್ನು ವೀಕ್ಷಿಸಲು ಕಲಾಸಕ್ತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಚಿತ್ರಕಲಾ ಪರಿಷತ್ತು ಆಯೋಜಿಸುವ ಚಿತ್ರಸಂತೆಗೆ 2 ಕೋಟಿ ರೂ. ಬಿಡುಗಡೆ ಮಾಡುವ ಸರ್ಕಾರ ಕಲಬುರಗಿಯಲ್ಲಿ ಐದು ವರ್ಷಗಳಿಂದ ನಡೆಯುತ್ತಿರುವ ಚಿತ್ರಸಂತೆಗೆ ಬಿಡಿಗಾಸು ನೀಡದೇ ಇರುವುದು ಬೇಸರದ ಸಂಗತಿಯಾಗಿದೆ ಎಂದು ಕುಲಪತಿಗಳು ನುಡಿದರು.

ವಿಕಾಸ ಅಕಾಡೆಮಿ ಅಧ್ಯಕ್ಷ ಡಾ| ಬಸವರಾಜ ಪಾಟೀಲ ಸೇಡಂ ಅಧ್ಯಕ್ಷತೆ ವಹಿಸಿ, ಕಲೆಗೆ ಸೂಕ್ತ ಪ್ರೋತ್ಸಾಹ ಸಿಕ್ಕಾಗ ಅದು ಎತ್ತರಕ್ಕೆ ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಚಿತ್ರಸಂತೆ ಪ್ರಧಾನ ಸಂಯೋಜಕ ಡಾ| ಎ.ಎಸ್‌. ಪಾಟೀಲ ಪ್ರಾಸ್ತಾವಿಕ ಮಾತನಾಡಿ, ಬೆಂಗಳೂರಿನಲ್ಲಿ ಕಳೆದ 15 ವರ್ಷಗಳಿಂದ ಚಿತ್ರಸಂತೆ ನಡೆಸಲಾಗುತ್ತಿದೆ. ಕಲಬುರಗಿಯಲ್ಲಿ ಐದು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. 50 ಸಾವಿರಕ್ಕಿಂತಲೂ ಹೆಚ್ಚಿನ ಕಲಾಸಕ್ತರು ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ. ಸುಮಾರು 25 ಲಕ್ಷ ರೂ.ಗೂ ಹೆಚ್ಚು ಕಲಾಕೃತಿಗಳು ಮಾರಾಟವಾಗಿವೆ ಎಂದರು.

ಶಾಸಕಿ ಖನೀಜ್‌ ಫಾತೀಮಾ, ಎಚ್ಕೆಸಿಸಿಐ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ, ಮಾಜಿ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ, ಗುಲ್ಬರ್ಗ ವಿವಿ ದೃಶ್ಯ ವಿಭಾಗದ ಡಾ| ಪರಿಮಳಾ ಅಂಬೇಕರ, ಆನಂದ ಟೆಕ್ಸ್‌ ಟೈಲ್‌ನ ಆನಂದ ದಂಡೋತಿ, ಎಸಿಸಿ ಸಿಮೆಂಟ್ ಕಂಪನಿಯ ವ್ಯವಸ್ಥಾಪಕ ಅಭಿನಂದನ್‌ ಕಿರಣಗಿ, ಚಿತ್ರಸಂತೆಯ ಸಂಯೋಜಕ ಡಾ| ಪರಶುರಾಮ ಪಿ. ಹಾಗೂ ಇತರರು ಇದ್ದರು. ಎಂ.ಎಚ್. ಬೆಳಮಗಿ ಸ್ವಾಗತಿಸಿದರು, ಡಾ| ಸುಜಾತಾ ಪಾಟೀಲ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಸ್ವಚ್ಛ ಭಾರತ್‌, ಭಾರತೀಯ ಹಬ್ಬಗಳು, ನಮ್ಮೂರ ಉದ್ಯಾನವನ ಕುರಿತು ಮಕ್ಕಳ ಚಿತ್ರಕಲಾ ಸ್ಪರ್ಧೆಯೂ ಜರುಗಿತು. ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಶಸ್ತಿಗಳನ್ನು ಹಾಗೂ ಪಾಲ್ಗೊಂಡ ಎಲ್ಲ ಮಕ್ಕಳಿಗೂ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಲಾಯಿತು.

ಮನರಂಜಿಸಿದ ಕಲಾಕೃತಿಗಳು: ಚಿತ್ರಸಂತೆಗೆ ಮಹಾನಗರದ ನಾಗರಿಕರು ಕುಟುಂಬ ಸಮೇತ ಆಗಮಿಸಿ ಕಲಾಕೃತಿಗಳನ್ನು ವೀಕ್ಷಿಸುತ್ತಿರುವುದು ಕಂಡು ಬಂತು. ಮೂರ್ತ ಚಿತ್ರ, ಭಾವಚಿತ್ರ, ನಿಸರ್ಗ ಚಿತ್ರ, ಪಕ್ಷಿ, ಪ್ರಾಣಿಗಳ ಚಿತ್ರಗಳು, ಐತಿಹಾಸಿಕ ಸ್ಮಾರಕಗಳು, ರಾಷ್ಟ್ರೀಯ ನಾಯಕರು, ದೇವಾನುದೇವತೆಗಳು, ಶರಣರ, ಜನಪದ ಸಂಸ್ಕೃತಿ, ರೇಖಾ ಚಿತ್ರಗಳು, ಮಧುಬನಿಯಂತಹ ಜನಪದ ಶೈಲಿಯ ಚಿತ್ರ, ಮೈಸೂರು ತಂಜಾವೂರು ಶೈಲಿಯ ಸಾಂಪ್ರಾದಾಯಿಕ ಚಿತ್ರಕಲೆ ಸೇರಿದಂತೆ ನೂರಾರು ಕಲಾಕೃತಿಗಳು ನೋಡುಗರ ಕಣ್ಮನ ಸೆಳೆದವು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.