ಜಾಗತಿಕ ಮಟ್ಟಕ್ಕೆ ಬಸವ ತತ್ವ ಪ್ರಚಾರ


Team Udayavani, Jan 14, 2019, 9:25 AM IST

gul-10.jpg

ಬಾಗಲಕೋಟೆ: ಬಸವಣ್ಣನವರನ್ನು ಜಾಗತಿಕ ಮಟ್ಟಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ವಿಶ್ವದ ಪ್ರಮುಖ ಐದಾರು ಭಾಷೆಗಳಲ್ಲಿ ಗ್ರಂಥ ತಯಾರಿಕೆ ಕಾರ್ಯ ನಡೆಯುತ್ತಿದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಕೂಡಲಸಂಗಮದಲ್ಲಿ ನಡೆದ ಶರಣ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಸಂವಿಧಾನ ಬರೆದ ಡಾ| ಅಂಬೇಡ್ಕರ್‌ ಅವರಿಗೂ ಬಸವಣ್ಣನ ಬಗ್ಗೆ ಅಷ್ಟೊಂದು ಗೊತ್ತಿರಲಿಲ್ಲ. ಆದ್ದರಿಂದ ಬಸವಣ್ಣನನ್ನು ಅಮೆರಿಕದಿಂದ ರಷ್ಯಾ ವರೆಗೂ ಪರಿಚಯಿಸಿ, ಅವರನ್ನು ಜಾಗತಿಕ ಮಹಾನ್‌ ನಾಯಕರನ್ನಾಗಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

12ನೇ ಶತಮಾನದಲ್ಲಿ ಬಸವ ತತ್ವ, ಲಿಂಗಾಯತ ಧರ್ಮ ಜನ್ಮತಾಳಿದರೂ ಕಲ್ಯಾಣ ಕ್ರಾಂತಿ ಬಳಿಕ ಬಹಳಷ್ಟು ಹಿನ್ನಡೆಯಾಗಿದೆ. ಬಸವ ತತ್ವವೇ ಅಳಿದು ಹೋಗುವ ಸಂದರ್ಭದಲ್ಲಿ ಡಾ| ಫ.ಗು. ಹಳಕಟ್ಟಿ ಬಸವ ತತ್ವಕ್ಕೆ ಮರು ಜೀವ ನೀಡಿದ್ದಾರೆ. ಅಂತಹ ಹಳಕಟ್ಟಿ ಹುಟ್ಟು ಹಾಕಿದ ಬಿಎಲ್‌ಡಿಇ ಸಂಸ್ಥೆ ಅಧ್ಯಕ್ಷನಾಗಿ, ಬಸವಣ್ಣನನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸ ಮಾಡಲು ಅಣಿಯಾಗಿದ್ದೇವೆ ಎಂದು ಹೇಳಿದರು.

ಆರು ಭಾಷೆಯಲ್ಲಿ ಗ್ರಂಥ: ಬಸವಣ್ಣನನ್ನು ಜಾಗತಿಕ ಮಟ್ಟಕ್ಕೆ ಪರಿಚಯಿಸುವ ಜತೆಗೆ ಅವರು ಹಾಕಿದ ಬಸವ ತತ್ವ ಪ್ರಚಾರಕ್ಕಾಗಿ ವಿಶ್ವದ ಪ್ರಮುಖ ಐದರಿಂದ ಆರು ಭಾಷೆಯಲ್ಲಿ ಗ್ರಂಥ ರೂಪಿಸುವ ಕೆಲಸ ನಡೆದಿದೆ. ಬಿಎಲ್‌ಡಿಇ ಸಂಸ್ಥೆಯಿಂದ ಈಗಾಗಲೇ ಎರಡು ಕೋಟಿ ರೂ. ಅನುದಾನ ನೀಡಿದ್ದು, ಅಗತ್ಯ ಬಿದ್ದರೆ 3 ಕೋಟಿ ರೂ. ಅನುದಾನ ನೀಡಲಾಗುವುದು. ಈ ಗ್ರಂಥವನ್ನು ವಿಶ್ವದ ಎಲ್ಲ ರಾಷ್ಟ್ರಗಳ ಅಧ್ಯಕ್ಷರು, ಎಲ್ಲ ವಿಶ್ವ ವಿದ್ಯಾಲಯ, ಕಾಲೇಜುಗಳಿಗೆ ಉಚಿತವಾಗಿ ನೀಡುವ ಉದ್ದೇಶವಿದೆ ಎಂದರು. ಅಮೆರಿಕ ಅಧ್ಯಕ್ಷರಿಗೆ ಮಹಾತ್ಮ ಗಾಂಧೀಜಿ ಗೊತ್ತಿದ್ದಾರೆ. ಆದರೆ, ಬಸವಣ್ಣ ಗೊತ್ತಿಲ್ಲ. ಹೀಗಾಗಿ ವಿಶ್ವ ಮಹಾನ್‌ ನಾಯಕರನ್ನಾಗಿ ಬಸವಣ್ಣನನ್ನು ಕಾಣುವ ಆಶಯ ನನ್ನದಾಗಿದೆ ಎಂದು ಹೇಳಿದರು.

ಬಸವಣ್ಣ ಸ್ಥಾಪಿಸಿದ್ದ ಲಿಂಗಾಯತ ಧರ್ಮ, ಅವರ ಬಸವ ತತ್ವ ಎಲ್ಲವೂ ನಶಿಸಿ ಹೋಗಿದ್ದವು. ಕಲ್ಯಾಣ ಕ್ರಾಂತಿ ಬಳಿಕ, ಬಸವ ತತ್ವಕ್ಕೆ ದೊಡ್ಡ ಹಿನ್ನಡೆಯಾಗಿತ್ತು. ಆದರೆ, ಡಾ| ಫ.ಗು. ಹಳಕಟ್ಟಿ ಅವರು, ಎಲ್ಲೋ ಅಡತಿ-ಕಿರಾಣಿ ಅಂಗಡಿ, ಯಾರದೋ ಮನೆ ಜಗಲಿ ಮೇಲಿದ್ದ ಬಸವಣ್ಣನ ವಚನ ಸಂಗ್ರಹಿಸಿ ಸಂಪುಟ ಪ್ರಕಟಿಸಿದ್ದರು. ಈ ಮೂಲಕ ಬಸವ ತತ್ವ ಪುನಃ ಪ್ರಚಲಿತಕ್ಕೆ ಬಂತು. ಅಂತಹ ಹಳಕಟ್ಟಿ ಕಟ್ಟಿದ ಬಿಎಲ್‌ಡಿಇ ಸಂಸ್ಥೆ ಅಧ್ಯಕ್ಷನಾಗಿ, ಬಸವ ತತ್ವವನ್ನು ಇನ್ನಷ್ಟು ಪ್ರಚಾರ ಮಾಡುವ ಕೆಲಸ ಮಾಡುವೆ.
ಎಂ.ಬಿ. ಪಾಟೀಲ, ಗೃಹ ಸಚಿವ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.