ದುಧನಿಯಲ್ಲಿ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ


Team Udayavani, Jan 15, 2019, 6:50 AM IST

gul-2.jpg

ಸೊಲ್ಲಾಪುರ: ಅಕ್ಕಲಕೋಟ ತಾಲೂಕು ದುಧನಿ ಗ್ರಾಮದಲ್ಲಿ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿವಯೋಗಿ ಸಿದ್ಧರಾಮನ ಯೋಗದಂಡಕ್ಕೆ ಸಮ್ಮತಿ ಕಟ್ಟೆ ಮೇಲೆ ಸೋಮವಾರ ಅಕ್ಷತಾ ಕಾರ್ಯಕ್ರಮ ಅದ್ಧೂರಿಯಿಂದ ನಡೆಯಿತು.

ಮಂದಿರದಲ್ಲಿ ಸೋಮವಾರ ಬೆಳಗ್ಗೆ ಸಿದ್ಧರಾಮನ ಮೂರ್ತಿಗೆ ರುದ್ರಾಭಿಷೇಕ ಮಾಡಲಾಯಿತು. ಗ್ರಾಮದೊಳಗಿದ್ದ ಮಠ-ಮಂದಿರದೊಳಗಿರುವ ಶಿವಲಿಂಗಗಳಿಗೆ ತೈಲಾಭಿಷೇಕ ಮಾಡಲಾಯಿತು. ಮಲ್ಲಿಕಾರ್ಜುನ ಮಂದಿರದಲ್ಲಿ ಶಾಂತಲಿಂಗ ಶ್ರೀಗಳಿಂದ ಪೂಜೆ ನಡೆದ ನಂತರ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಐದು ನಂದಿಧ್ವಜಗಳ ವಾದ್ಯ ಸಮೇತ ಮೆರವಣಿಗೆ ನಡೆಯಿತು. ಮೆರವಣಿಗೆ ರಸ್ತೆ ಎರಡು ಬದಿ ಜನ ಹೂಗಳಿಂದ ನಂದಿಧ್ವಜಗಳ ಸ್ವಾಗತ ಮಾಡುತ್ತಿರುವ ದೃಶ್ಯ ಕಂಡು ಬಂತು. ದಾರಿಯುದ್ದಕ್ಕೂ ಬಣ್ಣ, ಬಣ್ಣದ ರಂಗೋಲಿ ಹಾಕಲಾಗಿತ್ತು.

ಮೆರವಣಿಗೆ ಮಂದಿರ ತಲುಪಿದ ನಂತರ ನಂದಿಧ್ವಜಗಳಿಂದ ಪ್ರದಕ್ಷಣೆ ಹಾಕಲಾಯಿತು. ವಿರಕ್ತ ಮಠದ ಡಾ| ಶಾಂತಲಿಂಗೇಶ್ವರ ಮಹಾಸ್ವಾಮೀಜಿ ಮಾರ್ಗದರ್ಶನದಲ್ಲಿ ಈರಯ್ಯ ಪುರಾಣಿಕ, ಚನ್ನವೀರಯ್ಯ ಪುರಾಣಿಕ ಶಿವಯೋಗಿ ಸಿದ್ಧರಾಮರಿಗೆ ಪೂಜೆ ಮತ್ತು ಆರತಿ ಮಾಡಿದ ನಂತರ ದೇವಸ್ಥಾನದ ಅಧ್ಯಕ್ಷ ಚಂದ್ರಕಾಂತ ಯಗದಿ, ಗೀರಮಲ್ಲಪ್ಪ ಸಾವಳಗಿ, ಹನುಮಂತರಾವ ಪಾಟೀಲ, ಮಲ್ಲಿನಾಥ ಪಾಟೀಲ ಅವರಿಂದ ಗಂಗಾ ಮತ್ತು ಸುಗಡಿ ಪೂಜೆ ಮಾಡಲಾಯಿತು. ತದನಂತರ ಮಾನಕರಿಗಳಿಂದ ವಚನ ಮತ್ತು ಮಂಗಲಾಷ್ಟಕ ಪಠಣ ನಂತರ ಅಕ್ಷತಾ ಕಾರ್ಯಕ್ರಮ ನಡೆಯಿತು.

ಅಕ್ಷತಾ ಸಮಾರಂಭದಲ್ಲಿ ದೇವಸ್ಥಾನ ಪಂಚ ಕಮಿಟಿ ಅಧ್ಯಕ್ಷ ಚಂದ್ರಕಾಂತ ಯಗದಿ, ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಶಂಕರ ಮೇತ್ರೆ, ಮಲ್ಲಿನಾಥ ಮೇತ್ರೆ, ರಾಮಚಂದ್ರಪ್ಪ ಬಿರಾಜದಾರ, ಸಿದ್ಧಾರಾಮ ಯಗದಿ, ಶಿವಾನಂದ ಮಾಡ್ಯಾಳ, ಮಲಕಾಜಪ್ಪ ಅಲ್ಲಾಪುರ, ಗೀರಮಲ್ಲಪ್ಪ ಸಾವಳಗಿ, ಮಲ್ಲಿನಾಥ ಮಾಶಾಳ, ನಿಂಗಣ್ಣ ಸೋಳಸೆ, ಲಕ್ಷ್ಮೀಪುತ್ರ ಪಾಟೀಲ, ಶ್ರೀಮಂತಪ್ಪ ಪರಮಶೆಟ್ಟಿ, ಕಾಶಿನಾಥ ಗಾಡಿ, ಶಿವಾನಂದ ಫುಲಾರಿ, ಪಿಂಟು ಬಾಹೇರಮಠ, ವಿಶ್ವನಾಥ ಗಂಗಾವತಿ, ಸಂತೋಷ ಪೋತದಾರ, ಲಕ್ಷ್ಮೀಕಾಂತ ಕಲಶೆಟ್ಟಿ, ಬಾಬಾ ಟಕ್ಕಳಕಿ, ಗುರುಶಾಂತ ಮಾಶ್ಯಾಳೆ ಪಾಲ್ಗೊಂಡಿದ್ದರು.

ಮಂದಿರದ ಮುಖ್ಯ ಜಾಗದಲ್ಲಿ ವಿವಿಧ ಮಳಿಗೆಗಳು, ತಿಂಡಿ-ತಿನಿಸುಗಳ, ಕೃಷಿ ಉಪಕರಣ, ಸೌಂದರ್ಯ ಪ್ರಸಾದನ, ಸಾಹಿತ್ಯಗಳು, ಮಿಠಾಯಿ ಅಂಗಡಿ ಹಾಕಲಾಗಿದೆ. ಜಾತ್ರೆಗೆ ಸುತ್ತಲಿನ ಮಕ್ಕಳು-ಮಹಿಳೆಯರು, ಯುವಕ-ಯುವತಿಯರು, ವಯವೃದ್ಧರು ಆಗಮಿಸಿದ್ದರು. ಪೊಲೀಸ್‌ ಉಪನೀರಿಕ್ಷಕ ಬಾಳಾಸಾಹೇಬ ನರವಟೆ, ನಾಗನಾಥ ವಾಕಿಟೋಳೆ, ದೀಪಕ ಜಾಧವ, ಘನಶ್ಯಾಮ ಗಾವಡೆ, ಗಣೇಶ ಅಂಗುಲೆ ಭದ್ರತೆ ಒದಗಿಸಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.