ದಕ್ಷಿಣ ಭಾರತ ವಿಜ್ಞಾನ ಮೇಳದಲ್ಲಿ ಎಸ್ಆರ್ಎನ್ ಮೆಹತಾ ಸಾಧನೆ
Team Udayavani, Jan 15, 2019, 7:18 AM IST
ಕಲಬುರಗಿ: ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತ ವಿಜ್ಞಾನ ಮೇಳದಲ್ಲಿ ನಗರದ ಎಸ್.ಆರ್. ಎನ್. ಮೆಹತಾ ಶಾಲೆ ವಿದ್ಯಾರ್ಥಿಗಳು ಸಾರಿಗೆ ಮತ್ತು ಸಂಹವನ ಹಾಗೂ ತ್ಯಾಜ್ಯ ನಿರ್ವಹಣಾ ವಿಷಯ ಮಾದರಿಯಲ್ಲಿ ಮೂರನೇ ಹಾಗೂ ನಾಲ್ಕನೇ ಸ್ಥಾನ ಪಡೆದು ಶಾಲೆಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಉರ್ದು ಮತ್ತು ಇತರ ಅಲ್ಪಸಂಖ್ಯಾತರ ಭಾಷಾ ಶಾಲೆಗಳ ನಿರ್ದೇಶನಾಲಯ ಹಾಗೂ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ಹಾಗೂ ಕೇಂದ್ರ ಸರ್ಕಾರ ವತಿಯಿಂದ ಆಯೋಜಿಸಲಾಗಿದ್ದ ವಿಜ್ಞಾನ ಮೇಳದಲ್ಲಿ ಶಾಲೆ ವಿದ್ಯಾರ್ಥಿಗಳಾದ ಭಾರತಿ ಬಿ.ಎಂ, ಕೃತಿಕಾ ಜೆ.ಎಂ, ಚೈತ್ರಾ ವಿ.ಎಂ ಅತ್ಯುತ್ತಮ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆ ವಿಜ್ಞಾನ ಶಿಕ್ಷಕಿಯರಾದ ಸುಮಯ್ನಾಖಾನ್ ಮತ್ತು ದೀಪಮಾಲಾ ಸಿಂಗ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ದಕ್ಷಿಣ ಭಾರತದ 6 ರಾಜ್ಯಗಳಿಂದ ಆಗಮಿಸಿದ್ದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಯೊಂದಿಗೆ ಸೆಣಸಾಡಿ ಮೂರನೇ ಹಾಗೂ ನಾಲ್ಕನೇ ಸ್ಥಾನ ಪಡೆದಿದ್ದಾರೆ ಎಂದು ಶಾಲೆ ಪ್ರಾಚಾರ್ಯರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯರಾದ ಚಕೋರ ಮೆಹತಾ, ಉಪ ಪ್ರಾಚಾರ್ಯರಾದ ಪ್ರೀತಿ ಮೆಹತಾ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ